Home / ಕಥೆ / ಜನಪದ / ಕಥೆಯದೇ ಕಥೆ

ಕಥೆಯದೇ ಕಥೆ

ಅಳಿಯ ಇದ್ದನು. ಹಾಡಬಂದರೂ ಹಾಡು ಹೇಳುತ್ತಿದ್ದಿಲ್ಲ ; ಕಥೆ ಬಂದರೂ ಕಥೆ ಹೇಳುತ್ತಿದ್ದಿಲ್ಲ. “ಏನು ಬಂದು ಏನುಕಂಡೆವು. ಇವನೇನು ಒಂದು ಹಾಡು ಹೇಳಲಿಲ್ಲ ; ಕಥೆ ಹೇಳಲಿಲ್ಲ. ಇವನನ್ನು ಹೇಗಾದರೂ ಮಾಡಿ ಕೊಲ್ಲಬೇಕು” ಎಂದು ಕಥೆ ಹಂಚಿಕೆ ಹಾಕಿತು.

“ಮುಂಜಾನೆ ಎದ್ದಕೂಡಲೇ ಜೋಡು ಮೆಡುತ್ತಾನೆ. ಆವಾಗ ಅವನಿಗೆ ಚೇಳು ಆಗಿ ಕಡೆಯಬೇಕು. ಹೆಂಡತಿಯನ್ನು ಕರೆಯಲಿಕ್ಕೆ ಹೋಗುತ್ತಾನೆ- ಆವಾಗ ಅಗಸೆ ಅವನ ತಲೆಯಮೇಲೆ ಬೀಳುವಂತೆ ಮಾಡಬೇಕು” ಹೀಗೆನ್ನುವ ಕಥೆಯ ಮಾತನ್ನು ಆಳುಮಗ ಕೇಳಿರುತ್ತಾನೆ.

“ಎವ್ವಾ ಎವ್ವಾ, ನಾನೂ ಹೇಣತೀಗಿ ಕರಕೊಂಡು ಬರ್ತೀನಿ” ಎಂದು ಅವ್ವನಿಗೆ ಕೇಳಿ, ಆಕೆಯ ಅಪ್ಪಣೆ ಪಡೆಯುತ್ತಾನೆ, ಆ ಅಳಿಯ.

ಆವಾಗ ಆಳುಮಗ ಅನ್ನುತ್ತಾನೆ – “ನಾನು ಬರ್ತೀನಿ. ನಿನ್ನೊಡನೆ ಧಣೀ” “ಯಾತಕ್ಕ ಬರತೀಯೋ ಎತ್ತು ದನ ನೋಡಕೋತ ಇರು” ಎಂದರೂ ಕೇಳುವದಿಲ್ಲ. ಕುದುರೆಯ ಮೇಲೆ ಜೀನು ಬಿಗಿದು ಸಜ್ಜುಗೊಳಿಸುತ್ತಾನೆ. ಧಣಿಯು ಮುಂಜಾನೆ ಎದ್ದು ಜೋಡು ಮೆಡುವಷ್ಟರಲ್ಲಿ ಆಳು ಜೋಡಿನಲ್ಲಿರುವ ಚೇಳನ್ನು ನೋಡಿ ಅದನ್ನು ಕಡಿದು ಕಿಸೆಯಲ್ಲಿ ಹಾಕಿಕೊಂಡುಬಿಟ್ಟನು.

ಊರುಬಿಟ್ಟು ಹೊರಬೀಳುವಾಗ ಆಳು ಸುತ್ತು ಸುತ್ತು ದಾರಿಯಲ್ಲಿ ಕರಕೊಂಡು ಹೊರಟನು. ಅಗಸೆಯ ಎರಡೂ ದಾರಿ ಬಿಟ್ಟು, ಮೂರನೇ ಅಡ್ಡದಾರಿ ಹಿಡಿದು ಊರ ದಾಟಲಿಕ್ಕೆ ಅನುವು ಮಾಡಿಕೊಟ್ಟನು.

ಇಷ್ಟೆಲ್ಲ ಪಾರು ಆಗಿ ಅತ್ತೆಮಾವನ ಊರು ತಲುಪುತ್ತಾರೆ. ಅಲ್ಲಿ ಕೈಕಾಲು ತೊಳೆಯಲಿಕ್ಕೆ ಮನೆಯವರು ನೀರು ಕೊಟ್ಟರು; ಉಣಬಡಿಸಿದರು. ಬಹಳ ದಿನಗಳ ಮೇಲೆ ಬಂದವನೆಂದು ತಿಳಿದು ಹಾಸಿಗೆ ಮಾಡಿಕೊಟ್ಟು, ಅಳಿಯನಿಗೆ ಮಲಗಲು ಹೇಳಿದರು. ಪ್ರವಾಸದಿಂದ ದಣಿದ ಅಳಿಯ ಮಲಗಿಬಿಟ್ಟನು. ಹೆಂಡತಿಯ ನಡತೆ ಸರಿಯಾಗಿರಲಿಲ್ಲ. ಗಂಡನು ಮಲಗಿದ್ದನ್ನು ನೋಡಿದ ಕೂಡಲೇ, ದಿನಾಲು ಹೋಗುವಂತೆ ಮನೆಬಿಟ್ಟು ಹೊರಗೆ ಹೊರಟಳು. ಅವಳ ಹಿಂದಿನಿಂದ ಆಳುಮಗನೂ ಸಾಗಿದನು, ಆಕೆಗೆ ಗೊತ್ತಾಗದಂತೆ.

ಆಕೆ ನೇರವಾಗಿ ಫಕೀರನ ಮನೆಗೆ ಹೋದಳು; ಅವನನ್ನು ತೆಕ್ಕೆಹೊಡೆದಳು.

“ಇಷ್ಟೇಕೆ ತಡಮಾಡಿ ಬಂದಿ ? ಇಷ್ಟೇಕೆ ರಾತ್ರಿ ಮಾಡಿದಿ ?” ಎಂದು ಅವಳ ಮೂಗನ್ನೇ ಕೊಯ್ದು ಹಾಕಿದನು. ಆಕೆ ಅಳುತ್ತ ಕರೆಯುತ್ತ ಮನೆಯ ಕಡೆಗೆ ಹೊರಟಳು.

ಇನ್ನು ಗಂಡನ ಮನೆಗೆ ಯಾವ ಮುಖದಿಂದ ಹೋಗುವದು ?

“ಅವನೇ ಮೂಗು ಕೊಯ್ದನೆಂದು ಅಪವಾದ. ಹೊರಿಸಿದರಾಯಿತು. ತಾನೇ ಮೂಕಾಟಲೆ ಕರಕೊಂಡು ಹೋಗುತ್ತಾನೆ. ಮತ್ತು ಎಲ್ಲ ಸುರಳೀತ ನಡೀತದೆ” ಎಂದು ಲೆಕ್ಕ ಹಾಕಿದಳು. ಹಾಗೂ ಗಂಡನ ಮಗ್ಗುಲಲ್ಲಿ ಮಲಗಿಕೊಂಡಳು.

ಬೆಳಗಾಗುವ- ಮೊದಲೇ ಆಕೆಯೆದ್ದು “ನನ್ನ ಮೂಗು ಹೋಯಿತು” ಎಂದು ಬೊಬ್ಬೆ ಹೊಡೆದಳು. ಗಂಡನು ಗಾಬರಿಗೊಂಡು ಎದ್ದನು. ತಾಯಿತಂದೆ ಎಲ್ಲರೂ ಬಂದರು, “ಯಾಕೆ ಮಗಾ, ಏನಾಯ್ತು” ಎಂದು ಎಲ್ಲರೂ ಕೇಳುವವರೇ.

“ನನ್ನ ಗಂಡ ನನ್ನ ಮೂಗು ಕೊಯ್ದರೆಪ್ಪೋ” ಎಂದು ಗುಲ್ಲುಮಾಡಿದಳು.

ನೆರೆದ ಜನ ಅಳಿಯನಿಗೆ ಛೀ ಥೂ ಅಂದಿತು.

ಅಲ್ಲಿಯೇ ನಿಂತ ಆಳುಮಗ ಹೇಳಿದನು – “ನನ್ನ ಧೊರೀನೇ ಮೂಗು ಕೊಯ್ದಾನೆಂದರೆ ಅವನ ಕೈ ರಕ್ತ ಆಗಿರಬೇಕು. ಹಾಂಗ ಆಗಿಲ್ಲವಾದರೆ ಮತ್ತೆ ಯಾರಾದರೂ ಅವಳ ಮೂಗು ಕೊಯ್ದಿರಬೇಕು. ಫಕೀರ ಬಾವಾ ಸಾಹೇಬ ಅವಳ ಮೂಗು ಕೊಯ್ದಾನ.”

ಆಳು ಗಟ್ಟಿಸಿ ಹೇಳುವುದನ್ನು ಸುಳ್ಳು ಸತ್ಯ ನಿರ್ಣಯಿಸುವ ಸಲುವಾಗಿ ನೆರೆದವರೆಲ್ಲರೂ ಕಂದೀಲು ಹಿಡಕೊಂಡು ಫಕೀರನ ಮನೆಗೆ ಹೋದರು.

ಅಲ್ಲಿ ನೋಡಿದರೆ ಫಕೀರನ ಮನೆಯಲ್ಲಿ ರಕ್ತ ಬಿದ್ದಿರುತ್ತದೆ.

ಮಾವನನ್ನೂ ಮಾಲಕನ ಹೆಂಡತಿಯನ್ನೂ ಕಚೇರಿಗೆ ಕಳಿಸಲಾಯಿತು. ಆಳು ಮಗನು ಅಳಿಯನನ್ನು ಕರಕೊಂಡು ಮರಳಿ ತನ್ನೂರಿಗೆ ಹೋದನು.

ಕಲಿತ ಕಥೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡರೆ ಹೀಗೆ ಅಪವಾದ ಬರುತ್ತವೆ. ಅವು ಜನ್ಮಕ್ಕೇ ಮೂಲವಾಗುವವು. ಆದ್ದರಿಂದ ಬಂದಕಥೆ ಮಂದಿಗೆ ಹೇಳಬೇಕು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...