Home / ಲೇಖನ / ಇತರೆ / ಮೂಲಧಾತು ಒಂದೇ

ಮೂಲಧಾತು ಒಂದೇ

ಪ್ರಿಯ ಸಖಿ,

ಇವನೊಬ್ಬ ಬೊಂಬೆ ಮಾರುವವನು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ವಿವಿಧ ರೀತಿಯ ಬೊಂಬೆಗಳನ್ನು ಬಿದಿರಿನ ದೊಡ್ಡ ಬುಟ್ಟಿಯಲ್ಲಿ ಹೊತ್ತುಕೊಂಡು ಅವನು ಬೀದಿ ಬೀದಿಗಳಲ್ಲಿ ತಿರುಗಿ ವ್ಯಾಪಾರ ಮಾಡುತ್ತಾನೆ. ಒಂದೊಂದು ಬೊಂಬೆಗೂ ಬೇರೆ ಬೇರೆ ಬೆಲೆ. ಹಾಗೇ ಬೊಂಬೆಗಳೂ ವಿಭಿನ್ನ ಆಕಾರ, ರೂಪ ಪಡೆದಿವೆ.

ಇವನ ಬುಟ್ಟಿಯಲ್ಲಿ ಎಲ್ಲ ಬೊಂಬೆಯೂ ಉಂಟು. ಗಣಪತಿ, ಕೃಷ್ಣ-ರಾಧೆ, ಶಿವ-ಪಾರ್ವತಿ, ವಿವೇಕಾನಂದ, ಗಾಂಧೀಜಿ, ಏಸುಕ್ರಿಸ್ತ, ನವಿಲು, ಡುಮ್ಮ-ಡುಮ್ಮಿ, ಗಿಣಿಗಳು, ಅಳುವ ಮಗು, ಬಸವಣ್ಣ, ಗಾಂಧೀಜಿಯವರ ತತ್ವ ಸಾರುವ ಮೂರು ಕೋತಿಗಳು…. ಒಂದೆ, ಎರಡೇ ಇವನ ಬುಟ್ಟಿ ಎಂದರೆ ಒಂದು ಮಿನಿ ಭಾರತವಿದ್ದಂತೆ! ಅದರೊಳಗೆ ಎಷ್ಟೊಂದು ಬಣ್ಣದ ವಿಭಿನ್ನ ರೀತಿಯ ಬೊಂಬೆಗಳು! ಒಂದೊಂದು ಬೊಂಬೆಗೂ ಅದರದ್ದೇ ಆದ ಮಹತ್ವ, ತತ್ವ, ಅದರದ್ದೇ ವಿಭಿನ್ನ ರೂಪು, ಚಾಪು. ಬೊಂಬೆಗೆ ಬಳಿದ ಬಣ್ಣಗಳೂ ಬೇರೆ ಬೇರೆ. ಆದರೆ ಎಲ್ಲಾ ಬೊಂಬೆಗಳನ್ನು ತಯಾರಿಸಲು ಉಪಯೋಗಿಸಿದ ಮೂಲವಸ್ತು ಮಾತ್ರ ಒಂದೇ!

ಸಖಿ, ಒಮ್ಮೆ ಆ ಬೊಂಬೆಗಳಿಗೆ ಮಾನವರನ್ನು ಹೋಲಿಸಿ ನೋಡಿಕೊಂಡರೆ, ಹೇಗೆ? ಆ ಬೊಂಬೆಗಳಂತೆಯೇ ನಮ್ಮೆಲ್ಲರ ಹುಟ್ಟಿನ ಮೂಲಧಾತು ಒಂದೇ. ಅದೇ ರಕ್ತ ಮಾಂಸ ಜೀವ… ಇತ್ಯಾದಿಗಳಲ್ಲಿ ಯಾವ ವ್ಯತ್ಯಾಸವೂ ಇಲ್ಲ. ಹುಟ್ಟಿಗೆ ಮೊದಲೇ ಮಗುವಿನ ಜಾತಿಯನ್ನು ಗುರುತಿಸುವ ಯಾವ ಸಂಕೇತವನ್ನೂ ಮಗುವಿನಲ್ಲಿ ನಾವು ಕಾಣುವುದಿಲ್ಲ. ಆದರೆ ಮಗು ಹುಟ್ಟಿದೊಡನೆ, ಹುಟ್ಟಿದ ಮನೆಯ ಜಾತಿ, ಭಾಷೆ, ಸಂಸ್ಕಾರ, ಆಚಾರ ವಿಚಾರಗಳಿಗೆ ತಕ್ಕಂತೆ ಮಗುವಿನ ಪರಿಸರವೂ ನಿರ್ಮಾಣವಾಗುತ್ತದೆ. ಮುಸಲ್ಮಾನರ ಮನೆಯಲ್ಲಿ ಹುಟ್ಟಿದ ಜೀವ ಮುಸ್ಲೀಮನಾಗುತ್ತದೆ. ಹಿಂದುವಿನ ಮನೆಯಲ್ಲಿ ಹುಟ್ಟಿದ ಜೀವ ಹಿಂದುವಾಗುತ್ತದೆ. ಹಾಗೇ ಇನ್ನಿತರ ಜಾತಿಗಳಲ್ಲಿ ಹುಟ್ಟಿದ ಜೀವವೂ ಕೂಡ.  ಆದರೆ ವಿಶಾಲಾರ್ಥದಲ್ಲಿ ವಿವೇಚಿಸಿದರೆ ನಾವಲ್ಲರೂ ಒಂದೇ!

ಈ ಸರಳ ತತ್ವವನ್ನೇ ಸಂಕುಚಿತಗೊಳಿಸಿರುವ ನಾವು ಮೇಲು-ಕೀಳು, ಶ್ರೇಷ್ಠ-ನೀಚ ಎಂದೆಲ್ಲಾ ಕಿತ್ತಾಡಿ ಹೊಡೆದಾಡುತ್ತೇವೆ. ನಮ್ಮ ಬಣ್ಣ, ರೂಪ, ಆಚಾರ, ವಿಚಾರ, ವೇಷಭೂಷಣ, ಬುದ್ಧಿ, ವಿವೇಕ ಎಲ್ಲವೂ ವಿಭಿನ್ನವಾಗಿಯೇ ಇರಬಹುದು- ಆದರೆ ಬೊಂಬೆಗೆ ಮೂಲವಸ್ತು ಒಂದೇ ಇದ್ದಂತೆ, ನಮ್ಮೆಲ್ಲರ ಹುಟ್ಟಿಗೆ ಕಾರಣವಾಗಿರುವ ಮೂಲಧಾತು ಒಂದೇ! ಇವನ್ನೆಂದೂ ನಾವು ಮರೆಯಬಾರದು. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...