Home / ಲೇಖನ / ಇತರೆ / ಮೂಲಧಾತು ಒಂದೇ

ಮೂಲಧಾತು ಒಂದೇ

ಪ್ರಿಯ ಸಖಿ,

ಇವನೊಬ್ಬ ಬೊಂಬೆ ಮಾರುವವನು. ಪ್ಲಾಸ್ಟರ್ ಆಫ್ ಪ್ಯಾರಿಸ್ನಿಂದ ತಯಾರಿಸಿದ ವಿವಿಧ ರೀತಿಯ ಬೊಂಬೆಗಳನ್ನು ಬಿದಿರಿನ ದೊಡ್ಡ ಬುಟ್ಟಿಯಲ್ಲಿ ಹೊತ್ತುಕೊಂಡು ಅವನು ಬೀದಿ ಬೀದಿಗಳಲ್ಲಿ ತಿರುಗಿ ವ್ಯಾಪಾರ ಮಾಡುತ್ತಾನೆ. ಒಂದೊಂದು ಬೊಂಬೆಗೂ ಬೇರೆ ಬೇರೆ ಬೆಲೆ. ಹಾಗೇ ಬೊಂಬೆಗಳೂ ವಿಭಿನ್ನ ಆಕಾರ, ರೂಪ ಪಡೆದಿವೆ.

ಇವನ ಬುಟ್ಟಿಯಲ್ಲಿ ಎಲ್ಲ ಬೊಂಬೆಯೂ ಉಂಟು. ಗಣಪತಿ, ಕೃಷ್ಣ-ರಾಧೆ, ಶಿವ-ಪಾರ್ವತಿ, ವಿವೇಕಾನಂದ, ಗಾಂಧೀಜಿ, ಏಸುಕ್ರಿಸ್ತ, ನವಿಲು, ಡುಮ್ಮ-ಡುಮ್ಮಿ, ಗಿಣಿಗಳು, ಅಳುವ ಮಗು, ಬಸವಣ್ಣ, ಗಾಂಧೀಜಿಯವರ ತತ್ವ ಸಾರುವ ಮೂರು ಕೋತಿಗಳು…. ಒಂದೆ, ಎರಡೇ ಇವನ ಬುಟ್ಟಿ ಎಂದರೆ ಒಂದು ಮಿನಿ ಭಾರತವಿದ್ದಂತೆ! ಅದರೊಳಗೆ ಎಷ್ಟೊಂದು ಬಣ್ಣದ ವಿಭಿನ್ನ ರೀತಿಯ ಬೊಂಬೆಗಳು! ಒಂದೊಂದು ಬೊಂಬೆಗೂ ಅದರದ್ದೇ ಆದ ಮಹತ್ವ, ತತ್ವ, ಅದರದ್ದೇ ವಿಭಿನ್ನ ರೂಪು, ಚಾಪು. ಬೊಂಬೆಗೆ ಬಳಿದ ಬಣ್ಣಗಳೂ ಬೇರೆ ಬೇರೆ. ಆದರೆ ಎಲ್ಲಾ ಬೊಂಬೆಗಳನ್ನು ತಯಾರಿಸಲು ಉಪಯೋಗಿಸಿದ ಮೂಲವಸ್ತು ಮಾತ್ರ ಒಂದೇ!

ಸಖಿ, ಒಮ್ಮೆ ಆ ಬೊಂಬೆಗಳಿಗೆ ಮಾನವರನ್ನು ಹೋಲಿಸಿ ನೋಡಿಕೊಂಡರೆ, ಹೇಗೆ? ಆ ಬೊಂಬೆಗಳಂತೆಯೇ ನಮ್ಮೆಲ್ಲರ ಹುಟ್ಟಿನ ಮೂಲಧಾತು ಒಂದೇ. ಅದೇ ರಕ್ತ ಮಾಂಸ ಜೀವ… ಇತ್ಯಾದಿಗಳಲ್ಲಿ ಯಾವ ವ್ಯತ್ಯಾಸವೂ ಇಲ್ಲ. ಹುಟ್ಟಿಗೆ ಮೊದಲೇ ಮಗುವಿನ ಜಾತಿಯನ್ನು ಗುರುತಿಸುವ ಯಾವ ಸಂಕೇತವನ್ನೂ ಮಗುವಿನಲ್ಲಿ ನಾವು ಕಾಣುವುದಿಲ್ಲ. ಆದರೆ ಮಗು ಹುಟ್ಟಿದೊಡನೆ, ಹುಟ್ಟಿದ ಮನೆಯ ಜಾತಿ, ಭಾಷೆ, ಸಂಸ್ಕಾರ, ಆಚಾರ ವಿಚಾರಗಳಿಗೆ ತಕ್ಕಂತೆ ಮಗುವಿನ ಪರಿಸರವೂ ನಿರ್ಮಾಣವಾಗುತ್ತದೆ. ಮುಸಲ್ಮಾನರ ಮನೆಯಲ್ಲಿ ಹುಟ್ಟಿದ ಜೀವ ಮುಸ್ಲೀಮನಾಗುತ್ತದೆ. ಹಿಂದುವಿನ ಮನೆಯಲ್ಲಿ ಹುಟ್ಟಿದ ಜೀವ ಹಿಂದುವಾಗುತ್ತದೆ. ಹಾಗೇ ಇನ್ನಿತರ ಜಾತಿಗಳಲ್ಲಿ ಹುಟ್ಟಿದ ಜೀವವೂ ಕೂಡ.  ಆದರೆ ವಿಶಾಲಾರ್ಥದಲ್ಲಿ ವಿವೇಚಿಸಿದರೆ ನಾವಲ್ಲರೂ ಒಂದೇ!

ಈ ಸರಳ ತತ್ವವನ್ನೇ ಸಂಕುಚಿತಗೊಳಿಸಿರುವ ನಾವು ಮೇಲು-ಕೀಳು, ಶ್ರೇಷ್ಠ-ನೀಚ ಎಂದೆಲ್ಲಾ ಕಿತ್ತಾಡಿ ಹೊಡೆದಾಡುತ್ತೇವೆ. ನಮ್ಮ ಬಣ್ಣ, ರೂಪ, ಆಚಾರ, ವಿಚಾರ, ವೇಷಭೂಷಣ, ಬುದ್ಧಿ, ವಿವೇಕ ಎಲ್ಲವೂ ವಿಭಿನ್ನವಾಗಿಯೇ ಇರಬಹುದು- ಆದರೆ ಬೊಂಬೆಗೆ ಮೂಲವಸ್ತು ಒಂದೇ ಇದ್ದಂತೆ, ನಮ್ಮೆಲ್ಲರ ಹುಟ್ಟಿಗೆ ಕಾರಣವಾಗಿರುವ ಮೂಲಧಾತು ಒಂದೇ! ಇವನ್ನೆಂದೂ ನಾವು ಮರೆಯಬಾರದು. ಅಲ್ಲವೇ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...