Home / ಲೇಖನ / ಇತರೆ / ಮಗುವೊಂದು ವ್ಯಕ್ತಿ

ಮಗುವೊಂದು ವ್ಯಕ್ತಿ

Tande Maguಪ್ರಿಯ ಸಖಿ,

ಮಗುವಿಗೆ  ಏನು ತಿಳಿಯುತ್ತದೆ? ಅದು ನಾವು ಹೇಳಿಕೊಟ್ಟಂತೆ ಕಲಿಯುತ್ತಾ ಹೋಗುತ್ತದೆ. ಅದಕ್ಕೆ ತನ್ನದೇ ಆದ ವ್ಯಕ್ತಿತ್ವವೆಂಬುದಿರುವುದಿಲ್ಲ ಎಂಬುದು ನಮ್ಮ ಸಾಮಾನ್ಯ ಅಭಿಪ್ರಾಯ. ಅದರೆ ಬಹುಸೂಕ್ಷ್ಮವಾಗಿ ಮಗುವೊಂದನ್ನು ಗಮನಿಸಿದರೆ ಈ ನಮ್ಮ ಅಭಿಪ್ರಾಯ ತಪ್ಪೆಂದು ಸಾಬೀತಾಗುತ್ತದೆ.

ಮಕ್ಕಳ ಮನಸ್ಸೊಂದು ಕಪ್ಪು ಹಲಗೆಯಂತೆ. ಇಲ್ಲಿ ನಾವು ಏನನ್ನು ಬೇಕಾದರೂ ಬರೆಯಬಹುದು ಎಂಬುದು ಪಾಶ್ಚಾತ್ಯ ಅಭಿಪ್ರಾಯ. ಆದರೆ ಇತ್ತೀಚೆಗೆ ನಾವೂ ಇದನ್ನೇ ನಂಬುತ್ತೇವೆ. ಭಾರತೀಯ ಸಂಸ್ಕೃತಿಯ ಪ್ರಕಾರ ಪ್ರತಿಯೊಂದು ಮಗುವೂ ಒಂದು ವ್ಯಕ್ತಿ. ಇಲ್ಲಿ ಪ್ರತಿಯೊಬ್ಬನಲ್ಲೂ ಇರುವ ಆತ್ಮವನ್ನು ಗೌರವಿಸಿ ಮಗುವೂ ಒಂದು ವ್ಯಕ್ತಿ ಎಂದು ನಂಬಲಾಗುತ್ತದೆ.

ಮಗುವಿನ ಮನಸ್ಸು ಕಪ್ಪು ಹಲಗೆ, ನಾವೇ ಅದಕ್ಕೆ ಎಲ್ಲವನ್ನೂ ಹೇಳಿಕೊಡುತ್ತೇವೆನ್ನುವುದು ತಪ್ಪಾಗುತ್ತದೆ. ತನಗೆ ಹಸಿವಾದಾಗ ಅಳುವುದನ್ನೂ, ಹೊಸ ಆಟಿಕೆಯೊಂದು ಕೈಗೆ ಸಿಕ್ಕಾಗ ಸಂತಸದಿಂದ ನಗುವುದನ್ನೂ, ತಾಯಿಯನ್ನ ಕಂಡೊಡನೆ ಬೇರೆಯವರ ಕೈಯಿಂದ ಜಿಗಿದು ತಾಯಿಯನ್ನು ಅಪ್ಪುವುದನ್ನು ತನಗೆ ಬೇಕೆಂದ ವಸ್ತು ಸಿಗದಿದ್ದಾಗ ಸಿಟ್ಟುಗೊಳ್ಳುವುದನ್ನೂ ಮಗುವಿಗೆ ಹುಟ್ಟಿದೊಡನೆ ಯಾರು ಕಲಿಸಿದ್ದಾರೆ ?

ನಾವು ಏನನ್ನೇ ಹೊರಗಿನಿಂದ ಕಲಿಸಿದರೂ ಅದನ್ನು ಗ್ರಹಿಸುವ ಶಕ್ತಿ, ತಿಳಿದುಕೊಳ್ಳುವ, ಅರ್ಥೈಸಿಕೊಳ್ಳುವ ಮನಸ್ಸು ಮಗುವಿನಲ್ಲಿ ಹುಟ್ಟಿನಿಂದಲೇ ಇದೆ. ತಾನು ಬೆಳೆಯುತ್ತಾ ತನ್ನ ಸುತ್ತಲಿನ ಪರಿಸರವನ್ನು ಮಗು ತನ್ನ ದೃಷ್ಟಿಕೋನದಂತೆಯೇ ಅರ್ಥೈಸುತ್ತಾ ಹೋಗುತ್ತದೆ. ಪುಟ್ಟ ಮಗುವಿಗೂ ತನ್ನದೇ ಇಷ್ಟಾನಿಷ್ಟಗಳೂ, ನಿಲುವುಗಳು ಇರುವುದನ್ನು ಗಮನಿಸಬಹುದು. ಅದನ್ನು ಗುರುತಿಸುವ ಮನೋಭಾವ ನಮ್ಮಲ್ಲಿ ಮೂಡಬೇಕಷ್ಟೇ.

ಪ್ರತಿಯೊಂದು ಮಗುವಿಗೂ ಹಿರಿಯರಂತೆಯೇ ಎಲ್ಲ ಸನ್ನಿವೇಶಗಳಿಗೂ ಸ್ಪಂದಿಸಿ ಮೂಡುವ ಸಂವೇದನೆಗಳಿವೆ. ಅವುಗಳಿಗೆ ನಾವು ಬೆಲೆಕೊಡಬೇಕು. ಹಾಗೂ ಅವುಗಳನ್ನು ಗೌರವಿಸಬೇಕು. ಅದು ಬಿಟ್ಟು ನಮ್ಮ ಅನಿಸಿಕೆ, ಅಭಿಪ್ರಾಯಗಳನ್ನೆಲ್ಲ ಮಗುವಿನ ಮೇಲೆ ಬಲವಂತವಾಗಿ ಹೇರುವುದರಿಂದ ಮಗುವಿನ ಸೂಕ್ಷ್ಮಸಂವೇದನೆಗಳು ಘಾಸಿಗೊಂಡು, ದೊಡ್ಡದಾದಂತೆಲ್ಲ ಸ್ವತಂತ್ರ ವ್ಯಕ್ತಿತ್ವವಿಲ್ಲದೇ, ಕೀಳರಿಮೆಯಿಂದ, ಮನೋವೇದನೆಯಿಂದ ನರಳುವಂತಾಗುತ್ತದೆ ಎನ್ನುತ್ತಾರೆ ಮಕ್ಕಳ ಮಾನಸಿಕ ತಜ್ಞರು.

ಸಖಿ, ಪ್ರತಿಯೊಂದು ಮಗುವೂ ತನ್ನ ಭಾವನೆಗಳಿಂದ ತನ್ನಂತೆಯೇ ತಾನೇ ವಿಕಸಿಸಿ, ಅರಳಲು, ಪರಿಮಳ ಸೂಸಲು ಬಿಡಬೇಕು. ಅದಕ್ಕೆ ತನ್ನ ಪೂರಕ ಪರಿಸರವನ್ನೇ ಹಿರಿಯರು ಪೂರೈಸಿಕೊಡಬೇಕು. ಮಗುವೂ ಒಂದು ವ್ಯಕ್ತಿ. ಅದು ನಾವು ತುಂಬಿದ ವಿಷಯಗಳನ್ನೇ ಕಕ್ಕುವ ಕಂಪ್ಯೂಟರ್ ಅಲ್ಲ ಎಂಬುವುದನ್ನು ನಾವು ತಿಳಿದಿರಬೇಕು. ಮಗುವಿನ ಮನಸ್ಸೊಂದು ವಿಶಾಲ ವಿಶ್ವವಿದ್ದಂತೆ. ಅದು ತನಗೆ ಬೇಕೆಂದೆಡೆ ಹಾರಿ, ಬೇಕೆನಿಸಿದ್ದನ್ನು ಪಡಯಬಲ್ಲದು. ಮಗುವನ್ನು ನಮ್ಮ ಮಿತಿಯಲ್ಲಿಯಷ್ಟೇ ಅರ್ಧೈಸಿಕೊಂಡು ಅದಕ್ಕೆ ಸಂಕೋಲೆಯನ್ನು ತೊಡಿಸುವುದು ಬೇಡ. ಅಲ್ಲವೇ ಸಖಿ ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...