ಮಲಗೆನ್ನ ಮುದ್ದುಮರಿ

ಮಲಗೆನ್ನ ಮುದ್ದುಮರಿ ಚಿನ್ನ
ನಿದ್ದೆ ನೇವರಿಸುತಿದೆ ಕಣ್ಣ

ನಡುರಾತ್ರಿ ದಾಟುತಿದೆ ಗಡಿಯ
ಇರುಳು ಬಿಚ್ಚಿದೆ ಕಪ್ಪು ಜಡೆಯ
ಲೋಕವೇ ಮಲಗಿರಲು ಹೊದ್ದು
ಆಟ ಸುರುಮಾಡುವರೆ ಮುದ್ದು?

ಕಣ್ಣೆ ಇದು, ಕಾಂತಿಯಾ ಚಿಲುಮೆ
ಹುಣ್ಣಿಮೆಗು ಇಲ್ಲ ಈ ಹಿರಿಮೆ
ನಿನ್ನ ಕುಲು ಕುಲು ನಗೆಯ ಹನಿಯು
ಬೃಂದಾವನದ ಕೊಳಲ ಹನಿಯು

ಹೂವಿಗೂ ಮಿದುವಾದ ಹೆಜ್ಜೆ-ಆಹ
ಜೀವ ಝಲ್ಲೆನಿಸುವಾ ಗೆಜ್ಜೆ!
ನಿನ್ ತೂಗುವ ಭಾಗ್ಯಕೆಂದೇ
ತೊರೆದೆ ಮರಿ, ಮನೆ ಮಾರು ಲಜ್ಜೆ

ಮೂಗು ತಿದ್ದಿದಳೇನೊ ರಂಭೆ
ನಗಲು ಕಲಿಸಿದಳೋ ಜಗದಂಬೆ
ನನ್ನ ಮಗುವೇ? ನಾನೆ ನಂಬೆ, ದೇವಲೋಕದ್ದೆ ಈ ಗೊಂಬೆ?

ಜೀವದಾಳದ ಬಯಕೆ ನೀನು
ಜನುಮ ಜನುಮದ ಕನಸು ನೀನು
ಒಲುಮೆಯಿಂಪನು ಹೀರಿ ಬೆಳೆದ ಕೆಂಪುತೋಟದ ಕಂಪು ನೀನು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕನ್ಯೆ
Next post ಮಂಥನ – ೩

ಸಣ್ಣ ಕತೆ

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…