Home / ಕವನ / ಕವಿತೆ / ನನ್‌ ಲಚ್ಮಿ

ನನ್‌ ಲಚ್ಮಿ

ಹಾಗೇ ನೋಡ್ತಾ ನೋಡ್ತಾ ಹೋದ್ರೆ
ನನ್ ಲಚ್ಮೀನೆ ಒಳ್ಳ್ಯೋಳು |
ಘಟ್ಟ್ಯಾಗೇನೊ ಮಾತಾಡ್ತಾಳೆ
ಆದ್ರೂನೂವೆ ಒಳ್ಳ್ಯೋಳು ||

ಅವ್ಳೂ ಬಂದು ಸಿದ್ದೇ ಎಡ್ವಿ
ಹದ್ನಾರ್ ವರ್ಷ ಹಾರ್ಹೋಯ್ತು |
ಸೇತ್ವೇ ಕೆಳ್ಗೆ ಕಲ್ಮಣ್ ಮುಚ್ಚಿ
ಹೊನ್ನೀರ್ ಕಾಲ್ವೆ ತುಂಬ್ಹೋಯ್ತು||

ತುಂಬಿದ್ ಕಾಲ್ವೆ ತೋಟಿಕ್ ನುಗ್ಗಿ
ಚಿನ್ನದ್ ಸೊಪ್ನಾ ಸುರ್ದಿತ್ತು |
ಬೇಲೀ ಸುತ್ತಾ ಹೂವಿನ್ ಸುಗ್ಗಿ
ಜೀವದ್ ಕಣ್ಣೇ ತೆರ್ದಿತ್ತು ||

ಹಳ್ಳ್ಯೋಳೂಂತಾ ಅನ್ನೋರನ್ಲಿ
ಒಳ್ಳೇ ಹೆಂಡ್ತಿ ನನ್ ಲಚ್ಮಿ|
ಬೆಳ್‌ಬೆಳ್‌ಗಿದ್ದೋರ್‌ ಬೆಳ್ಕೊಂಡ್‌ಬರ್ಲಿ
ಪಚ್ಚೇ ಬಳ್ಳಿ ನನ್ ಲಚ್ಮಿ ||

ತೊಟ್ಲೂ ಬಟ್ಲೂ ತಂದೋರ್ಯಾರು
ಅವ್ಳೇ ತಾನೆ ನನ್ ಲಚ್ಮಿ|
ಬಿಸ್ಲಲ್ ಮಳೇಲ್ ನಕ್ಕೋರ್ಯಾರು
ನೊಂದೋರ್ಯಾರು ನನ್ ಲಚ್ಮಿ||

ಹನ್ನೊಂದ್‌ ಘಂಟೇಗನ್ನಾ ಹಾಕಿ
ಕಾಪಾಡೋಳೇ ನನ್ ಲಚ್ಮಿ|
ಮಕ್ಕಳ್ನೆಲ್ಲಾ ತೂಗಿ ಸಾಕಿ
ಬೆಳ್ಸೋ ದೇವ್ರೆ ನನ್ ಲಚ್ಮಿ ||

ಜೊತೇಲ್‌ಬಂದು ಮರೇಲ್‌ನಿಂತು
ನನ್ನೇ ನೋಡ್ತಾಳ್ ನನ್‌ಲಚ್ಮಿ|
ಮೋಡದ್‌ಮರೇಲ್ ಮುಂಗಾರ್‌ಮಿಂಚು
ಹಾಡಿನ್ ತುಂಬಾ ನನ್ ಲಚ್ಮಿ ||
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...