ಸಣ್ಣ ಸಂಗತಿ

ನಟ್ಟಿರುಳ ಕರಿಮುಗಿಲ ನೀರ್-ತುಂಬಿಗಳ ನಡುವೆ
ಹುಣ್ಣಿಮೆಯ ಕಣ್ಣ ತೆರೆದಿದೆ. ತಾರೆ ಬಂದಿವೆ
ಬಾನ ಬೀದಿಗೆ. ಅತ್ತ ಹಿಡಿದ ಸೋನೆಯ ಶ್ರುತಿಗೆ
ಗಾಳಿಯೇ ಹಾಡುತಿದೆ. ಇತ್ತ ಈ ಮನೆಯೊಳಗೆ
ಪುಟ್ಟ ಮಗುವೊಂದು ಮಂಚದ ಬಳಿಯ ತೊಟ್ಟಿಲಲಿ
ಕಣ್ಣರ್ಧ ಮುಚ್ಚಿ ಮಲಗಿದೆ, ಅದೂ ಬರಿಮೈಲಿ !
ನಿದ್ದೆಗಣ್ಣಿನಲೆ ಪಕ್ಕದ ತಾಯಿ ಕೈ ನೀಡಿ
ಮತ್ತೆ ಹೊದಿಕೆಯನು ಸರಿಪಡಿಸುವಳು. ಮಗು ತಿರುಗಿ
ಹೊಡಿಕೆಯನೆ ಕಿತ್ತೆಸೆದು ಮಲಗುವುದು ಬರಿಮೈಲಿ;
ಸಣ್ಣಗಿದೆ ದೀಪ ಎಲ್ಲೋ ಒಂದು ಮೂಲೆಯಲಿ.

ಇದು ಸರಿಯೆ? ತಪ್ಪೆ ?-ಉತ್ತರವಿಲ್ಲ. ದೆಸೆ ದೆಸೆಗೆ
ಎಲ್ಲ ಮಲಗಿಹರು ಮಾತಾಡದೆಯೆ, ನೋಡದೆಯೆ.
ನಿದ್ದೆ ಎಚ್ಚರಗಳಲಿ ಪೊರೆವ ಕೈ ದುಡಿಯುತಿದೆ;
ಅದನು ಲೆಕ್ಕಿಸದೆ ಮಗು ಹೊದಿಕೆಯನು ಒದೆಯುತಿದೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮ ಕಾಳಗದ ಕೊನೆ!
Next post ಚುಟುಕುಗಳು

ಸಣ್ಣ ಕತೆ

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಕನಸು ದಿಟವಾಯಿತು

    ಪ್ರಕರಣ ೨ ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…