ಸತ್ತೇನು ಗುಬ್ದಿ ?

ಸತ್ತೇನು ಗುಬ್ದಿ ?

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಬೆಳೆಗಾಲ. ಹೊಲದಲ್ಲಿ ಜೋಳದ ನಿಲುವು, ಮಗಿಯಷ್ಟು ಗಡುತರವಾದ ತೆನೆ ಹೊತ್ತು ತೂಗಲಾಡುತ್ತಿದೆ.

ಹೊಲದವನು ನಡುಹೊಲದಲ್ಲಿ ಕಟ್ಟಿದ ಮಂಚಿಕೆಯನ್ನೇರಿ ನಿಂತು, ಕವಣೆಯಲ್ಲಿ ಕಲ್ಲು ಬೀಸಾಡಿ ಹಕ್ಕಿಗಳನ್ನು ಓಡಿಸುತ್ತಿದ್ದನು. ಬೀಸಾಗಿ ಬಂದ ಕವಣೆಗಲ್ಲಿನ ರಭಸಕ್ಕಂಜಿಯೇ ಹಕ್ಕಿಗಳೆಲ್ಲ ಹಾರಿಹೋದವು, ಆದರೆ ಒಂದು ಗುಬ್ದಿ ಮಾತ್ರ ಹಾರಿ ಹೋಗದೆ, ಒಂದು ತೆನೆಯನ್ನು ಗಟ್ಟಿಯಾಗಿ ಹಿಡಿದುಕೊಂಡು ಕುಳಿತಿತು. ಹೊಲದವನ ಬಾಯ ಬೆದರಿಕೆಗಾಗಲಿ, ಬಾರಕೋಲಿನ ಸಪ್ಪಳಕ್ಕಾಗಲಿ ಅದು ಮಿಸುಕಲಿಲ್ಲ; ಕವಣೆಗಲ್ಲಿಗೂ ಹಣಿಯಲಿಲ್ಲ. ಅಟ್ಟದಿಂದಿಳಿದು ಕಾವಲಿಗನು ಆ ಗುಬ್ದಿ ಕುಳಿತಲ್ಲಿಗೆ ಮೆಲ್ಲನೆ ಹೋಗಿ ಅದನ್ನು ಗಪ್ಪನೆ ಹಿಡಿದು ತಂದು, ಅದರ ಕಾಲಿಗೆ ದಾರಕಟ್ಟಿ ಅಟ್ಟದ ಕಾಲಿಗೆ
ಬಿಗಿದನು. ಆದರೂ ಅದು ಪಕ್ಕ ಬಿಚ್ಚಿ ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು ಕಾವಲಿಗನು ಕೇಳಿದನು – “ಸತ್ತೇಯೇನು ಗುಬ್ಬಿ?”
ಆ ಗುಬ್ದಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚಗೀ ಕಾಲಿನಲ್ಲಿ
ಜೋಕಾಲಿ ಆಡಹತ್ತಿದ್ದೇನೆ.
ನಾನೇಕೆ ಸಾಯುವೆನು ?”

ಹೊಲದವನು ಅದನ್ನು ಬಿಚ್ಚಿ ಕೊಂಡೊಯ್ದು ಹರಿಯುವ ಹಳ್ಳದಲ್ಲಿ ಒಗೆದನು, ಆಗಲೂ ಅದು ಫಡಫಡಿಸುತ್ತಲೇ ಇತ್ತು. ಅದನ್ನು ಕಂಡು – “ಸತ್ತೆಯಾ ಗುಬ್ಬಿ” ಎಂದು ಕೇಳಿದನು. ಗುಬ್ಬಿ ಹೇಳಿತು –

“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳಕ್ಕೆ ಬಂದು ಈಸಾಡುತ್ತಿದ್ದೇನೆ.
ನಾನೇಕೆ ಸಾಯುವೆನು ?”

ಒಕ್ಕಲಿಗನು ಆ ಗುಬ್ಬಿಯನ್ನು ಊರಲ್ಲಿ ತೆಗೆದುಕೊಂಡು ಹೋಗಿ, ಗಾಣಿಗನ ಗಾಣದ ಗಾಲಿಯಲ್ಲಿ ಹಾಕಿದನು. ಮತ್ತೆಯೂ ಅದು ಫಡಫಡಿಸಿತು. ಕೇಳಿದನು-
“ಸತ್ತೆಯೇನು ಗುಬ್ಬಿ ?”
ತನ್ನ ದಾಟಿಯಲ್ಲಿಯೇ ಗುಬ್ಬಿ ಮರುನುಡಿಯಿತು.
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಿನಲ್ಲಿ ಈಸಾಡಿ
ಈಗ ಎಣ್ಣೆ ಹೂಸಿಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಹೊಲದವನು ಗುಬ್ದಿಯನ್ನು ಮನೆಗೊಯ್ದು ಒಲೆಯಮೇಲಿನ ಸಳಮಳಿಸುವ ನೀರಿನ ಭಾಂಡೆಯಲ್ಲಿ ಚೆಲ್ಲಿದನು. ಅಲ್ಲಿಯೂ ಗುಬ್ಬಿಯ ಫಡಫಡಾಟ ನಡೆದೇ ಇತ್ತು. “ಸತ್ತೆಯಾ ಗುಬ್ದಿ” ಎಂದು ಕೇಳಿದನು. ಗುಬ್ದಿ ಹೇಳಿತು –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದಕಾಲೀಗಿ ಜೋಕಾಲಿ ಆಡಿ
ಹಳ್ಳದ ತಿಳಿನೀರಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಇಲ್ಲಿ ಬಿಸಿಬಿಸಿ ನೀರಿನಿಂದ
ಎರಕೊಳ್ಳುತ್ತಿದ್ದೇನೆ.
ನಾನೇಕೆ ಸಾಯಲಿ ?”

ಗುಬ್ಬಿಯನ್ನು ಹೆಂಡತಿಯ ಕೈಗಿತ್ತು, ಇದನ್ನು ಕೊಯ್ದು ಅಡಿಗೆ ಮಾಡಲು ಹೊಲದವನು ತಿಳಿಸಿದನು. ಹೆಂಡತಿಯು ಮರುಕ್ಷಣದಲ್ಲಿ ಅಡಿಗೆಮಾಡಿ ಗಂಡನಿಗೆ ಉಣಬಡಿಸಿದಳು. ಉಂಡ ಬಳಿಕ ಹೊಟ್ಟೆಯಲ್ಲಿ ಫಡಫಡಿಸುತ್ತಿರುವ ಗುಬ್ಬಿಯನ್ನು ಕುರಿತು ಗಂಡನು ಕೇಳಿದನು –
“ಸತ್ತೆಯಾ ಗುಬ್ಬಿ ?”

ಮರುಕ್ಷಣದಲ್ಲಿಯೇ ಒಕ್ಕಲಿಗನು ಕಾರಿಕೊಂಡನು. ಅದರಲ್ಲಿ ಗುಬ್ಬಿ ಕಾಣಿಸಿ ಕೊಂಡಿತು. ಮತ್ತೆ ಫಡಫಡಿಸುತ್ತ –
“ಗುಂಡ ಗುಂಡ ತೆನಿ ತಿಂದು
ಗುಂಡದಾಗ ನೀರು ಕುಡಿದು
ಮಂಚದ ಕಾಲಿಗೆ ಜೋಕಾಲಿ ಆಡಿ
ಹಳ್ಳದ ತಿಳಿ ನೀರಿನಲ್ಲಿ ಈಸಾಡಿ
ಗಾಣಿಗರ ಗಾಣದಲ್ಲಿ ಎಣ್ಣೆ ಹೂಸಿಕೊಂಡು
ಬಿಸಿಬಿಸಿ ನೀರಿನಿಂದ ಎರಕೊಂಡು
ಪಲ್ಲೆ ಮಾಡಿಸಿ ಉಂಡುಗಿಂಡು
ಹೊರಟಿದ್ದೇನೆ ನೋಡು.
ನಾನೇಕೆ ಸಾಯುವೆನು ?”

ಎನ್ನುತ್ತ ಬುರ್ರನೆ ಹಾರಿಹೋಯಿತು ಸಾವಿಲ್ಲದ ಗುಬ್ಬಿ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎಷ್ಟೊಂದಿವೆ ವಜ್ರದ ಬೊಟ್ಟು
Next post ನಿನಗೇನು ಕಡಿಮೆಯಿಲ್ಲ

ಸಣ್ಣ ಕತೆ

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

cheap jordans|wholesale air max|wholesale jordans|wholesale jewelry|wholesale jerseys