Home / ಲೇಖನ / ಇತರೆ / ಹುಟ್ಟು ಸಾವಿನ ಮಧ್ಯೆ

ಹುಟ್ಟು ಸಾವಿನ ಮಧ್ಯೆ

ಪ್ರಿಯ ಸಖಿ,
ಹುಟ್ಟು ನಮ್ಮ ಕೈಯಲಿಲ್ಲ. ಹಾಗೂ ಸಾವೂ ಕೂಡ. (ಆತ್ಮ ಹತ್ಯೆಗಳನ್ನು ಹೊರತುಪಡಿಸಿ) ಆದರೆ ಇವೆರಡರ ನಡುವಿನ ಬದುಕು ನಮ್ಮ ಕೈನಲ್ಲೇ ಇದೆ. ಇದನ್ನು ನಮಗೆ ಬೇಕೆಂದಂತೆ ರೂಪಿಸಿಕೊಳ್ಳುವ ಅವಕಾಶ ನಮಗಿದೆ. ಒಂದು ಮಗುವಿನ ಹುಟ್ಟಿನೊಂದಿಗೆ ಅನೇಕ ಆಸೆ, ಕನಸುಗಳೂ ಹುಟ್ಟಿಕೊಳ್ಳುತ್ತವೆ.

ಬದುಕಿನುದ್ದಕ್ಕೂ ಅವುಗಳನ್ನು ಪೂರೈಸಿಕೊಳ್ಳಲು ವ್ಯಕ್ತಿ ಹೆಣಗುತ್ತಾನೆ. ಸಫಲವಾಗುವುದು ಕೆಲವೇ ಕೆಲವು. ಇನ್ನುಳಿದವು ವ್ಯಕ್ತಿಯ ಸಾವಿನೊಂದಿಗೇ ಸಾಯುತ್ತವೆ. ಅಥವಾ ಆದು ಬೇರಾರದೋ ಆಸೆ ಕನಸು ಮುಂದುವರೆಯುತ್ತವೆ. ವ್ಯಕ್ತಿ ಸಫಲಗೊಳಿಸಿಕೊಂಡ ಆಸೆ, ಕನಸುಗಳಿಂದಲೇ ನಾವು ಅವನನ್ನು ಅಳೆಯುತ್ತೇವೆ. ಅವನು ಆಗದೇ ಉಳಿದ ವ್ಯಕ್ತಿತ್ವದಿಂದ ಅವನನ್ನು ನಾವು ಅಳೆಯುವುದಿಲ್ಲ.

ಈ ವ್ಯಕ್ತಿತ್ವವನ್ನು ಅಳೆಯುವ ಕೆಲಸವೂ ಆಗುವುದು ವ್ಯಕ್ತಿಯ ಸಾವಿನಲ್ಲಿ.  ಅವನ ಗುಣ, ಸ್ವಭಾವ, ಆಸ್ತಿ, ಅಂತಸ್ತು, ಸಾಧಿಸಿದ ಕೆಲಸ, ಸಮಾಜದ ಸೇವೆ, ಬುದ್ಧಿವಂತಿಕೆ, ಒಳ್ಳೆಯತನ ಇತ್ಯಾದಿಗಳಂದ ವ್ಯಕ್ತಿಯನ್ನು ತೂಗುತ್ತೇವೆ. ಶರಣರ ಸಾವನ್ನು ಮರಣದಲ್ಲಿ ಕಾಣು ಎಂಬ ಮಾತೊಂದಿದೆ.

ಸತ್ತ ವ್ಯಕ್ತಿ ಸಮಾಜಕ್ಕೆ ಉಪಯೋಗಿಯಾಗಿದ್ದರೆ ಜನ ಅವನು ಪರಿಪೂರ್ಣ ಬದುಕನ್ನು ಬಾಳಿ ಸತ್ತರೂ ಇವನು ಇಷ್ಟು ಬೇಗ ಸಾಯಬಾರದಿತ್ತು. ಇಂತಹಾ ಸಹೃದಯ ಅಪರೂಪ. ಇವನಂತವನಿಂದ ಸಮಾಜಕ್ಕೆ ಇನ್ನೂ ಬಹಳಷ್ಟು ಆಗಬೇಕಾದುದಿತ್ತು. ಇವನ ಸಾವಿನಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಒಳ್ಳೆಯವರನ್ನು ಸಾವೂ ಬೇಗ ಕೊಂಡೊಯ್ಯುತ್ತದೆ…. ಎಂದೆಲ್ಲಾ ವಿಷಾದಿಸುತ್ತಾರೆ.

ಅದೇ ಸಮಾಜಕ್ಕೆ ಉಪಯೋಗವಿಲ್ಲದ, ಸಮಾಜ ಕಂಟಕ ಸತ್ತಾಗ ಜನ ಸಧ್ಯ ಸತ್ತನಲ್ಲಾ, ಎಂದು ಹೇಳಿ ನೆಮ್ಮದಿಯ ನಿಟ್ಟುಸಿರು ಬಿಡುತ್ತಾರೆ. ಸಖಿ, ಸಾವನ್ನು ಕುರಿತ ಕಥೆಯೊಂದು ನೆನಪಾಗುತ್ತದೆ. ವ್ಯಕ್ತಿಯೊಬ್ಬ ದೇವರಲ್ಲಿ ಹೀಗೆ ಬೇಡಿಕೊಂಡನಂತೆ. ದೇವ ನಾನು ಸತ್ತಾಗ ನನ್ನ ಸಾವಿಗೆ ದುಃಖಿಸಿ ಅಳುವ ಕೆಲವರಾದರೂ ಜನರಿರುವಂತೆ ಕರುಣಿಸು, ಎಂದು. ಅದಕ್ಕೆ ದೇವರು ಇದು ನನ್ನಿಂದ ಆಗದ ಕೆಲಸ. ಇದು ನಿನ್ನಿಂದಲೇ ಸಾಧ್ಯ. ನಿನ್ನ ಸಾವಿಗೆ ಜನ ದುಃಖಿಸುವಂತಾಗಲು, ಜನರು ಮೆಚ್ಚುವಂತೆ ನೀನು ಬದುಕಬೇಕು ಎಂದನಂತೆ.

ಸಖಿ, ಈ ಕಥೆಯೊಳಗೆ ಬದುಕಿನ ಗೂಡಾರ್ಥವೇ ಆಡಗಿದೆಯಲ್ಲವೇ?  ಹುಟ್ಟು, ಸಾವು ಯಾವುದೋ ಶಕ್ತಿಯ ಕೈಯಲ್ಲಿದ್ದರೂ ಮಧ್ಯದ ಈ ಬದುಕಿನಲ್ಲಿ ಗುಣವಂತನಾಗುವುದು, ಕೆಡಕನಾಗುವುದು ವ್ಯಕ್ತಿಯ ಕೈಯಲ್ಲೇ ಇದೆಯಲ್ಲವೇ? ಸಾವಿನಾಚೆಗೆ ಏನಿದೆಯೋ ಯಾರಿಗೂ ತಿಳಿದಿಲ್ಲ. ನಾವಿಲ್ಲಿ ಒಳ್ಳೆಯವರಾಗಿ, ಸಮಾಜಕ್ಕೆ ಬೇಕಾದವರಾಗಿ ಬದುಕಿದರೆ ಮುಂದೆ ಸ್ವರ್ಗ, ಮೋಕ್ಷ ಸಿಗುತ್ತದೆ ಎಂಬ ಮಾತಿಗೂ ಯಾವುದೇ ಆಧಾರವಿಲ್ಲ. ಆದರೆ ಒಬ್ಬ ಒಳ್ಳೆಯ ವ್ಯಕ್ತಿಯ ಸಾವಿಗೆ ಹಲವಾರು ಜನರು ಕಣ್ಣೀರು ಹರಿಸುತ್ತಾರೆಂಬುದು ನಿಜ. ಬಹುಶಃ ವ್ಯಕ್ತಿ ಸಾರ್ಥಕ ಬದುಕಿಗೆ ಇದೇ ದೊಡ್ಡ ಕೊಡುಗೆ ಹಾಗೇ ಜನರ ಕಣ್ಣೀರನ್ನು ಸಂಪಾದಿಸುವುದೇ ನಿಜವಾದ ಧನ್ಯತೆ. ಆಲ್ಲವೇ ?
*****

Tagged:

Leave a Reply

Your email address will not be published. Required fields are marked *

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...

ಕಾಲ ಹನ್ನೆರಡನೆ ಶತಮಾನ. ದೇಶ ಜಪಾನ್. ಅರಸನ ಹೆಸರು ಅಂತೋಕು. ವಯಸ್ಸು ಕೇವಲ ಏಳು ಸಂವತ್ಸರಗಳು. ಅಂತೋಕು ಹೈಕೆ ಎಂಬ ಸಾಮುರಾಯ ದಳದ ನಾಮ ಮಾತ್ರ ಮುಂದಾಳುವಾಗಿದ್ದು ನಿಜವಾದ ಅಧಿಕಾರ ಇವನ ಅಜ್ಜಮ್ಮನ ಕೈಯಲ್ಲಿತ್ತು. ಅಜ್ಜಮ್ಮನ ಹೆಸರು ನೀ ಎಂದು. ನೀಯ ಜವಾಬ್ದಾರಿ ಗುರುತರವಾಗಿತ್ತು ಎಂದು...

ಶೇಖರನಿಗೆ ಇನ್ನೂ ಎರಡು ದಿನಗಳ ‘ವಾರ’ ಕಡಿಮೆ ಬಿದ್ದಿತ್ತು. ಎಲ್ಲಿಯೂ ಹುಟ್ಟುವಂತೆ ತೋರಲಿಲ್ಲ. ಶ್ರೀಮಾನ್ ಪದ್ಮನಾಭ ಹೆಬ್ಬಾರರ ಮನೆಯಲ್ಲಿ ಕೇಳಬೇಕೆಂದು ನಾಲ್ಕಾರು ಸಲ ಯೋಚಿಸಿದ. ಆದರೆ ಅವರು ಭಿಕ್ಷುಕರನ್ನೂ, ವರ್ಗಣಿ ಕೇಳುವವರನ್ನೂ ವಾರದ ಮಾಣಿಗಳನ್ನೂ ಅಂಗಳಕ್ಕೂ ಬರಗೊ...

ಸರ್‍ಕಸ್ಸು ಮುಗಿದರೂ ಅವನು ಅಲ್ಲಿಯೇ ಕುಳಿತಿದ್ದ. ಎಲ್ಲಾ ಎದ್ದು ಹೋಗಿದ್ದರು. ಎರಡನೇ ಷೋ ಆರಂಭವಾಗಲು ಕೆಲವೇ ಸಮಯ ಉಳಿದಿತ್ತು. ಅವನ ಕಣ್ಣುಗಳು ಏನನ್ನೋ ಹುಡುಕುತ್ತಿದ್ದವು. ಆ ಸರ್‍ಕಸ್ಸಿನ ಹುಡುಗಿ ಪ್ರವೇಶಿಸಿ ಓಡಿ ಬಂದು ಎರಡು ಬಾರಿ ಲಾಗಾ ಹಾಕಿ ಇವನ ಮುಂದೆಯೇ ನಿಂತಂತಾಯಿತು. ಆಕೆಯ...

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...