Home / ಕವನ / ಕವಿತೆ / ಉಸಿರಿನ ಹಡಗು

ಉಸಿರಿನ ಹಡಗು

ಕಾಲದ ಕಡಲಲಿ ಉಸಿರಿನ ಹಡಗು
ತೇಲುತ ನಡೆದಿದೆ ಹಗಲೂ ಇರುಳೂ;
ನೀರಲಿ ತೆರೆದಿವೆ ನಿಲ್ಲದ ದಾರಿ.-
ಎಲ್ಲಿಂದೆಲ್ಲಿಗೆ ಇದರ ಸವಾರಿ!

ಕಾಮನ ಕೋರುವ ಕಣ್ಣು ಇದಕ್ಕೆ,
ಬಯಕೆಯ ಬೀರುವ ಬಾವುಟ-ರೆಕ್ಕೆ,
ಕ್ಷುಧಾಗ್ನಿ ಹೊರಳುವ ತುಂಬದ ಹೊಟ್ಟೆ,
ಹಾಹಾಕಾರದ ಹೆಬ್ದುಲಿ-ರಟ್ಟೆ.

ಮುಡಿಯಲಿ ಗರ್ವದ ಹೊಗೆಯ ಕಿರೀಟ,
ಮುಖದಲಿ ತಂಗಿದೆ ಮಕ್ಕಳ ನೋಟ,
ಸುತ್ತಾ ಉತ್ತೆಸೆದಲೆಗಳ ಕಾಟ;
ಮರುಭೂಮಿಯಲಿದು ತೆಂಗಿನ ತೋಟ.

ಮಗುವಿದೆ ತಳ್ಳಿದ ಕಾಲಿಗೆ ಬಿದ್ದು;
ತಂದೆಯ ಉತ್ತರ: ಮತ್ತೂ ಗುದ್ದು.
ಈ ಗತಿಯೇ ಹೆತ್ತವಳೇ ಇದ್ದೂ?-
ಕರುಣೆಯ ಕರುಳಲಿ ಹುಟ್ಟಿದ ಸದ್ದು.

ಇನಿಯನ ಎದೆಯಲಿ ಕೆನ್ನೆಯನಿಟ್ಟು
ಕಣ್ತೆರೆವಿನಿಯಳ ಚೆಲುವನು ತೊಟ್ಟು
ತುಂಬುತ್ತಲೆಯಿರೆ ಹಡಗಿನ ರೂಪ,
ಕಡಲಿನ ಕಣ್ಣಿಗೆ ಏಕೋ ಕೋಪ!

ಉಸಿರಿನ ಹಡಗಿದು, ಏನಿದರರಕೆ?
ಉಸುರುವಂತಿಲ್ಲ.-(ಉಳಿಯುವ ಬಯಕೆ?)
ಬರಿ ಕನಸಿದು,-ನಗೆ ನೋವಿನ ಬೆರಕೆ;-
ಅದೊ! ನೀರಿನ ಬಿರುಗಾಳಿಯ ಗೊರಕೆ.

ಹಡಗಿನ ಪಾಡಿಗೆ ಕಡಲೇ ನಕ್ಕು
ನೀರಿನ ಕೆನ್ನೆಗೆ ಬಂದಿದೆ ಸುಕ್ಕು.
ತೇಲುವ ಬಾಳಿಗೆ ಯಾರೋ ದಿಕ್ಕು?
ಬೇಕು ಅದೃಷ್ಟವೆ ತೇಲುವುದಕ್ಕೂ!

ತೇಲುವುದೆಲ್ಲಾ ತೇಲುತ್ತಿರಲಿ!
ಮುಳುಗುವುದೋ? ಸರಿ, ಮುಳುಗುತ್ತಿರಲಿ!
ರವಿಯೂ ಮುಳುಗಲಿ! ಶಶಿಯೂ ಮುಳುಗಲಿ!
ಗ್ರಹತಾರೆಗಳೂ ಸುಮ್ಮನೆ ಮುಳುಗಲಿ!-

ದಿಗ್ದಿಕ್ತಟಗಳ ಒಳಗೂ ಹೊರಗೂ
ನೀಲ ನೀಳ ನಾಲಗೆಗಳನೆಸೆದು,
ಜೀವದಾಸೆಗಳನೆಲ್ಲಾ ತೊಡೆದು,
ಎಲ್ಲಾ ಮುಗಿದರೆ, ತಾನೇ ಉಳಿದು,

ತುಂಬಿ ತುಳುಕುತಿದೆ ಕಾಲ ಸಮುದ್ರ;
ಬದುಕಬಲ್ಲವನು ಒಬ್ಬನೆ, ರುದ್ರ.
ತೇಲಬಹುದು ಈ ತುಂಬಿದ ಹಡಗು.
ನಾಳೆ ಇವರ ಮನೆ ಆಳದ ಕೊರಗು.-

ಕಾಲದ ಕಡಲಲಿ ಉಸಿರಿನ ಹಡಗು
ತೇಲುತ ನಡೆದಿದೆ ಹಗಲೂ ಇರುಳೂ;
ನೀರಲಿ ತೆರದಿದೆ ನಿಲ್ಲದ ದಾರಿ.
ಎಲ್ಲಿಂದೆಲ್ಲಿಗೆ ಇದರ ಸವಾರಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...