Home / ಲೇಖನ / ಇತರೆ / ಸಾಧನೆಯ ಹಾದಿಯಲಿ

ಸಾಧನೆಯ ಹಾದಿಯಲಿ

Mettiluಪ್ರಿಯ ಸಖಿ,

ಗುರುಗಳ ಬಳಿ ಶಿಷ್ಯನೊಬ್ಬ ಬಂದು ತನ್ನ ನೋವನ್ನು ತೋಡಿಕೊಳ್ಳುತ್ತಾ ತನ್ನ ಹೊಸ ಕೆಲಸವನ್ನು ನೋಡಿ ಜನರೆಲ್ಲರೂ ಆಡಿಕೊಂಡು ನಗ್ತಾ ಇದ್ದಾರೆ. ಇದರಿಂದ ತನಗೆ ತುಂಬಾ ಬೇಸರವಾಗಿದೆ. ಹಾಗಾಗಿ ಇನ್ನು ಮುಂದೆ ಈ ಕೆಲಸ ಮುಂದುವರೆಸುವುದಿಲ್ಲ ಎಂದು ಹೇಳಿದ.

ಇದನ್ನು ಕೇಳಿದ ಗುರುಗಳು ನೋಡು ಮಗು, ಯಾವುದೇ ಹೊಸ ಕೆಲಸದಲ್ಲಿ ಗುರಿಯನ್ನು ಸೇರಬೇಕಾದರೆ ಆ ಸಾಧನೆಯ ಹಾದಿಯಲ್ಲಿ ನಾಲ್ಕು ಹಂತಗಳನ್ನು ದಾಟಿ ಬರಬೇಕಾಗುತ್ತದೆ. ಮೊದಲನೆ ಹಂತದಲ್ಲಿ ಜನ ನಿನ್ನ ಹೊಸ ಕೆಲಸವನ್ನು ನೋಡಿ ನಗುತ್ತಾರೆ. ಮುಂದುವರೆದರೆ, ಎರಡನೆಯ ಹಂತದಲ್ಲಿ ವ್ಯಂಗ್ಯ, ಕೊಂಕು ಮಾತುಗಳಿಂದ ನಿನ್ನ ಚುಚ್ಚುತ್ತಾರೆ. ಇದಕ್ಕೂ ನೀನು ಹೆದರದೇ ಮುಂದುವರೆದರೆ ಮೂರನೆಯ ಹಂತದಲ್ಲಿ ಜನ ಇವನೇನೋ ಮಾಡ್ತಾ ಇದ್ದಾನಲ್ಲ ತಾಳು ನೋಡೋಣ ಅಂತ ಮೌನವಾಗಿ ನಿಂತು ನೋಡ್ತಾರೆ. ಕೊನೆಯ ನಿನ್ನ ಗೆಲುವಿನ ಹಂತ. ಇಲ್ಲಿ ಜನ ನೀನು ಮಾಡಿರೋ ಕೆಲಸ ಸತ್ವಪೂರ್ಣವಾದುದೋ ಅಲ್ಲವೋ ಪರೀಕ್ಷಿಸಿ, ಇದು ನಿನ್ನ ನಿಜವಾದ ಸಾಧನೆ ಅಂತ ನಿನ್ನನ್ನು ಮೆಚ್ಚಿಕೊಳ್ಳುತ್ತಾರೆ. ಈ ನಾಲ್ಕೂ ಹಂತಗಳು ಒಬ್ಬ ಸಾಧಕನಿಗೆ ಸತ್ವ ಪರೀಕ್ಷೆ ಇದ್ದ ಹಾಗೆ. ಕೆಲವರು ಮೊದಲ ಹಂತದಲ್ಲೇ ಜನರ ನಗುವನ್ನು ತಿರಸ್ಕಾರವನ್ನು ಕಂಡು ಹೆದರಿ ಕೆಲಸವನ್ನು ಅರ್ಧದಲ್ಲೇ ಬಿಟ್ಟು ಓಡಿ ಹೋಗ್ತಾರೆ.  ಉಳಿದ ಕೆಲವರು ಮೂರನೇ ಹಂತಕ್ಕೆ ಬಂದು ಜನರ ಮೌನವನ್ನು ಅರ್ಥ ಮಾಡಿಕೊಳ್ಳಲಾಗದೇ ಗೊಂದಲಕ್ಕೊಳಗಾಗಿ ಹೆದರಿ ಕೆಲಸವನ್ನು ಅರ್ಧದಲ್ಲಿ ನಿಲ್ಲಿಸ್ತಾರೆ. ಇನ್ನುಳಿದ ಕೆಲವೇ ಕೆಲವರು ಮಾತ್ರ ಈ ಮೂರೂ ಹಂತಗಳನ್ನು ಧೈರ್ಯದಿಂದ ದಾಟಿ ನಾಲ್ಕನೆಯ ಹಂತವನ್ನು ತಲುಪಿ ತಮ್ಮ ಕೆಲಸವನ್ನು ಸಮಾಜದ ಪರಿಕ್ಷೆಗೆ ಒಳಪಡಿಸುತ್ತಾರೆ ಮತ್ತು ಅದೇ ಜನರಿಂದಲೇ ಭೇಷ್‌ ಎನಿಸಿಕೊಳ್ತಾರೆ.

ಆದ್ದರಿಂದಲೇ ನಿಜವಾದ ಸಾಧಕನಿಗೆ ತಾಳ್ಮೆ ಅತಿ ಮುಖ್ಯ. ತಾನು ಯಾವ ಹಂತದಲ್ಲೂ ಅಧೈರ್ಯದಿಂದ ಓಡಿ ಹೋಗದಂತಾ ಮನಸ್ಥೈರ್ಯ, ಸ೦ಯಮವನ್ನು ಸಾಧಕ ಮೊದಲು ರೂಢಿಸಿಕೊಳ್ಳಬೇಕು. ಜನರ ಮಾತುಗಳಿಗೆ ಕಿವಿಯನ್ನು ಕಿವುಡಾಗಿಸಿಕೊಳ್ಳಬೇಕು. ಅರ್ಜುನನ ಕಣ್ಣಿಗೆ ಪಕ್ಷಿಯ ಕಣ್ಣು ಮಾತ್ರ ಕ೦ಡಂತೆ, ಸಾಧಕನಿಗೆ ತನ್ನ ಗುರಿ ಮಾತ್ರ ಮುಖ್ಯವಾದುದು. ಹಾಗೇ ಆ ಗುರಿಯನ್ನು ತಲುಪಲು ಇಲ್ಲಿ ಯಾವುದೂ ಸುಲಭ ಮಾರ್ಗಗಳಿಲ್ಲ. ಅದನ್ನು ಕಠಿಣ ಪರಿಶ್ರಮದಿಂದಷ್ಟೇ ಸಾಧಿಸಬೇಕು, ಎ೦ಬುದನ್ನು ಸಾಧಕ ಎ೦ದೂ ಮರೆಯಬಾರದು ಎಂದರು.

ಇವನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯವಾಯ್ತು. ಇನ್ನು ತನ್ನ ಸಾಧನೆಯ ಹಾದಿಯಲ್ಲಿ ಯಾವುದೇ ಅಡ್ಡಿ, ಆತಂಕಗಳು ಬಂದರೂ ತಾನು ಹೆದರುವುದಿಲ್ಲವೆ೦ದು ಆತ ಪ್ರತಿಜ್ಞೆ ಮಾಡಿದ. ಮತ್ತು ತನ್ನ ಸಾಧನೆಯಲ್ಲಿ ಗೆದ್ದ.

ಸಖಿ, ಕಥೆ ಇಷ್ಪವಾಯ್ತೋ ಇಲ್ಲವೋ ತಿಳಿಸುತ್ತೀಯಲ್ಲವೇ ?
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...