Home / ಬಾಲ ಚಿಲುಮೆ / ಕವಿತೆ / ಕಿಟ್ಟು ಮತ್ತು ಬಿರ್ಜು

ಕಿಟ್ಟು ಮತ್ತು ಬಿರ್ಜು

ಒಂದು ದಿನ ಕಿಟ್ಟು ಮನೆಯಲ್ಲೆ ಕೂತಿದ್ದ,
ಮನೆಬೆಕ್ಕು ಬಿರ್ಜುವಿನ ತಲೆ ಸವರುತಿದ್ದ
ತನ್ನ ಕಷ್ಟವ ನೆನೆದು ಅವನಿಗಳು ಬಂತು
“ಯಾಕಳುವೆ ಕಿಟ್ಟು?” ಅಂತ ಬಿರ್ಜು ಕೇಳ್ತು

“ಬಿರ್ಜು ನೀ ಎಷ್ಟೊಂದು ಅದೃಷ್ಟವಂತ!
ಗೊತ್ತಿಲ್ಲ ನಿನಗೆ ಸ್ಕೂಲೆಂದರೇನಂತ,
ನಾನು ದಿನವೂ ಸ್ಕೂಲಿಗ್ಹೋಗಲೇಬೇಕು.
ಮನೆಯಲ್ಲಿ ಹೋಂ ವರ್ಕ್ ಮಾಡಲೇಬೇಕು”.

ಈ ಮಾತನೊಪ್ಪದೆ ಬಿರ್ಜು ಹೀಗಂತು:

“ಕಿಟ್ಟು ನಿಂಗೊತ್ತಿಲ್ಲ ನಾ ಪಡುವ ಕಷ್ಟ,
ಯಾರು ಕೇಳುವರು ನನ್ನಂಥವರ ಇಷ್ಟ?
ನಿನಗೊ ಬಣ್ಣದ ಅಂಗಿ, ಚಡ್ಡಿ, ಗರಿಟೋಪಿ
ಕಾಚ ಕೂಡ ಇಲ್ಲ ನಾನೆಂಥ ಪಾಪಿ!”

ಬಿರ್ಜು ಮಾತಿಗೆ ತಿರುಗಿ ಹೇಳಿದನು ಕಿಟ್ಟು:

“ಅಂಗಡಿಗೆ ಹೋಗಿ ಬಾ ಅಂತಾರೆ ಅಮ್ಮ,
ಹೋಗಲ್ಲ ಅಂದರೆ ಒದಿತಾರೆ ಅಣ್ಣ;
ಆಟಕ್ಕೆ ಎಷ್ಟೂನು ಪುರಸೊತ್ತೆ ಇಲ್ಲ,
ನಿನಗೊ ಕೇಳುವರಿಲ್ಲ ಇಡಿಯ ದಿನವೆಲ್ಲ”.

ನಕ್ಕು ಹೇಳಿತು ಬಿರ್ಜು ಕಿಟ್ಟು ಕಡೆ ತಿರುಗಿ:

“ನನಗೆ ಎಲ್ಲಿದ್ದಾರೆ ಪ್ರೀತಿಸುವ ಅಮ್ಮ,
ಒದ್ದರೂ ಚಿಂತಿಲ್ಲ, ಇರಬೇಕು ಅಣ್ಣ;
ಓದಿ ನೀ ಮುಂದಕ್ಕೆ ಆಫೀಸರಾಗ್ತಿ
ನನಗೊ ಬಾಳೆಲ್ಲ ಇಲಿ ಹಿಡಿಯುವುದೆ ಪ್ರಾಪ್ತಿ!

ಈಗೇನೊ ನನ್ನ ಜೊತೆ ಆಟವಾಡ್ತೀಯ,
ನನ್ನ ಬಿರ್ಜೂ ಅಂತ ಮುದ್ದು ಮಾಡ್ತೀಯ;
ನಿನ್ನ ಹಾಸಿಗೆಯಲ್ಲೆ ಎಳೆದಪ್ಪಿಕೊಂಡು
ಮೈಯ ಸವರುತ್ತಲೇ ನಿದ್ದೆ ಮಾಡ್ತೀಯ

ಮುಂದೆ ದೊಡ್ಡವನಾಗ್ತಿ, ಇಂಗ್ಲೀಷು ಓದಿ
ಕಾರನ್ನು ನಡೆಸೊ ಸಾಹೇಬನಾಗ್ತೀಯ;
ಮನೆಗೆ ಬಂದಾಗ ನಾ ಓಡೋಡಿ ಬಂದ್ರೆ
ಅಡ್ಡ ಬರ್‍ತೀಯ ಶನಿ ಅಂತ ಒದಿತೀಯ”

ಬಿರ್ಜು ಮಾತನು ಕೇಳಿ ಅಳು ಬಂದು ಕಿಟ್ಟು
ಬಾಚಿ ಮುದ್ದಿಸಿ ನುಡಿದ “ಇಲ್ಲ ಕಣೊ ಪುಟ್ಟು,
ನಿನ್ನ ನಾ ಎಂದೂನು ಒದಿಯೋಲ್ಲ ಬಿರ್ಜು
ಕಡೆತನಕ ನನ್ನ ಜೊತೆ ಇದ್ದು ಬಿಡು ಮುದ್ದು.”
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...