ನನ್ನ ಮುದ್ದು ಚಿಲಿಪಿಲಿ ಗಿಣಿಯೇ

ನನ್ನ ಮುದ್ದು ಚಿಲಿಪಿ ಗಿಣಿಯೇ
ಬಂಗಾರ ತುಂಬಿದ ಗಣಿಯೇ
ಹೂನಗೆ ಅರಳಿದೀ ಮುಖಕೆ
ಹುಣ್ಣಿಮೆ ಆಕಾಶ ಎಣೆಯೇ?

ಹೇಗಿರದೆ ನೀನಿದ್ದೆ ಮಗುವೇ?
ಕತ್ತಲಾಗಿತ್ತಲ್ಲ ಜಗವೇ
ನೀ ಬಂದು ನಗಲು ಈ ಇಳೆಗೇ
ಹರಿದಿದೆ ಬೆಳಕಿನ ಹೊಳೆಯೇ!

ರಸಹೀನವಾಗಿತ್ತು ಬಾಳು-ಈಗ
ಮೊಸರು ಜೇನು ಬೆಣ್ಣೆ ಹಾಲು
ಹಾಳು ಸುರಿಯುತ್ತಿದ್ದ ಹಾದಿ – ಈಗ
ದೇವರ ಉತ್ಸವ ಬೀದಿ!

ಜನ್ಮ ಜನ್ಮದ ಪೂಜೆ ಫಲಿಸಿ
ದೇವರೆ ಬಂದರೊ ಹರಸಿ
ಬರಿದಿದ್ದ ತೋಳಿನ ತುಂಬ
ಉಡುಪಿ ಕೃಷ್ಣನ ಮುದ್ದು ಬಿಂಬ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುನಿ
Next post ಮಂಥನ – ೮

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…