ಮಗುವೊಂದು ವ್ಯಕ್ತಿ

ಮಗುವೊಂದು ವ್ಯಕ್ತಿ

Tande Maguಪ್ರಿಯ ಸಖಿ,

ಮಗುವಿಗೆ  ಏನು ತಿಳಿಯುತ್ತದೆ? ಅದು ನಾವು ಹೇಳಿಕೊಟ್ಟಂತೆ ಕಲಿಯುತ್ತಾ ಹೋಗುತ್ತದೆ. ಅದಕ್ಕೆ ತನ್ನದೇ ಆದ ವ್ಯಕ್ತಿತ್ವವೆಂಬುದಿರುವುದಿಲ್ಲ ಎಂಬುದು ನಮ್ಮ ಸಾಮಾನ್ಯ ಅಭಿಪ್ರಾಯ. ಅದರೆ ಬಹುಸೂಕ್ಷ್ಮವಾಗಿ ಮಗುವೊಂದನ್ನು ಗಮನಿಸಿದರೆ ಈ ನಮ್ಮ ಅಭಿಪ್ರಾಯ ತಪ್ಪೆಂದು ಸಾಬೀತಾಗುತ್ತದೆ.

ಮಕ್ಕಳ ಮನಸ್ಸೊಂದು ಕಪ್ಪು ಹಲಗೆಯಂತೆ. ಇಲ್ಲಿ ನಾವು ಏನನ್ನು ಬೇಕಾದರೂ ಬರೆಯಬಹುದು ಎಂಬುದು ಪಾಶ್ಚಾತ್ಯ ಅಭಿಪ್ರಾಯ. ಆದರೆ ಇತ್ತೀಚೆಗೆ ನಾವೂ ಇದನ್ನೇ ನಂಬುತ್ತೇವೆ. ಭಾರತೀಯ ಸಂಸ್ಕೃತಿಯ ಪ್ರಕಾರ ಪ್ರತಿಯೊಂದು ಮಗುವೂ ಒಂದು ವ್ಯಕ್ತಿ. ಇಲ್ಲಿ ಪ್ರತಿಯೊಬ್ಬನಲ್ಲೂ ಇರುವ ಆತ್ಮವನ್ನು ಗೌರವಿಸಿ ಮಗುವೂ ಒಂದು ವ್ಯಕ್ತಿ ಎಂದು ನಂಬಲಾಗುತ್ತದೆ.

ಮಗುವಿನ ಮನಸ್ಸು ಕಪ್ಪು ಹಲಗೆ, ನಾವೇ ಅದಕ್ಕೆ ಎಲ್ಲವನ್ನೂ ಹೇಳಿಕೊಡುತ್ತೇವೆನ್ನುವುದು ತಪ್ಪಾಗುತ್ತದೆ. ತನಗೆ ಹಸಿವಾದಾಗ ಅಳುವುದನ್ನೂ, ಹೊಸ ಆಟಿಕೆಯೊಂದು ಕೈಗೆ ಸಿಕ್ಕಾಗ ಸಂತಸದಿಂದ ನಗುವುದನ್ನೂ, ತಾಯಿಯನ್ನ ಕಂಡೊಡನೆ ಬೇರೆಯವರ ಕೈಯಿಂದ ಜಿಗಿದು ತಾಯಿಯನ್ನು ಅಪ್ಪುವುದನ್ನು ತನಗೆ ಬೇಕೆಂದ ವಸ್ತು ಸಿಗದಿದ್ದಾಗ ಸಿಟ್ಟುಗೊಳ್ಳುವುದನ್ನೂ ಮಗುವಿಗೆ ಹುಟ್ಟಿದೊಡನೆ ಯಾರು ಕಲಿಸಿದ್ದಾರೆ ?

ನಾವು ಏನನ್ನೇ ಹೊರಗಿನಿಂದ ಕಲಿಸಿದರೂ ಅದನ್ನು ಗ್ರಹಿಸುವ ಶಕ್ತಿ, ತಿಳಿದುಕೊಳ್ಳುವ, ಅರ್ಥೈಸಿಕೊಳ್ಳುವ ಮನಸ್ಸು ಮಗುವಿನಲ್ಲಿ ಹುಟ್ಟಿನಿಂದಲೇ ಇದೆ. ತಾನು ಬೆಳೆಯುತ್ತಾ ತನ್ನ ಸುತ್ತಲಿನ ಪರಿಸರವನ್ನು ಮಗು ತನ್ನ ದೃಷ್ಟಿಕೋನದಂತೆಯೇ ಅರ್ಥೈಸುತ್ತಾ ಹೋಗುತ್ತದೆ. ಪುಟ್ಟ ಮಗುವಿಗೂ ತನ್ನದೇ ಇಷ್ಟಾನಿಷ್ಟಗಳೂ, ನಿಲುವುಗಳು ಇರುವುದನ್ನು ಗಮನಿಸಬಹುದು. ಅದನ್ನು ಗುರುತಿಸುವ ಮನೋಭಾವ ನಮ್ಮಲ್ಲಿ ಮೂಡಬೇಕಷ್ಟೇ.

ಪ್ರತಿಯೊಂದು ಮಗುವಿಗೂ ಹಿರಿಯರಂತೆಯೇ ಎಲ್ಲ ಸನ್ನಿವೇಶಗಳಿಗೂ ಸ್ಪಂದಿಸಿ ಮೂಡುವ ಸಂವೇದನೆಗಳಿವೆ. ಅವುಗಳಿಗೆ ನಾವು ಬೆಲೆಕೊಡಬೇಕು. ಹಾಗೂ ಅವುಗಳನ್ನು ಗೌರವಿಸಬೇಕು. ಅದು ಬಿಟ್ಟು ನಮ್ಮ ಅನಿಸಿಕೆ, ಅಭಿಪ್ರಾಯಗಳನ್ನೆಲ್ಲ ಮಗುವಿನ ಮೇಲೆ ಬಲವಂತವಾಗಿ ಹೇರುವುದರಿಂದ ಮಗುವಿನ ಸೂಕ್ಷ್ಮಸಂವೇದನೆಗಳು ಘಾಸಿಗೊಂಡು, ದೊಡ್ಡದಾದಂತೆಲ್ಲ ಸ್ವತಂತ್ರ ವ್ಯಕ್ತಿತ್ವವಿಲ್ಲದೇ, ಕೀಳರಿಮೆಯಿಂದ, ಮನೋವೇದನೆಯಿಂದ ನರಳುವಂತಾಗುತ್ತದೆ ಎನ್ನುತ್ತಾರೆ ಮಕ್ಕಳ ಮಾನಸಿಕ ತಜ್ಞರು.

ಸಖಿ, ಪ್ರತಿಯೊಂದು ಮಗುವೂ ತನ್ನ ಭಾವನೆಗಳಿಂದ ತನ್ನಂತೆಯೇ ತಾನೇ ವಿಕಸಿಸಿ, ಅರಳಲು, ಪರಿಮಳ ಸೂಸಲು ಬಿಡಬೇಕು. ಅದಕ್ಕೆ ತನ್ನ ಪೂರಕ ಪರಿಸರವನ್ನೇ ಹಿರಿಯರು ಪೂರೈಸಿಕೊಡಬೇಕು. ಮಗುವೂ ಒಂದು ವ್ಯಕ್ತಿ. ಅದು ನಾವು ತುಂಬಿದ ವಿಷಯಗಳನ್ನೇ ಕಕ್ಕುವ ಕಂಪ್ಯೂಟರ್ ಅಲ್ಲ ಎಂಬುವುದನ್ನು ನಾವು ತಿಳಿದಿರಬೇಕು. ಮಗುವಿನ ಮನಸ್ಸೊಂದು ವಿಶಾಲ ವಿಶ್ವವಿದ್ದಂತೆ. ಅದು ತನಗೆ ಬೇಕೆಂದೆಡೆ ಹಾರಿ, ಬೇಕೆನಿಸಿದ್ದನ್ನು ಪಡಯಬಲ್ಲದು. ಮಗುವನ್ನು ನಮ್ಮ ಮಿತಿಯಲ್ಲಿಯಷ್ಟೇ ಅರ್ಧೈಸಿಕೊಂಡು ಅದಕ್ಕೆ ಸಂಕೋಲೆಯನ್ನು ತೊಡಿಸುವುದು ಬೇಡ. ಅಲ್ಲವೇ ಸಖಿ ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾಣಬೇಕಿಲ್ಲ
Next post ದ್ವಂದ್ವ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

cheap jordans|wholesale air max|wholesale jordans|wholesale jewelry|wholesale jerseys