Home / ಲೇಖನ / ಇತರೆ / ಧನಾತ್ಮಕ ನಿಲುವು

ಧನಾತ್ಮಕ ನಿಲುವು

ಪ್ರಿಯ ಸಖಿ,

ಬ್ರಿಟೀಷರೊಡನೆ ಭಾರತದ ಪರವಾಗಿ ವಾದ ಮಾಡಿ ಸ್ವಾತಂತ್ರ್ಯ ಪಡೆಯಲೆಂದು ದುಂಡು ಮೇಜಿನ ಗೋಷ್ಠಿಗಾಗಿ ಗಾಂಧೀಜಿ, ಹಡಗಿನಲ್ಲಿ ಅವರ ನಾಡಿಗೆ ಹೊರಟಾಗ, ಅವರ ಜೊತೆಗೆ ಹಡಗಿನಲ್ಲಿದ್ದ ಕೆಲವು ಬ್ರಿಟೀಷ್ ಜನರು ಗಾಂಧೀಜಿಯೊಡನೆ ಬೆಳಗು ರಾತ್ರಿ ಚರ್ಚಿಸುತ್ತಿದ್ದರು. ನಾವು ಭಾರತವನ್ನು ಬಿಟ್ಟು ಹೋದರೆ ಭಾರತಕ್ಕೆ ದುರ್ಗತಿ ತಪ್ಪಿದ್ದಲ್ಲ. ಆದ್ದರಿಂದ ನಾವು ನಿಮ್ಮನ್ನು ಆಳುವುದೇ ಕ್ಷೇಮ ಇತ್ಯಾದಿ ಮಾತನಾಡುತ್ತಿದ್ದರು. ಗಾಂಧೀಜಿಯವರೂ ನಮ್ಮ ದೇಶದ ಪರವಾಗಿ ನಿರಂತರವಾಗಿ ವಾದ ಮಾಡುತ್ತಿದ್ದರು.

ಕೊನೆಗೊಮ್ಮೆ ತಮ್ಮ ಪರವಾದವನ್ನೆಲ್ಲಾ ೪-೫ ಪುಟಗಳಷ್ಟು ನೋಟ್ಸ್‌ ಬರೆದು ಅದಕ್ಕೊಂದು ಗುಂಡುಸೂಜಿ ಚುಚ್ಚಿ ಆ ಆಂಗ್ಲ ಜನರು ಗಾಂಧೀಜಿಗೆ ನೀಡಿ ನಮ್ಮ
ವಾದವನ್ನೆಲ್ಲಾ ಇದರಲ್ಲಿ ಮಂಡಿಸಿದ್ದೇವೆ. ನಿಮಗೆ ಇದರಿಂದ ನಮ್ಮ ನಿಲುವು ಸ್ಪಷ್ಟವಾಗಬಹುದು. ಹಾಗೇ ಅದರಿಂದ ನಿಮ್ಮ ಮನಪರಿವರ್ತನೆಯಾಗಲು ಉಪಯೋಗ
ವಾಗಬಹುದು ಎಂದರು.

ಗಾಂಧೀಜಿ ಆ ನೋಟ್ಸನ್ನು ತೆಗೆದುಕೊಂಡರು. ಮಾರನೆಯ ದಿನ ಅವರಿದ್ದಲ್ಲಿಗೆ ಆಗಮಿಸಿದ ಆಂಗ್ಲರು ನಮ್ಮ ನೋಟ್ಸ್‌ ಓದಿದಿರಾ? ಎಂದರು. ಗಾಂಧೀಜಿ ಓದಿದೆ ಎಂದರು. ಅದಕ್ಕವರು ಹಾಗಿದ್ದರೆ ಅದರಲ್ಲಿ ನಿಮಗೆ ಏನಾದರೂ ಬೆಲೆಯುಳ್ಳದ್ದು ಇದೆ ಎನಿಸಿತೇ? ಎಂದು ಕೇಳಿದರು. ನಾನಾಗಲೇ ಬೆಲೆಯುಳ್ಳದ್ದನ್ನು  ತೆಗೆದಿರಿಸಿಕೊಂಡಿದ್ದೇನೆ ಎಂದು ಆ ನೋಟ್ಸಿಗೆ ಚುಚ್ಚಿದ್ದ ಹೊಸ ಗುಂಡು ಸೂಜಿಯನ್ನು ತೋರಿಸಿ ನಕ್ಕರು ಗಾಂಧೀಜಿ.

ಈ ಒಂದು ಪ್ರಸಂಗದಿಂದ ಗಾಂಧೀಜಿಯವರು ಎಷ್ಟೊಂದು ನಿಷ್ಟುರವಾದಿಗಳೂ, ದೇಶಪ್ರೇಮಿಗಳೂ ಆಗಿದ್ದರು ಎಂದು ತಿಳಿಯುವ ಹಾಗೆ ತಮಗೆ ಇಷ್ಟವಿಲ್ಲವೆನಿಸಿದ
ಸಂಗತಿಗಳಿಂದಲೂ ತಮಗೆ ಉಪಯೋಗಿಯಾಗುವಂತಹುದನ್ನು ತೆಗೆದುಕೊಳ್ಳುವ ಧನಾತ್ಮಕ ನಿಲುವು (Positive thinking) ಹೊಂದಿದ್ದರು ಎಂಬುದು ಸ್ಪಷ್ಟವಾಗುತ್ತದೆ.

ಸಖಿ, ನಮ್ಮ ಬದುಕಿನಲ್ಲೂ ನಮಗೆ ಬೇಡವಾದ ಎಷ್ಟೊಂದು ಸಂಗತಿಗಳು ನಡೆಯುತ್ತಿರುತ್ತವೆ. ಬೇಡದ ವ್ಯಕ್ತಿಗಳೊಂದಿಗೆ ವ್ಯವಹರಿಸಬೇಕಾಗುತ್ತದೆ. ಆಗೆಲ್ಲಾ ಮನಸ್ಸು ಕಹಿಯಾಗುತ್ತದೆ.  ಅದರೆ ಅಂತಹ ಕೆಡುಕಿನಲ್ಲೂ ಒಳಿತನ್ನು, ಧನಾತ್ಮಕ ನಿಲುವನ್ನು ನಾವು ಬೆಳೆಸಿಕೊಂಡರೆ ನಿಜಕ್ಕೂ ಬದುಕು ಸುಂದರವಾಗುತ್ತದೆ. ಕೆಟ್ಟದ್ದರಲ್ಲಿಯೂ ನಮಗೆ ಉಪಯೋಗವಾಗಬಲ್ಲ ಒಳಿತನ್ನು ಆರಿಸಿಕೊಳ್ಳುವುದೇ ನಿಜವಾದ ಜಾಣತನವಲ್ಲವೆ ಸಖಿ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...