Home / ಲೇಖನ / ಇತರೆ / ಧನಾತ್ಮಕ ನಿಲುವು

ಧನಾತ್ಮಕ ನಿಲುವು

ಪ್ರಿಯ ಸಖಿ,

ಬ್ರಿಟೀಷರೊಡನೆ ಭಾರತದ ಪರವಾಗಿ ವಾದ ಮಾಡಿ ಸ್ವಾತಂತ್ರ್ಯ ಪಡೆಯಲೆಂದು ದುಂಡು ಮೇಜಿನ ಗೋಷ್ಠಿಗಾಗಿ ಗಾಂಧೀಜಿ, ಹಡಗಿನಲ್ಲಿ ಅವರ ನಾಡಿಗೆ ಹೊರಟಾಗ, ಅವರ ಜೊತೆಗೆ ಹಡಗಿನಲ್ಲಿದ್ದ ಕೆಲವು ಬ್ರಿಟೀಷ್ ಜನರು ಗಾಂಧೀಜಿಯೊಡನೆ ಬೆಳಗು ರಾತ್ರಿ ಚರ್ಚಿಸುತ್ತಿದ್ದರು. ನಾವು ಭಾರತವನ್ನು ಬಿಟ್ಟು ಹೋದರೆ ಭಾರತಕ್ಕೆ ದುರ್ಗತಿ ತಪ್ಪಿದ್ದಲ್ಲ. ಆದ್ದರಿಂದ ನಾವು ನಿಮ್ಮನ್ನು ಆಳುವುದೇ ಕ್ಷೇಮ ಇತ್ಯಾದಿ ಮಾತನಾಡುತ್ತಿದ್ದರು. ಗಾಂಧೀಜಿಯವರೂ ನಮ್ಮ ದೇಶದ ಪರವಾಗಿ ನಿರಂತರವಾಗಿ ವಾದ ಮಾಡುತ್ತಿದ್ದರು.

ಕೊನೆಗೊಮ್ಮೆ ತಮ್ಮ ಪರವಾದವನ್ನೆಲ್ಲಾ ೪-೫ ಪುಟಗಳಷ್ಟು ನೋಟ್ಸ್‌ ಬರೆದು ಅದಕ್ಕೊಂದು ಗುಂಡುಸೂಜಿ ಚುಚ್ಚಿ ಆ ಆಂಗ್ಲ ಜನರು ಗಾಂಧೀಜಿಗೆ ನೀಡಿ ನಮ್ಮ
ವಾದವನ್ನೆಲ್ಲಾ ಇದರಲ್ಲಿ ಮಂಡಿಸಿದ್ದೇವೆ. ನಿಮಗೆ ಇದರಿಂದ ನಮ್ಮ ನಿಲುವು ಸ್ಪಷ್ಟವಾಗಬಹುದು. ಹಾಗೇ ಅದರಿಂದ ನಿಮ್ಮ ಮನಪರಿವರ್ತನೆಯಾಗಲು ಉಪಯೋಗ
ವಾಗಬಹುದು ಎಂದರು.

ಗಾಂಧೀಜಿ ಆ ನೋಟ್ಸನ್ನು ತೆಗೆದುಕೊಂಡರು. ಮಾರನೆಯ ದಿನ ಅವರಿದ್ದಲ್ಲಿಗೆ ಆಗಮಿಸಿದ ಆಂಗ್ಲರು ನಮ್ಮ ನೋಟ್ಸ್‌ ಓದಿದಿರಾ? ಎಂದರು. ಗಾಂಧೀಜಿ ಓದಿದೆ ಎಂದರು. ಅದಕ್ಕವರು ಹಾಗಿದ್ದರೆ ಅದರಲ್ಲಿ ನಿಮಗೆ ಏನಾದರೂ ಬೆಲೆಯುಳ್ಳದ್ದು ಇದೆ ಎನಿಸಿತೇ? ಎಂದು ಕೇಳಿದರು. ನಾನಾಗಲೇ ಬೆಲೆಯುಳ್ಳದ್ದನ್ನು  ತೆಗೆದಿರಿಸಿಕೊಂಡಿದ್ದೇನೆ ಎಂದು ಆ ನೋಟ್ಸಿಗೆ ಚುಚ್ಚಿದ್ದ ಹೊಸ ಗುಂಡು ಸೂಜಿಯನ್ನು ತೋರಿಸಿ ನಕ್ಕರು ಗಾಂಧೀಜಿ.

ಈ ಒಂದು ಪ್ರಸಂಗದಿಂದ ಗಾಂಧೀಜಿಯವರು ಎಷ್ಟೊಂದು ನಿಷ್ಟುರವಾದಿಗಳೂ, ದೇಶಪ್ರೇಮಿಗಳೂ ಆಗಿದ್ದರು ಎಂದು ತಿಳಿಯುವ ಹಾಗೆ ತಮಗೆ ಇಷ್ಟವಿಲ್ಲವೆನಿಸಿದ
ಸಂಗತಿಗಳಿಂದಲೂ ತಮಗೆ ಉಪಯೋಗಿಯಾಗುವಂತಹುದನ್ನು ತೆಗೆದುಕೊಳ್ಳುವ ಧನಾತ್ಮಕ ನಿಲುವು (Positive thinking) ಹೊಂದಿದ್ದರು ಎಂಬುದು ಸ್ಪಷ್ಟವಾಗುತ್ತದೆ.

ಸಖಿ, ನಮ್ಮ ಬದುಕಿನಲ್ಲೂ ನಮಗೆ ಬೇಡವಾದ ಎಷ್ಟೊಂದು ಸಂಗತಿಗಳು ನಡೆಯುತ್ತಿರುತ್ತವೆ. ಬೇಡದ ವ್ಯಕ್ತಿಗಳೊಂದಿಗೆ ವ್ಯವಹರಿಸಬೇಕಾಗುತ್ತದೆ. ಆಗೆಲ್ಲಾ ಮನಸ್ಸು ಕಹಿಯಾಗುತ್ತದೆ.  ಅದರೆ ಅಂತಹ ಕೆಡುಕಿನಲ್ಲೂ ಒಳಿತನ್ನು, ಧನಾತ್ಮಕ ನಿಲುವನ್ನು ನಾವು ಬೆಳೆಸಿಕೊಂಡರೆ ನಿಜಕ್ಕೂ ಬದುಕು ಸುಂದರವಾಗುತ್ತದೆ. ಕೆಟ್ಟದ್ದರಲ್ಲಿಯೂ ನಮಗೆ ಉಪಯೋಗವಾಗಬಲ್ಲ ಒಳಿತನ್ನು ಆರಿಸಿಕೊಳ್ಳುವುದೇ ನಿಜವಾದ ಜಾಣತನವಲ್ಲವೆ ಸಖಿ?
*****

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ ಎನ್ ಎಸ್ ರಾವ್