ಮಾನವನಾಗುವೆಯೋ ? ಇಲ್ಲ…..

ಮಾನವನಾಗುವೆಯೋ ? ಇಲ್ಲ…..

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ ,
ಆಗಲೇ ರಾತ್ರಿ ಹತ್ತು ಗಂಟೆಯಾಗಿ ಹೋಗಿದೆ ಬಾಡಿಗೆಗೆ ಊರಾಚೆ ಹೋಗಿದ್ದ ಟ್ಯಾಕ್ಸಿಯವನು ತನ್ನ ಮನೆಯವರ ನೆನಪಿನಲ್ಲಿ, ಬೇಗ ಮನೆ ಸೇರಬೇಕೆಂಬ ಆತುರದಲಿ ರಭಸವಾಗಿ ಕಾರು ಓಡಿಸುತ್ತಿದ್ದಾನೆ. ಜೊತೆಗೆ ಅಬ್ಬರದ ಸಂಗೀತ ಹಿಂದಿ ಚಿತ್ರಗೀತೆಯೊಂದು ಇವನನ್ನು ಮತ್ತೂ ಉದ್ವಿಗ್ನಗೊಳಿಸುತ್ತಿದೆ. ಗುನುಗುತ್ತಾ ಮೈಮರೆತು ಕಾರು ಓಡಿಸುತ್ತಿದ್ದಾನೆ. ಆಗಲೇ….. ಎದುರಿನಿಂದ ರಭಸವಾಗಿ ಹರಿದು ಬರುತ್ತಿರುವ ಲಾರಿಯನ್ನು ಇವನು ನೋಡಿದ್ದು ತಕ್ಷಣ ಕಾರನ್ನು ಪಕ್ಕಕ್ಕೆ ತಿರುಗಿಸಿಕೊಳ್ಳುತ್ತಾನೆ. ಆಗ ರಸ್ತೆಯಂಚಿನಲ್ಲಿ ನಿಧಾನಕ್ಕೆ ಸಾಗಿದ್ದ ಸೈಕಲ್ ಸವಾರನ ಮೇಲೆ ಇವನ ಕಾರು ಹರಿದು ಮುಂದೆ ಹೋಗುತ್ತದೆ. ಆ ಚೀರಿದವನ ಆರ್ತನಾದ ಕರುಳು ಬಿರಿಯುವಂತೆ ಕೇಳಿಬರುತ್ತದೆ.

ಕ್ಷಣಕಾಲ ಇವನಿಗೆ ದಿಗ್ಬ್ರಾಂತಿ ಛೇ. ಇದೇನಾಗಿಹೋಯ್ತು. ತಾನು ಡ್ರೈವಿಂಗ್ ಕಲಿತ ದಿನದಿಂದ ಒಂದೂ ಅಪಘಾತ ಮಾಡಿಲ್ಲ. ಈಗ…. ಈಗ ತಾನೇನು
ಮಾಡಲಿ? ಹಿಂತಿರುಗಿ ಹೋಗಿ ಏನಾಗಿದೆ ನೋಡಲೇ ? ಅವನು ಬದುಕಿದ್ದಾನೋ ಸತ್ತಿದ್ದಾನೋ? ಅವನು ಬದುಕಿದ್ದರೆ ಅವನನ್ನು ಈಗ ಉಳಿಸುವ ಹೊಣೆ ತನ್ನದಲ್ಲವೇ? ಅಥವಾ ಸತ್ತಿದ್ದರೆ ? ಅದಕ್ಕೂ ತಾನೆ ಜವಾಬ್ದಾರ ! ಒಂದು ಮನಸ್ಸು ಹೀಗೆ ಯೋಚಿಸಿದರೆ, ಇನ್ನೊಂದು ಮನಸ್ಸು ಈ ರಾತ್ರಿಯಲ್ಲಿ ನನ್ನ ಕಾರಿನಿಂದ ಈ ಅಪಘಾತವನ್ನು ಯಾರು ನೋಡಿರುತ್ತಾರೆ ? ಏನೂ ಆಗಿಯೇ ಇಲ್ಲವೆಂಬಂತೆ ಮನೆಗೆ ಹೋಗಿ ನಿದ್ರಿಸಿಬಿಟ್ಟರೆ ಯಾರಿಗೆ ಗೊತ್ತಾಗುತ್ತದೆ ? ಈ ರಾತ್ರಿಯಲ್ಲಿ ನಾನೇ ಅಪಘಾತ ಮಾಡಿದ್ದು ಎನ್ನುವುದಕ್ಕೆ ಸಾಕ್ಷಿ ಯಾರಿದ್ದಾರೆ ? ಎಂದು ಯೋಚಿಸುತ್ತದೆ. ಆದರೆ….ನಿಜ ನಾನು ಸೈಕಲ್ಲಿನವನಿಗೆ ಢಿಕ್ಕಿ ಹೊಡೆದುದನ್ನು ನೋಡಿದ ಸಾಕ್ಷಿಗಳ್ಯಾರೂ ಇಲ್ಲ. ಹಾಗೆಂದು ಅದು ಅಪರಾಧವೇ ಅಲ್ಲವೇ ? ಯಾವ ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೂ ನನ್ನ ಮನಸ್ಸಾಕ್ಷಿ ಇದೆಯಲ್ಲವೇ ? ಆಗ ತಾನು ಬದಕಿದ್ದರೂ ಸತ್ತಂತೆ ತಾನೇ ? ಅದಕ್ಕೆ ಬದಲು ನಾನು ಮಾಡಿದ ಈ ತಪ್ಪನ್ನು ಒಪ್ಪಿಕೊಂಡು ಬಂದುದನ್ನು ಧೈರ್ಯದಿಂದ ಎದುರಿಸುವುದೇ ನಿಜವಾದ ಧರ್ಮವಲ್ಲವೇ? ಇಂತಹುದೇ ಮಾನವ-ದಾನವ ಚಿಂತನೆಗಳಂದ ಅವನ ಮನ ಕೆಲ ಹೊತ್ತು ಹೊಯ್ದಾಡುತ್ತದೆ.

ಕೊನೆಗೂ ಅವನ ಮನದಲ್ಲಿದ್ದ ಮಾನವ, ದಾನವನನ್ನು ಮೆಟ್ಟಿ ಗೆಲ್ಲುತ್ತಾನೆ. ಅವನು ಕಾರನ್ನು ಹಿಂತಿರುಗಿಸಿಕೊಳ್ಳುತ್ತಾನೆ. ಅವನಿಗೆ ಈಗ ಯಾವ ಭಯ, ಗೊಂದಲವೂ ಇಲ್ಲ.  ಸತ್ಯದ ಹಾದಿಯಲ್ಲಿದ್ದೇನೆ.  ಮಾಡಿದ ಪಾಪಕ್ಕೆ ತಾನೇ ಹೊಣೆ ಎಂದರಿತು ಪರಿಸ್ಥಿತಿ ಎದುರಿಸಲು ತಯಾರಾಗಿದ್ದಾನೆ. ಬಂದುದೆಲ್ಲವ ಎದುರಿಸುತ್ತೇನೆ ಎಂದುಕೊಳ್ಳುತ್ತಾನೆ. ಕಾರು ರಕ್ತದ ಮಡುವಿನಲ್ಲಿ ಬಿದ್ದು ಹೊರಳಾಡುತ್ತಿರುವ ಸೈಕಲ್ ಸವಾರನ ಎದುರು ನಿಲ್ಲುತ್ತದೆ. ಅದರಿಂದ ಇಳಿದ ಇವನು ಅವಸರದಿಂದ ಅವನೆಡೆಗೆ ಸಾಗಿ ಅವನನ್ನೆತ್ತಲು ಕೈ ಮುಂದೆ ಚಾಚುತ್ತಾನೆ. ಮತ್ತು…..

ಸಖಿ, ನಿನಗೂ ದಾನವನನ್ನು ಮೆಟ್ಟಿ ಮಾನವ ಗೆದ್ದ ಯಾವುದೋ ಘಟನೆ ನೆನಪಾದಂತಿದೆ ? ನನಗೂ ಹೇಳುತ್ತೀಯ ತಾನೇ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಷ್-ಪುಲ್
Next post ಕೂಸು ಎಲ್ಲಿ ಹೋಯಿತೇ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ಅಜ್ಜಿ-ಮೊಮ್ಮಗ

    ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? "ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು" ಅಂತ. "ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…

cheap jordans|wholesale air max|wholesale jordans|wholesale jewelry|wholesale jerseys