ಮೂಲಧಾತು ಒಂದೇ

ಪ್ರಿಯ ಸಖಿ,

ಇವನೊಬ್ಬ ಬೊಂಬೆ ಮಾರುವವನು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ವಿವಿಧ ರೀತಿಯ ಬೊಂಬೆಗಳನ್ನು ಬಿದಿರಿನ ದೊಡ್ಡ ಬುಟ್ಟಿಯಲ್ಲಿ ಹೊತ್ತುಕೊಂಡು ಅವನು ಬೀದಿ ಬೀದಿಗಳಲ್ಲಿ ತಿರುಗಿ ವ್ಯಾಪಾರ ಮಾಡುತ್ತಾನೆ. ಒಂದೊಂದು ಬೊಂಬೆಗೂ ಬೇರೆ ಬೇರೆ ಬೆಲೆ. ಹಾಗೇ ಬೊಂಬೆಗಳೂ ವಿಭಿನ್ನ ಆಕಾರ, ರೂಪ ಪಡೆದಿವೆ.

ಇವನ ಬುಟ್ಟಿಯಲ್ಲಿ ಎಲ್ಲ ಬೊಂಬೆಯೂ ಉಂಟು. ಗಣಪತಿ, ಕೃಷ್ಣ-ರಾಧೆ, ಶಿವ-ಪಾರ್ವತಿ, ವಿವೇಕಾನಂದ, ಗಾಂಧೀಜಿ, ಏಸುಕ್ರಿಸ್ತ, ನವಿಲು, ಡುಮ್ಮ-ಡುಮ್ಮಿ, ಗಿಣಿಗಳು, ಅಳುವ ಮಗು, ಬಸವಣ್ಣ, ಗಾಂಧೀಜಿಯವರ ತತ್ವ ಸಾರುವ ಮೂರು ಕೋತಿಗಳು…. ಒಂದೆ, ಎರಡೇ ಇವನ ಬುಟ್ಟಿ ಎಂದರೆ ಒಂದು ಮಿನಿ ಭಾರತವಿದ್ದಂತೆ! ಅದರೊಳಗೆ ಎಷ್ಟೊಂದು ಬಣ್ಣದ ವಿಭಿನ್ನ ರೀತಿಯ ಬೊಂಬೆಗಳು! ಒಂದೊಂದು ಬೊಂಬೆಗೂ ಅದರದ್ದೇ ಆದ ಮಹತ್ವ, ತತ್ವ, ಅದರದ್ದೇ ವಿಭಿನ್ನ ರೂಪು, ಚಾಪು. ಬೊಂಬೆಗೆ ಬಳಿದ ಬಣ್ಣಗಳೂ ಬೇರೆ ಬೇರೆ. ಆದರೆ ಎಲ್ಲಾ ಬೊಂಬೆಗಳನ್ನು ತಯಾರಿಸಲು ಉಪಯೋಗಿಸಿದ ಮೂಲವಸ್ತು ಮಾತ್ರ ಒಂದೇ!

ಸಖಿ, ಒಮ್ಮೆ ಆ ಬೊಂಬೆಗಳಿಗೆ ಮಾನವರನ್ನು ಹೋಲಿಸಿ ನೋಡಿಕೊಂಡರೆ, ಹೇಗೆ? ಆ ಬೊಂಬೆಗಳಂತೆಯೇ ನಮ್ಮೆಲ್ಲರ ಹುಟ್ಟಿನ ಮೂಲಧಾತು ಒಂದೇ. ಅದೇ ರಕ್ತ ಮಾಂಸ ಜೀವ… ಇತ್ಯಾದಿಗಳಲ್ಲಿ ಯಾವ ವ್ಯತ್ಯಾಸವೂ ಇಲ್ಲ. ಹುಟ್ಟಿಗೆ ಮೊದಲೇ ಮಗುವಿನ ಜಾತಿಯನ್ನು ಗುರುತಿಸುವ ಯಾವ ಸಂಕೇತವನ್ನೂ ಮಗುವಿನಲ್ಲಿ ನಾವು ಕಾಣುವುದಿಲ್ಲ. ಆದರೆ ಮಗು ಹುಟ್ಟಿದೊಡನೆ, ಹುಟ್ಟಿದ ಮನೆಯ ಜಾತಿ, ಭಾಷೆ, ಸಂಸ್ಕಾರ, ಆಚಾರ ವಿಚಾರಗಳಿಗೆ ತಕ್ಕಂತೆ ಮಗುವಿನ ಪರಿಸರವೂ ನಿರ್ಮಾಣವಾಗುತ್ತದೆ. ಮುಸಲ್ಮಾನರ ಮನೆಯಲ್ಲಿ ಹುಟ್ಟಿದ ಜೀವ ಮುಸ್ಲೀಮನಾಗುತ್ತದೆ. ಹಿಂದುವಿನ ಮನೆಯಲ್ಲಿ ಹುಟ್ಟಿದ ಜೀವ ಹಿಂದುವಾಗುತ್ತದೆ. ಹಾಗೇ ಇನ್ನಿತರ ಜಾತಿಗಳಲ್ಲಿ ಹುಟ್ಟಿದ ಜೀವವೂ ಕೂಡ.  ಆದರೆ ವಿಶಾಲಾರ್ಥದಲ್ಲಿ ವಿವೇಚಿಸಿದರೆ ನಾವಲ್ಲರೂ ಒಂದೇ!

ಈ ಸರಳ ತತ್ವವನ್ನೇ ಸಂಕುಚಿತಗೊಳಿಸಿರುವ ನಾವು ಮೇಲು-ಕೀಳು, ಶ್ರೇಷ್ಠ-ನೀಚ ಎಂದೆಲ್ಲಾ ಕಿತ್ತಾಡಿ ಹೊಡೆದಾಡುತ್ತೇವೆ. ನಮ್ಮ ಬಣ್ಣ, ರೂಪ, ಆಚಾರ, ವಿಚಾರ, ವೇಷಭೂಷಣ, ಬುದ್ಧಿ, ವಿವೇಕ ಎಲ್ಲವೂ ವಿಭಿನ್ನವಾಗಿಯೇ ಇರಬಹುದು- ಆದರೆ ಬೊಂಬೆಗೆ ಮೂಲವಸ್ತು ಒಂದೇ ಇದ್ದಂತೆ, ನಮ್ಮೆಲ್ಲರ ಹುಟ್ಟಿಗೆ ಕಾರಣವಾಗಿರುವ ಮೂಲಧಾತು ಒಂದೇ! ಇವನ್ನೆಂದೂ ನಾವು ಮರೆಯಬಾರದು. ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಶಿ
Next post ಆನಂದ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಕೆಂಪು ಲುಂಗಿ

    ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ... ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ.... ಯಾರಾದರೂ ಬಿದ್ದರೆ,… Read more…

cheap jordans|wholesale air max|wholesale jordans|wholesale jewelry|wholesale jerseys