Home / ಲೇಖನ / ಇತರೆ / ಮಗುವೊಂದು ವ್ಯಕ್ತಿ

ಮಗುವೊಂದು ವ್ಯಕ್ತಿ

Tande Maguಪ್ರಿಯ ಸಖಿ,

ಮಗುವಿಗೆ  ಏನು ತಿಳಿಯುತ್ತದೆ? ಅದು ನಾವು ಹೇಳಿಕೊಟ್ಟಂತೆ ಕಲಿಯುತ್ತಾ ಹೋಗುತ್ತದೆ. ಅದಕ್ಕೆ ತನ್ನದೇ ಆದ ವ್ಯಕ್ತಿತ್ವವೆಂಬುದಿರುವುದಿಲ್ಲ ಎಂಬುದು ನಮ್ಮ ಸಾಮಾನ್ಯ ಅಭಿಪ್ರಾಯ. ಅದರೆ ಬಹುಸೂಕ್ಷ್ಮವಾಗಿ ಮಗುವೊಂದನ್ನು ಗಮನಿಸಿದರೆ ಈ ನಮ್ಮ ಅಭಿಪ್ರಾಯ ತಪ್ಪೆಂದು ಸಾಬೀತಾಗುತ್ತದೆ.

ಮಕ್ಕಳ ಮನಸ್ಸೊಂದು ಕಪ್ಪು ಹಲಗೆಯಂತೆ. ಇಲ್ಲಿ ನಾವು ಏನನ್ನು ಬೇಕಾದರೂ ಬರೆಯಬಹುದು ಎಂಬುದು ಪಾಶ್ಚಾತ್ಯ ಅಭಿಪ್ರಾಯ. ಆದರೆ ಇತ್ತೀಚೆಗೆ ನಾವೂ ಇದನ್ನೇ ನಂಬುತ್ತೇವೆ. ಭಾರತೀಯ ಸಂಸ್ಕೃತಿಯ ಪ್ರಕಾರ ಪ್ರತಿಯೊಂದು ಮಗುವೂ ಒಂದು ವ್ಯಕ್ತಿ. ಇಲ್ಲಿ ಪ್ರತಿಯೊಬ್ಬನಲ್ಲೂ ಇರುವ ಆತ್ಮವನ್ನು ಗೌರವಿಸಿ ಮಗುವೂ ಒಂದು ವ್ಯಕ್ತಿ ಎಂದು ನಂಬಲಾಗುತ್ತದೆ.

ಮಗುವಿನ ಮನಸ್ಸು ಕಪ್ಪು ಹಲಗೆ, ನಾವೇ ಅದಕ್ಕೆ ಎಲ್ಲವನ್ನೂ ಹೇಳಿಕೊಡುತ್ತೇವೆನ್ನುವುದು ತಪ್ಪಾಗುತ್ತದೆ. ತನಗೆ ಹಸಿವಾದಾಗ ಅಳುವುದನ್ನೂ, ಹೊಸ ಆಟಿಕೆಯೊಂದು ಕೈಗೆ ಸಿಕ್ಕಾಗ ಸಂತಸದಿಂದ ನಗುವುದನ್ನೂ, ತಾಯಿಯನ್ನ ಕಂಡೊಡನೆ ಬೇರೆಯವರ ಕೈಯಿಂದ ಜಿಗಿದು ತಾಯಿಯನ್ನು ಅಪ್ಪುವುದನ್ನು ತನಗೆ ಬೇಕೆಂದ ವಸ್ತು ಸಿಗದಿದ್ದಾಗ ಸಿಟ್ಟುಗೊಳ್ಳುವುದನ್ನೂ ಮಗುವಿಗೆ ಹುಟ್ಟಿದೊಡನೆ ಯಾರು ಕಲಿಸಿದ್ದಾರೆ ?

ನಾವು ಏನನ್ನೇ ಹೊರಗಿನಿಂದ ಕಲಿಸಿದರೂ ಅದನ್ನು ಗ್ರಹಿಸುವ ಶಕ್ತಿ, ತಿಳಿದುಕೊಳ್ಳುವ, ಅರ್ಥೈಸಿಕೊಳ್ಳುವ ಮನಸ್ಸು ಮಗುವಿನಲ್ಲಿ ಹುಟ್ಟಿನಿಂದಲೇ ಇದೆ. ತಾನು ಬೆಳೆಯುತ್ತಾ ತನ್ನ ಸುತ್ತಲಿನ ಪರಿಸರವನ್ನು ಮಗು ತನ್ನ ದೃಷ್ಟಿಕೋನದಂತೆಯೇ ಅರ್ಥೈಸುತ್ತಾ ಹೋಗುತ್ತದೆ. ಪುಟ್ಟ ಮಗುವಿಗೂ ತನ್ನದೇ ಇಷ್ಟಾನಿಷ್ಟಗಳೂ, ನಿಲುವುಗಳು ಇರುವುದನ್ನು ಗಮನಿಸಬಹುದು. ಅದನ್ನು ಗುರುತಿಸುವ ಮನೋಭಾವ ನಮ್ಮಲ್ಲಿ ಮೂಡಬೇಕಷ್ಟೇ.

ಪ್ರತಿಯೊಂದು ಮಗುವಿಗೂ ಹಿರಿಯರಂತೆಯೇ ಎಲ್ಲ ಸನ್ನಿವೇಶಗಳಿಗೂ ಸ್ಪಂದಿಸಿ ಮೂಡುವ ಸಂವೇದನೆಗಳಿವೆ. ಅವುಗಳಿಗೆ ನಾವು ಬೆಲೆಕೊಡಬೇಕು. ಹಾಗೂ ಅವುಗಳನ್ನು ಗೌರವಿಸಬೇಕು. ಅದು ಬಿಟ್ಟು ನಮ್ಮ ಅನಿಸಿಕೆ, ಅಭಿಪ್ರಾಯಗಳನ್ನೆಲ್ಲ ಮಗುವಿನ ಮೇಲೆ ಬಲವಂತವಾಗಿ ಹೇರುವುದರಿಂದ ಮಗುವಿನ ಸೂಕ್ಷ್ಮಸಂವೇದನೆಗಳು ಘಾಸಿಗೊಂಡು, ದೊಡ್ಡದಾದಂತೆಲ್ಲ ಸ್ವತಂತ್ರ ವ್ಯಕ್ತಿತ್ವವಿಲ್ಲದೇ, ಕೀಳರಿಮೆಯಿಂದ, ಮನೋವೇದನೆಯಿಂದ ನರಳುವಂತಾಗುತ್ತದೆ ಎನ್ನುತ್ತಾರೆ ಮಕ್ಕಳ ಮಾನಸಿಕ ತಜ್ಞರು.

ಸಖಿ, ಪ್ರತಿಯೊಂದು ಮಗುವೂ ತನ್ನ ಭಾವನೆಗಳಿಂದ ತನ್ನಂತೆಯೇ ತಾನೇ ವಿಕಸಿಸಿ, ಅರಳಲು, ಪರಿಮಳ ಸೂಸಲು ಬಿಡಬೇಕು. ಅದಕ್ಕೆ ತನ್ನ ಪೂರಕ ಪರಿಸರವನ್ನೇ ಹಿರಿಯರು ಪೂರೈಸಿಕೊಡಬೇಕು. ಮಗುವೂ ಒಂದು ವ್ಯಕ್ತಿ. ಅದು ನಾವು ತುಂಬಿದ ವಿಷಯಗಳನ್ನೇ ಕಕ್ಕುವ ಕಂಪ್ಯೂಟರ್ ಅಲ್ಲ ಎಂಬುವುದನ್ನು ನಾವು ತಿಳಿದಿರಬೇಕು. ಮಗುವಿನ ಮನಸ್ಸೊಂದು ವಿಶಾಲ ವಿಶ್ವವಿದ್ದಂತೆ. ಅದು ತನಗೆ ಬೇಕೆಂದೆಡೆ ಹಾರಿ, ಬೇಕೆನಿಸಿದ್ದನ್ನು ಪಡಯಬಲ್ಲದು. ಮಗುವನ್ನು ನಮ್ಮ ಮಿತಿಯಲ್ಲಿಯಷ್ಟೇ ಅರ್ಧೈಸಿಕೊಂಡು ಅದಕ್ಕೆ ಸಂಕೋಲೆಯನ್ನು ತೊಡಿಸುವುದು ಬೇಡ. ಅಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...