Home / ಕಥೆ / ಜನಪದ / ಮೂರು ಆಕಳ ಕರುಗಳು

ಮೂರು ಆಕಳ ಕರುಗಳು

ಮಾಗಿಯ ಕಾಲ. ಹಳ್ಳಿಯೊಳಗಿನ ಜನರೆಲ್ಲ ಹಗಲುಹೊತ್ತನ್ನು ಬಹುಶಃ ಹೊಲದಲ್ಲಿಯೇ ಕಳೆಯುವರು. ದನಗಳು ಸಹ ಅಡವಿಯಲ್ಲಿಯೇ ಉಳಿಯುವವು. ಹಿಂಡುವ ದನಗಳು ಮಾತ್ರ ಸಾಯಂಕಾಲಕ್ಕೆ ಮನೆಗೆ ಮರಳುವವು.

ಮಧ್ಯಾಹ್ನವಾಗಿದ್ದರೂ ಚಳಿ ಹಿಮ್ಮೆಟ್ಟಿದೆ. ಬಿಸಿಲು ಬೆಳದಿಂಗಳಾಗಿರುವಾಗ ಕಟ್ಟಿಹಾಕಿದ ಕರುಗಳನ್ನು ತುಸು ಅಡ್ಡಾಡಿ ಬರಲೆಂದು ಕುಣಿಕೆ ಉಚ್ಚಿ ಬಿಡುವುದುಂಟು. ಹಾಗೆ ಹೊರಬಿದ್ದ ಮೂರು ಆಕಳ ಕರುಗಳು ಅಗಸೆಯ ಬಳಿಯಲ್ಲಿ ಕೂಡಿದವು. ಒಂದು ಕರು ಒಕ್ಕಲಿಗರದು; ಇನ್ನೂಂದು ಉಪಾಧ್ಯರದು; ಮೂರನೇದು ಗೌಳಿಗರದು.

ಮೂರೂ ಕರುಗಳು ಜೊತೆಗೂಡಿ ಅಗಸೆಯಿಂದ ಹೊರಬಿದ್ದವು. ಮುಂದೆ ಬಚ್ಚಲ ಮೋರೆಯ ನೀರು ಹೊರಬಿದ್ದು, ಹುದಿಲುಂಟುಮಾಡಿತ್ತು. ದಾರಿಹಿಡಿದು ಸಾಗುವವರು ಅದನ್ನು ದಾಟಬೇಕಾಗುತ್ತಿತ್ತು. ಎಲ್ಲಿಂದ ಹೇಗೆ ದಾಟಬೇಕು ಎಂದು ಯೋಚಿಸದೆ ಒಕ್ಕಲಿಗರ ಕರು ಬಾಲವನ್ನು ಎತ್ತರಿಸಿ ಟಣ್ಣನೆ ಜಿಗಿದು ಆಚೆಯ ಬದಿಯಲ್ಲಿ ನಿಂತಿತು. ಅದರಂತೆ ಜಿಗಿದು ಹೋಗುವ ಪ್ರಯತ್ನ ಮಾಡಿದರೂ ಉಪಾಧ್ಯರ ಕರುವಿನ ಹಿಂಗಾಲು ಕೆಸರು ತುಳಿದವು. ಇನ್ನುಳಿದದ್ದು ಗೌಳಿಗರ ಕರು. ಅದು ಜಿಗಿದು ಹೋಗುವ ವಿಚಾರವನ್ನೇ ಮಾಡಲಿಲ್ಲ. ಪಚಲ್ ಕಚಲ್ ಎಂದು ಹುದಿಲು ತುಳಿಯುತ್ತ ಅದನ್ನು ದಾಟಿಹೋಗಿ ಮುಂದಿನ ಕರುಗಳನ್ನು ಕೂಡಿಕೊಳ್ಳಲು ಧಾವಿಸಿತು.

ಅಷ್ಟರಲ್ಲಿ ಉಪಾಧ್ಯರ ಕರು ಕೇಳಿತು ಒಕ್ಕಲಿಗರ ಕರುವಿಗೆ – “ಏನೋ- ನೀನು ಕಾಲಿಗೆ ಕೆಸರು ಸೋಂಕದಂತೆ ಆ ಹುದಿಲು ಹರಿಯನ್ನು ಟಣ್ಣನೆ ಜಿಗಿದು ಬಂದೆಯಲ್ಲ ! ಅಷ್ಟೊಂದು ಚಪಲತೆ ನಿನಗೆಲ್ಲಿಂದ ಬಂತು” ಎಂದು ಕೇಳಿತು.

ಒಕ್ಕಲಿಗರ ಕರು ಅಭಿಮಾನದಿಂದ ಹೇಳಿತು – “ನಮ್ಮವ್ವನಿಗಿರುವ ನಾಲ್ಕು ಮೊಲೆಗಳ ಹಾಲನ್ನೆಲ್ಲ ದಿನಾಲು ಎರಡೂ ಹೊತ್ತು ಕುಡಿಯುತ್ತೇನೆ. ಅದರಿಂದ ನನಗೆ ಅಷ್ಟೊಂದು ಕಸುವು ಬಂದಿದೆ.”

“ಏನಂದೀ ? ಅವ್ವನ ಮೊಲೆಯಲ್ಲಿ ಹಾಲಿರುತ್ತವೆಯೇ?” ಎಂದು ಉಪಾಧ್ಯರ ಕರು ಬೆಕ್ಕಸಬಟ್ಟು ಕೇಳಿತು.

ಅವೆರಡೂ ಕರುಗಳು ಮಾತಾಡುವುದನ್ನು ಕೇಳಿ ಇದಾವ ಹೊಸವಿಷಯ ಎಂದು ಕುತುಹಲದಿಂದ ಗೌಳಿಗರ ಕರು ಅವಸರದ ಹೆಜ್ಜೆ ಹಾಕಿ ಕೇಳಿತು – “ಅವ್ವನಿಗೆ ಮೊಲೆ ಇರುವವೇ?”

ತಮ್ಮ ಎಳೆಕರು ಬೆಲೆಯುಳ್ಳ ಬದುಕಾಗಲೆಂದು ಆಕಳನ್ನು ಹಿಂಡಿಕೊಳ್ಳದೆ ಇದ್ದಷ್ಟು ಹಾಲನ್ನು ಒಕ್ಕಲಿಗರು ಹೋರಿಗರುವಿಗೆ ಬಿಟ್ಟುಕೊಡುತ್ತಾರೆ, ಉಪಾಧ್ಯರು ಹಾಲಿನ ಸಲುವಾಗಿ ಅವುಗಳನ್ನು ಕಟ್ಟಿರುವುದರಿಂದ ಅವರು, ಕೆಚ್ಚಲೊಳಗಿನ ಹಾಲನ್ನೆಲ್ಲ ಹಿಂಡಿಕೊಂಡು ಆಮೇಲೆ ಕರುವಿಗೆ ಬಿಡುವರು. ಅದು ಒಣ ಮೊಲೆಗಳನ್ನು ಚೀಪುವದು. ಅಂತೆಯೇ ಅದು ಕೇಳಿತು – “ಅವ್ವನ ಮೊಲೆಯಲ್ಲಿ ಹಾಲಿರುವವೇ” ಎಂದು.

ಇನ್ನು ಗೌಳಿಗರಂತೂ ಹಾಲು ಮಾರುವವರು. ಆಕಳ ದೊಲೆಗಳನ್ನು ಜಗ್ಗಿ ಹಿಂಡಿಕೊಳ್ಳವರಲ್ಲದೆ, ಹಿಂದುಗಡೆ ಸಹ ಕರುವನ್ನು ಬಿಡುವದಿಲ್ಲ. ಅಂತೆಯೇ ಗೌಳಿಗರ ಕರು ಕೇಳುತ್ತದೆ – “ಅವ್ವನಿಗೆ ಮೊಲೆ ಇರುವವೇ” ಎಂದು.
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...