Home / ಲೇಖನ / ಇತರೆ / ಸಾಧನೆಯ ಹಾದಿಯಲಿ

ಸಾಧನೆಯ ಹಾದಿಯಲಿ

Mettiluಪ್ರಿಯ ಸಖಿ,

ಗುರುಗಳ ಬಳಿ ಶಿಷ್ಯನೊಬ್ಬ ಬಂದು ತನ್ನ ನೋವನ್ನು ತೋಡಿಕೊಳ್ಳುತ್ತಾ ತನ್ನ ಹೊಸ ಕೆಲಸವನ್ನು ನೋಡಿ ಜನರೆಲ್ಲರೂ ಆಡಿಕೊಂಡು ನಗ್ತಾ ಇದ್ದಾರೆ. ಇದರಿಂದ ತನಗೆ ತುಂಬಾ ಬೇಸರವಾಗಿದೆ. ಹಾಗಾಗಿ ಇನ್ನು ಮುಂದೆ ಈ ಕೆಲಸ ಮುಂದುವರೆಸುವುದಿಲ್ಲ ಎಂದು ಹೇಳಿದ.

ಇದನ್ನು ಕೇಳಿದ ಗುರುಗಳು ನೋಡು ಮಗು, ಯಾವುದೇ ಹೊಸ ಕೆಲಸದಲ್ಲಿ ಗುರಿಯನ್ನು ಸೇರಬೇಕಾದರೆ ಆ ಸಾಧನೆಯ ಹಾದಿಯಲ್ಲಿ ನಾಲ್ಕು ಹಂತಗಳನ್ನು ದಾಟಿ ಬರಬೇಕಾಗುತ್ತದೆ. ಮೊದಲನೆ ಹಂತದಲ್ಲಿ ಜನ ನಿನ್ನ ಹೊಸ ಕೆಲಸವನ್ನು ನೋಡಿ ನಗುತ್ತಾರೆ. ಮುಂದುವರೆದರೆ, ಎರಡನೆಯ ಹಂತದಲ್ಲಿ ವ್ಯಂಗ್ಯ, ಕೊಂಕು ಮಾತುಗಳಿಂದ ನಿನ್ನ ಚುಚ್ಚುತ್ತಾರೆ. ಇದಕ್ಕೂ ನೀನು ಹೆದರದೇ ಮುಂದುವರೆದರೆ ಮೂರನೆಯ ಹಂತದಲ್ಲಿ ಜನ ಇವನೇನೋ ಮಾಡ್ತಾ ಇದ್ದಾನಲ್ಲ ತಾಳು ನೋಡೋಣ ಅಂತ ಮೌನವಾಗಿ ನಿಂತು ನೋಡ್ತಾರೆ. ಕೊನೆಯ ನಿನ್ನ ಗೆಲುವಿನ ಹಂತ. ಇಲ್ಲಿ ಜನ ನೀನು ಮಾಡಿರೋ ಕೆಲಸ ಸತ್ವಪೂರ್ಣವಾದುದೋ ಅಲ್ಲವೋ ಪರೀಕ್ಷಿಸಿ, ಇದು ನಿನ್ನ ನಿಜವಾದ ಸಾಧನೆ ಅಂತ ನಿನ್ನನ್ನು ಮೆಚ್ಚಿಕೊಳ್ಳುತ್ತಾರೆ. ಈ ನಾಲ್ಕೂ ಹಂತಗಳು ಒಬ್ಬ ಸಾಧಕನಿಗೆ ಸತ್ವ ಪರೀಕ್ಷೆ ಇದ್ದ ಹಾಗೆ. ಕೆಲವರು ಮೊದಲ ಹಂತದಲ್ಲೇ ಜನರ ನಗುವನ್ನು ತಿರಸ್ಕಾರವನ್ನು ಕಂಡು ಹೆದರಿ ಕೆಲಸವನ್ನು ಅರ್ಧದಲ್ಲೇ ಬಿಟ್ಟು ಓಡಿ ಹೋಗ್ತಾರೆ.  ಉಳಿದ ಕೆಲವರು ಮೂರನೇ ಹಂತಕ್ಕೆ ಬಂದು ಜನರ ಮೌನವನ್ನು ಅರ್ಥ ಮಾಡಿಕೊಳ್ಳಲಾಗದೇ ಗೊಂದಲಕ್ಕೊಳಗಾಗಿ ಹೆದರಿ ಕೆಲಸವನ್ನು ಅರ್ಧದಲ್ಲಿ ನಿಲ್ಲಿಸ್ತಾರೆ. ಇನ್ನುಳಿದ ಕೆಲವೇ ಕೆಲವರು ಮಾತ್ರ ಈ ಮೂರೂ ಹಂತಗಳನ್ನು ಧೈರ್ಯದಿಂದ ದಾಟಿ ನಾಲ್ಕನೆಯ ಹಂತವನ್ನು ತಲುಪಿ ತಮ್ಮ ಕೆಲಸವನ್ನು ಸಮಾಜದ ಪರಿಕ್ಷೆಗೆ ಒಳಪಡಿಸುತ್ತಾರೆ ಮತ್ತು ಅದೇ ಜನರಿಂದಲೇ ಭೇಷ್‌ ಎನಿಸಿಕೊಳ್ತಾರೆ.

ಆದ್ದರಿಂದಲೇ ನಿಜವಾದ ಸಾಧಕನಿಗೆ ತಾಳ್ಮೆ ಅತಿ ಮುಖ್ಯ. ತಾನು ಯಾವ ಹಂತದಲ್ಲೂ ಅಧೈರ್ಯದಿಂದ ಓಡಿ ಹೋಗದಂತಾ ಮನಸ್ಥೈರ್ಯ, ಸ೦ಯಮವನ್ನು ಸಾಧಕ ಮೊದಲು ರೂಢಿಸಿಕೊಳ್ಳಬೇಕು. ಜನರ ಮಾತುಗಳಿಗೆ ಕಿವಿಯನ್ನು ಕಿವುಡಾಗಿಸಿಕೊಳ್ಳಬೇಕು. ಅರ್ಜುನನ ಕಣ್ಣಿಗೆ ಪಕ್ಷಿಯ ಕಣ್ಣು ಮಾತ್ರ ಕ೦ಡಂತೆ, ಸಾಧಕನಿಗೆ ತನ್ನ ಗುರಿ ಮಾತ್ರ ಮುಖ್ಯವಾದುದು. ಹಾಗೇ ಆ ಗುರಿಯನ್ನು ತಲುಪಲು ಇಲ್ಲಿ ಯಾವುದೂ ಸುಲಭ ಮಾರ್ಗಗಳಿಲ್ಲ. ಅದನ್ನು ಕಠಿಣ ಪರಿಶ್ರಮದಿಂದಷ್ಟೇ ಸಾಧಿಸಬೇಕು, ಎ೦ಬುದನ್ನು ಸಾಧಕ ಎ೦ದೂ ಮರೆಯಬಾರದು ಎಂದರು.

ಇವನ್ನು ಕೇಳಿದ ಶಿಷ್ಯನಿಗೆ ಜ್ಞಾನೋದಯವಾಯ್ತು. ಇನ್ನು ತನ್ನ ಸಾಧನೆಯ ಹಾದಿಯಲ್ಲಿ ಯಾವುದೇ ಅಡ್ಡಿ, ಆತಂಕಗಳು ಬಂದರೂ ತಾನು ಹೆದರುವುದಿಲ್ಲವೆ೦ದು ಆತ ಪ್ರತಿಜ್ಞೆ ಮಾಡಿದ. ಮತ್ತು ತನ್ನ ಸಾಧನೆಯಲ್ಲಿ ಗೆದ್ದ.

ಸಖಿ, ಕಥೆ ಇಷ್ಪವಾಯ್ತೋ ಇಲ್ಲವೋ ತಿಳಿಸುತ್ತೀಯಲ್ಲವೇ ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...