ಗುರುಗಳು ಇಲ್ಲಿದ್ದಾರೆ

ಗುರುಗಳು ಇಲ್ಲಿದ್ದಾರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಪ್ರಿಯ ಸಖಿ,

ಶಾಲೆಯಲ್ಲಿ ಪಾಠ ಕಲಿಸುವವರನ್ನು ತಾವು ಶಿಕ್ಷಕರೆನ್ನುತ್ತೇವೆ. ಹಾಗೇ ಬದುಕಿನ ಪಾಠಗಳನ್ನು ಕಲಿಸುವವರು ಗುರುಗಳಾಗುತ್ತಾರೆ. ಹೀಗಾಗಿಯೇ ಶಿಕ್ಷಕರೆಲ್ಲರೂ ಗುರುಗಳಾಗಲು ಸಾಧ್ಯವಿಲ್ಲ. ಶಿಕ್ಷಕ, ಬುದ್ಧಿಗೆ ಕಸರತ್ತು ನೀಡುವ ಜ್ಞಾನವನ್ನು ತುಂಬುವ ವಿದ್ಯೆಯನ್ನು ಹೇಳಿಕೊಡುತ್ತಾನೆ. ಆದರೆ ಗುರು ಮನಸ್ಸನ್ನು ಅರಳಿಸುವ, ಆತ್ಮೋನ್ನತಿಯೆಡೆಗೆ ಕರೆದೊಯ್ಯುವ ವಿವೇಕವನ್ನು ಎಚ್ಚರಿಸುತ್ತಾನೆ. ಹೀಗಾಗಿಯೇ ಶಿಕ್ಷಕ ಹೇಳಿಕೊಟ್ಟ ಭೌತಶಾಸ್ತ್ರ, ಗಣಿತ, ಸಮಾಜಶಾಸ್ತ್ರ ನಮಗೆ ಮರೆತು ಹೋದರೂ ಗುರುಗಳು ಹೇಳಿಕೊಟ್ಟ ವಿವೇಕದ ಪಾಠ ಮರೆಯುವುದಿಲ್ಲ.

ಸಖಿ, ನೀನು ಯೋಚಿಸುತ್ತಿರಬಹುದು, ಬದುಕಿನ ಪಾಠ ಕಲಿಸುವ ಇಂತಹ ಗುರುಗಳು ಯಾರು ಎಂದು ನಿಜ, ಅಂತಹ ಆದರ್ಶ ಗುಣಗಳು ಎಲ್ಲ ವ್ಯಕ್ತಿಗಳಲ್ಲೂ ಇದೆ. ಆದರೆ ಅದನ್ನು ಕಾಣುವ ಕಣ್ಣು ನಮಗಿರಬೇಕು. ಆಗ…. ತನ್ನ ಕೆಲಸಕ್ಕೆ ಒಂದು ದಿನವೂ ಚಕ್ಕರ್ ಹೊಡೆಯದೇ ಸಮಯಕ್ಕೆ ಸರಿಯಾಗಿ ಬಂದು ಕಾಲೇಜಿನ ಬಾಗಿಲು ತೆರೆಯುವ ಕಾಲೇಜಿನ ಜವಾನ ಗಂಗಯ್ಯನ ಕರ್ತವ್ಯ ಪ್ರಜ್ಞೆ ಸಮಯ ಪರಿಪಾಲನೆಯಲ್ಲೂ ಗುರುವನ್ನು ಕಾಣಲು ಸಾಧ್ಯ.

ಸಾಲವಾಗಿ ತೆಗೆದುಕೊಂಡು ಹೋಗಿದ್ದ ಹತ್ತು ರೂಪಾಯಿಯನ್ನು ಹೇಳಿದ ದಿನ ಸರಿಯಾಗಿ ಹಿಂತಿರುಗಿಸುವ ಜಾಡಮಾಲಿಯ ಪ್ರಾಮಾಣಿಕತೆಯಲ್ಲೂ ಗುರುವನ್ನು ಕಾಣಲು ಸಾಧ್ಯ. ತನ್ನ ಶೋಷಣೆಯ ವಿರುದ್ಧ ಸದಾ ಹೋರಾಡುವ ಕೆಲಸದಾಳು ಮೇರಿಯಮ್ಮನ ಅಂತ್ಯದಲ್ಲೂ ಗುರುವನ್ನು ಕಾಣಲು ಸಾಧ್ಯ. ನೀನು ಮಾತ್ರ ಸುಳ್ಳು ಹೇಳಬಹುದು. ನಾನು ಮಾತ್ರ ಹೇಳಬಾರದು ಎನ್ನುತ್ತೀಯಲ್ಲಾ ? ಎಂದು ಮುಗ್ಧವಾಗಿ ಪ್ರಶ್ನಿಸುವ ಮಗುವಿನ ಸತ್ಯದ ಮಾತಿನಲ್ಲೂ ಗುರುವನ್ನು ಕಾಣಲು ಸಾಧ್ಯ. ನಾವು ಗಡಿಬಿಡಿಯಲ್ಲಿ ಹೆಚ್ಚಾಗಿ ಕೊಟ್ಟಿದ್ದ ಹಣವನ್ನು ಹಿಂತಿರುಗಿಸುವ ತರಕಾರಿ ಮಾರುವವನ ಪ್ರಾಮಾಣಿಕತೆಯಲ್ಲೂ ಗುರುವನ್ನು ಕಾಣಲು ಸಾಧ್ಯ.

ಈ ಕಾಲದಲ್ಲಿ ನಮಗೆ ಯಾವ ಆದರ್ಶ ವ್ಯಕ್ತಿಯೂ ಕಾಣಸಿಗುವುದಿಲ್ಲ ಎಂದು ಗೊಣಗುತ್ತಿರುತ್ತೇವೆ. ಆದರೆ ತಮ್ಮ ಸಣ್ಣ ಸಣ್ಣ ಕೆಲಸದಲ್ಲೂ ಆದರ್ಶ ಗುಣಗಳನ್ನು ಹೊಂದಿರುವ ನಮಗೆ ನಿತ್ಯ ಪಾಠ ಕಲಿಸುವ ಗುರುಗಳು ನೂರಾರು ಜನರು ಕಾಣಸಿಗುತ್ತಾರೆ. ಅವರನ್ನು ಗುರುಗಳೆಂದು ನಾವು ಪೂಜಿಸಬೇಕಿಲ್ಲ. ಆದರೆ ಅವರಿಂದ ಬದುಕಿನ ಪಾಠಗಳನ್ನೂ, ನೈತಿಕ ಮೌಲ್ಯಗಳನ್ನೂ, ವಿವೇಕವನ್ನೂ, ವೈಚಾರಿಕ ಪ್ರಜ್ಞೆಯನ್ನು ಕಲಿತು, ಬೆಳೆಸಿಕೊಂಡು, ರೂಢಿಸಿಕೊಂಡರೆ ಅದಕ್ಕಿಂತ ಸಾರ್ಥಕತೆ ಬೇರೇನಿದೆ ?

ಸಖಿ, ಸಣ್ಣ ವ್ಯಕ್ತಿಗಳಲ್ಲೂ, ಸಣ್ಣ ಸಂಗತಿಗಳಲ್ಲೂ, ಸಣ್ಣ ಘಟನೆಗಳಲ್ಲೂ ನಾವು ಸದಾ ಗುರುಗಳನ್ನು ಕಾಣಬಹುದು ಪಾಠಗಳನ್ನು ಕಲಿಯಬಹುದು. ಇಂತಹ ಗುರುಗಳನ್ನು ಕಾಣಲು ಮನಸ್ಸನ್ನು ಇಂದಿನಿಂದಲೇ ತೆರೆದಿಡೋಣ ಆಲ್ಲವೇ ? ನಿನ್ನ ಬದುಕಿನಲ್ಲೂ ಇಂತಹ ಗುರುಗಳು ಅನೇಕರಿರಬಹುದಲ್ಲವೇ ? ನೆನಪಾದರೆ ಮರೆಯದೇ ತಿಳಿಸು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಧ್ಯ ವಯಸ್ಸು
Next post ಕಪ್ಪು ಸೀಮೆ

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಅಜ್ಜಿಯ ಪ್ರೇಮ

    ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

cheap jordans|wholesale air max|wholesale jordans|wholesale jewelry|wholesale jerseys