ಹಸಿವು

ಹಸಿವು

face-867521__180ಪ್ರಿಯ ಸಖಿ,

ಅವನು ಸತ್ತು ಮಲಗಿ ಗಂಟೆಗಳೇ ಕಳೆದಿವೆ. ನಿಧಾನಕ್ಕೆ ಬರುವವರೆಲ್ಲಾ ಬಂದ ನಂತರ ಶವಸಂಸ್ಕಾರವೂ ನಡೆದಿದೆ. ಇಷ್ಟರವರೆಗೆ ನೋವಿನ ಹಿನ್ನೆಲೆಯಲ್ಲಿ ಮರೆಯಾಗಿದ್ದ ಹಸಿವು ಈಗ ಅವನ ಸಂಬಂಧಿಕರ ದೇಹದಲ್ಲಿ ಬೆಂಕಿಯಂತೆ ಸುಡುತ್ತಿರುವುದು ಗೋಚರಿಸುತ್ತದೆ. ಹೌದು ಅವರು ಏನನ್ನೂ ಸೇವಿಸದೇ ಹನ್ನೆರಡು ಗಂಟೆಗಳೇ ಕಳೆದಿವೆ. ಆದರೆ ಹಸಿವು ಎಂದು ಬಾಯಿಬಿಟ್ಟು ಹೇಳುವುದಾದರೂ ಹೇಗೆ? ಸತ್ತವನು ಎಲ್ಲರಿಗೂ ಒಂದಿಲ್ಲೊಂದು ರೀತಿಯಲ್ಲಿ ಹತ್ತಿರದ ಸಂಬಂಧಿ.

ಆ ಸಮಯದಲ್ಲಿ ಕಿಚ್ಚಿನಂತೆ ಸುಡುತ್ತಿರುವ ಹಸಿವನ್ನು ಬೈಯ್ದುಕೊಳ್ಳುವವರೇ ಹೆಚ್ಚು. ಇಷ್ಟೆಯೇ ಸಂಬಂಧಗಳನ್ನು ಕಳೆದುಕೊಂಡಾಗಿನ ನೋವಿನ ತೀವ್ರತೆ ಅವನನ್ನು ಮಣ್ಣು ಮಾಡಿ ಬಂದೊಡನೆ ಹಸಿವು ಕಾಡಲು ಪ್ರಾರಂಭಿಸಿಬಿಡಬೇಕೆ? ಹಸಿವಿನ ಮುಂದೆ ನೋವು ಎರಡನೇ ಸ್ಥಾನಕ್ಕೆ ಹೋಯಿತೇ? ಹಾಗಿದ್ದರೆ ಇಲ್ಲಿ ಎಲ್ಲಕ್ಕಿಂತಾ ಮುಖ್ಯವಾದದ್ದು ಹಸಿವು ಮಾತ್ರವೇ? ಬೇರೆಲ್ಲದ್ದಕ್ಕೂ ಇಲ್ಲಿ ಅರ್ಥವೇ ಇಲ್ಲವೇ? ಬದುಕಲು ತಿನ್ನುವುದು, ತಿನ್ನಲು ಬದುಕುವುದು, ಇವೆರಡರ ನಡುವಿನ ವ್ಯತ್ಯಾಸದ ಗೆರೆ ಪ್ರಾರಂಭವಾಗುವುದು ಎಲ್ಲಿಂದ? ಎಂಬುದು ಮನದ ಪ್ರಶ್ನೆಗಳು. ನೋವಿದೆಯೆಂದು ಎಷ್ಟು ದಿನ ಉಪವಾಸವಿರಲು ಸಾಧ್ಯ? ನೋವಿನ ತೀವ್ರತೆ ಹಸಿವಿನ ತೀವ್ರತೆಯನ್ನು ಭಂಗಿಸಲು ಸಾಧ್ಯವೇ? ಎಂಬುದು ಬುದ್ಧಿಯ ತರ್ಕ.

ಸಖಿ, ನಾವು ಮರೆತಿದ್ದೇವೆ. ಹಸಿವು ದೇಹಕ್ಕೆ ಸಂಬಂಧಿಸಿದ್ದು, ನೋವಿದೆಯೆಂದು ಏನೂ ತಿನ್ನದಿರಲಾಗುವುದಿಲ್ಲ ಎಂಬ ವಿವೇಚನೆ ಬುದ್ಧಿಗೆ ಸಂಬಂಧಿಸಿದ್ದು. ದೇಹ, ಬುದ್ಧಿ, ಮನಸ್ಸು, ಮೂರೂ ಬೇರೆ ಬೇರೆಯಾದದ್ದೆಂದು ಈ ಸಂದರ್ಭದಲ್ಲಿ ಸ್ಪಷ್ಟವಾಗಿ ಗುರುತಿಸಬಹುದು. ಹಾಗೇ ದೇಹದ ಹಸಿವಿಗೂ ಬುದ್ಧಿ, ಮನಸ್ಸುಗಳಿಗೂ ನೇರ ಸಂಬಂಧವಿಲ್ಲದಿದ್ದರೂ ನಾವು ಮೂರನ್ನೂ ಒಂದೇ ತಕ್ಕಡಿಯಲ್ಲಿಟ್ಟು ತೂಗುತ್ತೇವೆ! ಬುದ್ಧಿಯ ಹಸಿವು, ಮನಸ್ಸಿನ ಹಸಿವುಗಳು ಇದ್ದರೂ  ಅದಕ್ಕೆ ದೇಹದ ಹಸಿವಿಗೆ ನೀಡುವಷ್ಟು ಪ್ರಾಮುಖ್ಯತೆಯನ್ನು ನಾವು ಕೊಡುವುದಿಲ್ಲ. ಏಕೆಂದರೆ ದೇಹದ ಹಸಿವು ಜೀವಕ್ಕೆ ಮೂಲವಾದುದು ಅದನ್ನು ಹಿಂಗಿಸಲೇಬೇಕು. ಅದು ಅನಿವಾರ್ಯ. ಆದರೆ ಬುದ್ಧಿಯ ಹಸಿವು; ಮನಸ್ಸಿನ ಹಸಿವುಗಳನ್ನು ಹಿಂಗಿಸಲೇಬೇಕಾದ ಅನಿವಾರ್ಯತೆ ಇಲ್ಲವೆಂದೇ ಅದು ಹಿಂದಕ್ಕೆ ತಳ್ಳಲ್ಪಟ್ಟಿದೆ.

ಬುದ್ಧಿಯ ಹಸಿವು ಇಂಗಿಸಲು ವಿಚಾರಗಳ, ಚಿಂತನಗಳ ಅವಶ್ಯಕತೆ ಇರುವಂತೆ ಮನಸ್ಸಿನ ಹಸಿವು ಇಂಗಿಸಲು ಪ್ರೀತಿ, ಅಕ್ಕರೆ, ಅಭಿಮಾನ, ಸ್ನೇಹ ಮುಂತಾದ ಭಾವನೆಗಳ ಅವಶ್ಯಕತೆ ಇದೆ. ಆದರೆ ದೇಹದ ಹಸಿವನ್ನು ಪೂರೈಸುವುದೇ ಮುಖ್ಯವಾಗಿ ಮಿಕ್ಕ ಹಸಿವು ಗೌಣವಾಗುತ್ತದೆ.

ಆದರೆ ಬರಿಯ ದೇಹದ ಹಸಿವನ್ನಷ್ಟೇ ಹಿಂಗಿಸಿ ಇದೇ ಬದುಕೆಂದುಕೊಂಡು ಆಯುಷ್ಯವನ್ನು ಕಳೆದರೆ ನಮಗೂ ಪ್ರಾಣಿಗಳಿಗೂ ವ್ಯತ್ಯಾಸವೇನಿದೆ? ಬುದ್ಧಿಯ ಹಸಿವೂ
ಮನಸ್ಸಿನ ಹಸಿವೂ ನಮ್ಮನ್ನು ಸುಡಬೇಕು. ಅದನ್ನು ಹಿಂಗಿಸಿಕೊಳ್ಳಲು ನಾವೂ ಪ್ರಯತ್ನಿಸಬೇಕು. ಆಗ ಬದುಕು ಸಾರ್ಥಕ ಅಲ್ಲವೇ ಸಖಿ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅನಿಶ್ಚಯತೆ
Next post ಹೊಳೆದಾಟಿದ ಮೇಲೆ….

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

cheap jordans|wholesale air max|wholesale jordans|wholesale jewelry|wholesale jerseys