Home / ಲೇಖನ / ಇತರೆ / ಮಾನವನಾಗುವೆಯೋ ? ಇಲ್ಲ…..

ಮಾನವನಾಗುವೆಯೋ ? ಇಲ್ಲ…..

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ ,
ಆಗಲೇ ರಾತ್ರಿ ಹತ್ತು ಗಂಟೆಯಾಗಿ ಹೋಗಿದೆ ಬಾಡಿಗೆಗೆ ಊರಾಚೆ ಹೋಗಿದ್ದ ಟ್ಯಾಕ್ಸಿಯವನು ತನ್ನ ಮನೆಯವರ ನೆನಪಿನಲ್ಲಿ, ಬೇಗ ಮನೆ ಸೇರಬೇಕೆಂಬ ಆತುರದಲಿ ರಭಸವಾಗಿ ಕಾರು ಓಡಿಸುತ್ತಿದ್ದಾನೆ. ಜೊತೆಗೆ ಅಬ್ಬರದ ಸಂಗೀತ ಹಿಂದಿ ಚಿತ್ರಗೀತೆಯೊಂದು ಇವನನ್ನು ಮತ್ತೂ ಉದ್ವಿಗ್ನಗೊಳಿಸುತ್ತಿದೆ. ಗುನುಗುತ್ತಾ ಮೈಮರೆತು ಕಾರು ಓಡಿಸುತ್ತಿದ್ದಾನೆ. ಆಗಲೇ….. ಎದುರಿನಿಂದ ರಭಸವಾಗಿ ಹರಿದು ಬರುತ್ತಿರುವ ಲಾರಿಯನ್ನು ಇವನು ನೋಡಿದ್ದು ತಕ್ಷಣ ಕಾರನ್ನು ಪಕ್ಕಕ್ಕೆ ತಿರುಗಿಸಿಕೊಳ್ಳುತ್ತಾನೆ. ಆಗ ರಸ್ತೆಯಂಚಿನಲ್ಲಿ ನಿಧಾನಕ್ಕೆ ಸಾಗಿದ್ದ ಸೈಕಲ್ ಸವಾರನ ಮೇಲೆ ಇವನ ಕಾರು ಹರಿದು ಮುಂದೆ ಹೋಗುತ್ತದೆ. ಆ ಚೀರಿದವನ ಆರ್ತನಾದ ಕರುಳು ಬಿರಿಯುವಂತೆ ಕೇಳಿಬರುತ್ತದೆ.

ಕ್ಷಣಕಾಲ ಇವನಿಗೆ ದಿಗ್ಬ್ರಾಂತಿ ಛೇ. ಇದೇನಾಗಿಹೋಯ್ತು. ತಾನು ಡ್ರೈವಿಂಗ್ ಕಲಿತ ದಿನದಿಂದ ಒಂದೂ ಅಪಘಾತ ಮಾಡಿಲ್ಲ. ಈಗ…. ಈಗ ತಾನೇನು
ಮಾಡಲಿ? ಹಿಂತಿರುಗಿ ಹೋಗಿ ಏನಾಗಿದೆ ನೋಡಲೇ ? ಅವನು ಬದುಕಿದ್ದಾನೋ ಸತ್ತಿದ್ದಾನೋ? ಅವನು ಬದುಕಿದ್ದರೆ ಅವನನ್ನು ಈಗ ಉಳಿಸುವ ಹೊಣೆ ತನ್ನದಲ್ಲವೇ? ಅಥವಾ ಸತ್ತಿದ್ದರೆ ? ಅದಕ್ಕೂ ತಾನೆ ಜವಾಬ್ದಾರ ! ಒಂದು ಮನಸ್ಸು ಹೀಗೆ ಯೋಚಿಸಿದರೆ, ಇನ್ನೊಂದು ಮನಸ್ಸು ಈ ರಾತ್ರಿಯಲ್ಲಿ ನನ್ನ ಕಾರಿನಿಂದ ಈ ಅಪಘಾತವನ್ನು ಯಾರು ನೋಡಿರುತ್ತಾರೆ ? ಏನೂ ಆಗಿಯೇ ಇಲ್ಲವೆಂಬಂತೆ ಮನೆಗೆ ಹೋಗಿ ನಿದ್ರಿಸಿಬಿಟ್ಟರೆ ಯಾರಿಗೆ ಗೊತ್ತಾಗುತ್ತದೆ ? ಈ ರಾತ್ರಿಯಲ್ಲಿ ನಾನೇ ಅಪಘಾತ ಮಾಡಿದ್ದು ಎನ್ನುವುದಕ್ಕೆ ಸಾಕ್ಷಿ ಯಾರಿದ್ದಾರೆ ? ಎಂದು ಯೋಚಿಸುತ್ತದೆ. ಆದರೆ….ನಿಜ ನಾನು ಸೈಕಲ್ಲಿನವನಿಗೆ ಢಿಕ್ಕಿ ಹೊಡೆದುದನ್ನು ನೋಡಿದ ಸಾಕ್ಷಿಗಳ್ಯಾರೂ ಇಲ್ಲ. ಹಾಗೆಂದು ಅದು ಅಪರಾಧವೇ ಅಲ್ಲವೇ ? ಯಾವ ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೂ ನನ್ನ ಮನಸ್ಸಾಕ್ಷಿ ಇದೆಯಲ್ಲವೇ ? ಆಗ ತಾನು ಬದಕಿದ್ದರೂ ಸತ್ತಂತೆ ತಾನೇ ? ಅದಕ್ಕೆ ಬದಲು ನಾನು ಮಾಡಿದ ಈ ತಪ್ಪನ್ನು ಒಪ್ಪಿಕೊಂಡು ಬಂದುದನ್ನು ಧೈರ್ಯದಿಂದ ಎದುರಿಸುವುದೇ ನಿಜವಾದ ಧರ್ಮವಲ್ಲವೇ? ಇಂತಹುದೇ ಮಾನವ-ದಾನವ ಚಿಂತನೆಗಳಂದ ಅವನ ಮನ ಕೆಲ ಹೊತ್ತು ಹೊಯ್ದಾಡುತ್ತದೆ.

ಕೊನೆಗೂ ಅವನ ಮನದಲ್ಲಿದ್ದ ಮಾನವ, ದಾನವನನ್ನು ಮೆಟ್ಟಿ ಗೆಲ್ಲುತ್ತಾನೆ. ಅವನು ಕಾರನ್ನು ಹಿಂತಿರುಗಿಸಿಕೊಳ್ಳುತ್ತಾನೆ. ಅವನಿಗೆ ಈಗ ಯಾವ ಭಯ, ಗೊಂದಲವೂ ಇಲ್ಲ.  ಸತ್ಯದ ಹಾದಿಯಲ್ಲಿದ್ದೇನೆ.  ಮಾಡಿದ ಪಾಪಕ್ಕೆ ತಾನೇ ಹೊಣೆ ಎಂದರಿತು ಪರಿಸ್ಥಿತಿ ಎದುರಿಸಲು ತಯಾರಾಗಿದ್ದಾನೆ. ಬಂದುದೆಲ್ಲವ ಎದುರಿಸುತ್ತೇನೆ ಎಂದುಕೊಳ್ಳುತ್ತಾನೆ. ಕಾರು ರಕ್ತದ ಮಡುವಿನಲ್ಲಿ ಬಿದ್ದು ಹೊರಳಾಡುತ್ತಿರುವ ಸೈಕಲ್ ಸವಾರನ ಎದುರು ನಿಲ್ಲುತ್ತದೆ. ಅದರಿಂದ ಇಳಿದ ಇವನು ಅವಸರದಿಂದ ಅವನೆಡೆಗೆ ಸಾಗಿ ಅವನನ್ನೆತ್ತಲು ಕೈ ಮುಂದೆ ಚಾಚುತ್ತಾನೆ. ಮತ್ತು…..

ಸಖಿ, ನಿನಗೂ ದಾನವನನ್ನು ಮೆಟ್ಟಿ ಮಾನವ ಗೆದ್ದ ಯಾವುದೋ ಘಟನೆ ನೆನಪಾದಂತಿದೆ ? ನನಗೂ ಹೇಳುತ್ತೀಯ ತಾನೇ ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...