Home / ಲೇಖನ / ಇತರೆ / ಮಾನವನಾಗುವೆಯೋ ? ಇಲ್ಲ…..

ಮಾನವನಾಗುವೆಯೋ ? ಇಲ್ಲ…..

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ ,
ಆಗಲೇ ರಾತ್ರಿ ಹತ್ತು ಗಂಟೆಯಾಗಿ ಹೋಗಿದೆ ಬಾಡಿಗೆಗೆ ಊರಾಚೆ ಹೋಗಿದ್ದ ಟ್ಯಾಕ್ಸಿಯವನು ತನ್ನ ಮನೆಯವರ ನೆನಪಿನಲ್ಲಿ, ಬೇಗ ಮನೆ ಸೇರಬೇಕೆಂಬ ಆತುರದಲಿ ರಭಸವಾಗಿ ಕಾರು ಓಡಿಸುತ್ತಿದ್ದಾನೆ. ಜೊತೆಗೆ ಅಬ್ಬರದ ಸಂಗೀತ ಹಿಂದಿ ಚಿತ್ರಗೀತೆಯೊಂದು ಇವನನ್ನು ಮತ್ತೂ ಉದ್ವಿಗ್ನಗೊಳಿಸುತ್ತಿದೆ. ಗುನುಗುತ್ತಾ ಮೈಮರೆತು ಕಾರು ಓಡಿಸುತ್ತಿದ್ದಾನೆ. ಆಗಲೇ….. ಎದುರಿನಿಂದ ರಭಸವಾಗಿ ಹರಿದು ಬರುತ್ತಿರುವ ಲಾರಿಯನ್ನು ಇವನು ನೋಡಿದ್ದು ತಕ್ಷಣ ಕಾರನ್ನು ಪಕ್ಕಕ್ಕೆ ತಿರುಗಿಸಿಕೊಳ್ಳುತ್ತಾನೆ. ಆಗ ರಸ್ತೆಯಂಚಿನಲ್ಲಿ ನಿಧಾನಕ್ಕೆ ಸಾಗಿದ್ದ ಸೈಕಲ್ ಸವಾರನ ಮೇಲೆ ಇವನ ಕಾರು ಹರಿದು ಮುಂದೆ ಹೋಗುತ್ತದೆ. ಆ ಚೀರಿದವನ ಆರ್ತನಾದ ಕರುಳು ಬಿರಿಯುವಂತೆ ಕೇಳಿಬರುತ್ತದೆ.

ಕ್ಷಣಕಾಲ ಇವನಿಗೆ ದಿಗ್ಬ್ರಾಂತಿ ಛೇ. ಇದೇನಾಗಿಹೋಯ್ತು. ತಾನು ಡ್ರೈವಿಂಗ್ ಕಲಿತ ದಿನದಿಂದ ಒಂದೂ ಅಪಘಾತ ಮಾಡಿಲ್ಲ. ಈಗ…. ಈಗ ತಾನೇನು
ಮಾಡಲಿ? ಹಿಂತಿರುಗಿ ಹೋಗಿ ಏನಾಗಿದೆ ನೋಡಲೇ ? ಅವನು ಬದುಕಿದ್ದಾನೋ ಸತ್ತಿದ್ದಾನೋ? ಅವನು ಬದುಕಿದ್ದರೆ ಅವನನ್ನು ಈಗ ಉಳಿಸುವ ಹೊಣೆ ತನ್ನದಲ್ಲವೇ? ಅಥವಾ ಸತ್ತಿದ್ದರೆ ? ಅದಕ್ಕೂ ತಾನೆ ಜವಾಬ್ದಾರ ! ಒಂದು ಮನಸ್ಸು ಹೀಗೆ ಯೋಚಿಸಿದರೆ, ಇನ್ನೊಂದು ಮನಸ್ಸು ಈ ರಾತ್ರಿಯಲ್ಲಿ ನನ್ನ ಕಾರಿನಿಂದ ಈ ಅಪಘಾತವನ್ನು ಯಾರು ನೋಡಿರುತ್ತಾರೆ ? ಏನೂ ಆಗಿಯೇ ಇಲ್ಲವೆಂಬಂತೆ ಮನೆಗೆ ಹೋಗಿ ನಿದ್ರಿಸಿಬಿಟ್ಟರೆ ಯಾರಿಗೆ ಗೊತ್ತಾಗುತ್ತದೆ ? ಈ ರಾತ್ರಿಯಲ್ಲಿ ನಾನೇ ಅಪಘಾತ ಮಾಡಿದ್ದು ಎನ್ನುವುದಕ್ಕೆ ಸಾಕ್ಷಿ ಯಾರಿದ್ದಾರೆ ? ಎಂದು ಯೋಚಿಸುತ್ತದೆ. ಆದರೆ….ನಿಜ ನಾನು ಸೈಕಲ್ಲಿನವನಿಗೆ ಢಿಕ್ಕಿ ಹೊಡೆದುದನ್ನು ನೋಡಿದ ಸಾಕ್ಷಿಗಳ್ಯಾರೂ ಇಲ್ಲ. ಹಾಗೆಂದು ಅದು ಅಪರಾಧವೇ ಅಲ್ಲವೇ ? ಯಾವ ಪ್ರತ್ಯಕ್ಷ ಸಾಕ್ಷಿ ಇಲ್ಲದಿದ್ದರೂ ನನ್ನ ಮನಸ್ಸಾಕ್ಷಿ ಇದೆಯಲ್ಲವೇ ? ಆಗ ತಾನು ಬದಕಿದ್ದರೂ ಸತ್ತಂತೆ ತಾನೇ ? ಅದಕ್ಕೆ ಬದಲು ನಾನು ಮಾಡಿದ ಈ ತಪ್ಪನ್ನು ಒಪ್ಪಿಕೊಂಡು ಬಂದುದನ್ನು ಧೈರ್ಯದಿಂದ ಎದುರಿಸುವುದೇ ನಿಜವಾದ ಧರ್ಮವಲ್ಲವೇ? ಇಂತಹುದೇ ಮಾನವ-ದಾನವ ಚಿಂತನೆಗಳಂದ ಅವನ ಮನ ಕೆಲ ಹೊತ್ತು ಹೊಯ್ದಾಡುತ್ತದೆ.

ಕೊನೆಗೂ ಅವನ ಮನದಲ್ಲಿದ್ದ ಮಾನವ, ದಾನವನನ್ನು ಮೆಟ್ಟಿ ಗೆಲ್ಲುತ್ತಾನೆ. ಅವನು ಕಾರನ್ನು ಹಿಂತಿರುಗಿಸಿಕೊಳ್ಳುತ್ತಾನೆ. ಅವನಿಗೆ ಈಗ ಯಾವ ಭಯ, ಗೊಂದಲವೂ ಇಲ್ಲ.  ಸತ್ಯದ ಹಾದಿಯಲ್ಲಿದ್ದೇನೆ.  ಮಾಡಿದ ಪಾಪಕ್ಕೆ ತಾನೇ ಹೊಣೆ ಎಂದರಿತು ಪರಿಸ್ಥಿತಿ ಎದುರಿಸಲು ತಯಾರಾಗಿದ್ದಾನೆ. ಬಂದುದೆಲ್ಲವ ಎದುರಿಸುತ್ತೇನೆ ಎಂದುಕೊಳ್ಳುತ್ತಾನೆ. ಕಾರು ರಕ್ತದ ಮಡುವಿನಲ್ಲಿ ಬಿದ್ದು ಹೊರಳಾಡುತ್ತಿರುವ ಸೈಕಲ್ ಸವಾರನ ಎದುರು ನಿಲ್ಲುತ್ತದೆ. ಅದರಿಂದ ಇಳಿದ ಇವನು ಅವಸರದಿಂದ ಅವನೆಡೆಗೆ ಸಾಗಿ ಅವನನ್ನೆತ್ತಲು ಕೈ ಮುಂದೆ ಚಾಚುತ್ತಾನೆ. ಮತ್ತು…..

ಸಖಿ, ನಿನಗೂ ದಾನವನನ್ನು ಮೆಟ್ಟಿ ಮಾನವ ಗೆದ್ದ ಯಾವುದೋ ಘಟನೆ ನೆನಪಾದಂತಿದೆ ? ನನಗೂ ಹೇಳುತ್ತೀಯ ತಾನೇ ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...