Home / ಲೇಖನ / ಇತರೆ / ನಿಗೂಢ ಸತ್ಯಗಳು

ನಿಗೂಢ ಸತ್ಯಗಳು

spirit-751277_960_720ಪ್ರಿಯ ಸಖಿ,

ನೀನು ಕೇರಳದ ತಿರುವನಂತಪುರದ ಅನಂತ ಪದ್ಮನಾಭ ದೇವಾಲಯವನ್ನು ನೋಡಿರಬಹುದು. ಎಲ್ಲ ದೇವಾಲಯಗಳಂತೆ ಅದೊಂದು ದೇವಾಲಯ ಅದರಲ್ಲೇನು ವಿಶೇಷ ಎಂದು ಕೊಳ್ಳುತ್ತೀದ್ದೀಯಾ?

ಈ ದೇವಾಸ್ಥಾನದ ಅನಂತ ಪದ್ಮನಾಭಮೂರ್ತಿ ಶೇಷಶಯನವಾಗಿದ್ದು ಅದು ಹದಿನೆಂಟು ಅಡಿಗಳ ಉದ್ದವಿದೆ. ವಿಶೇಷವೆಂದರೆ ಈ ಮೂರ್ತಿ ಯನ್ನು ಪೂರ್ತಿಯಾಗಿ ನೋಡುವಂತಿಲ್ಲ. ದೂರದ ಅಂತರಗಳಲ್ಲಿ ಪಕ್ಕಪಕ್ಕದಲ್ಲೇ ಗರ್ಭಗುಡಿಗೆ ಮೂರು ಬಾಗಿಲುಗಳಿವೆ. ಒಂದೊಂದು ಬಾಗಿಲಿನಿಂದ ಮೂರ್ತಿಯ ಒಂದೊಂದು ಭಾಗವನ್ನಷ್ಟೇ ನೋಡಬಹುದಾಗಿದೆ. ಎಲ್ಲಾ ಬಾಗಿಲುಗಳಿಂದ ನೋಡಿದರೂ ಮೂರ್ತಿಯ ಪೂರ್ಣ ರೂಪವನ್ನು ಕಾಣಲಾಗುವುದಿಲ್ಲ. ಇದೇಕೆ ಹೀಗೆ ಮೂರು ಬಾಗಿಲುಗಳನ್ನು ಮಾಡಿದ್ದಾರೆ. ಒಂದು ಬಾಗಿಲು ಮಾಡಿ ಮೂರ್ತಿಯನ್ನು ಪೂರ್ಣವಾಗಿ ತೋರಿಸಿದ್ದರಾಗುತ್ತಿರಲಿಲ್ಲವೇ ಎಂದು ಹಲವರಾದರೂ ಯೋಚಿಸುತ್ತಾರೆ.

ಅದರೆ ಹೀಗೆ ಮೂರು ಬಾಗಿಲುಗಳಲ್ಲಿ ಅರ್ಥಪೂರ್ಣವಾಗಿ ಮೂರ್ತಿಯನ್ನು ತೋರಿಸುವುದರ ಹಿಂದೆ ಒಂದು ಸ್ವಾರಸ್ಯವಿದೆಯೆನಿಸುತ್ತದೆ. ಇಲ್ಲಿ ಮೂರ್ತಿಯನ್ನು ವಿಶಿಷ್ಟ ಅಥವಾ ಸತ್ಯವೆನ್ನುವುದಕ್ಕೆ, ಈ ಸೃಷ್ಟಿಗೆ ಹೋಲಿಸಿ ಪ್ರತಿಷ್ಟಾಪಿಸಿದ್ದಾರೆ. ಈ ಸೃಷ್ಟಿ, ವಿಶಿಷ್ಟ ಶಕ್ತಿ ಅಥವಾ ಸತ್ಯವೆನ್ನುವುದು ಅನಂತವಾದುದು ನಾವು ಅದನ್ನು ನಮ್ಮ ನಮ್ಮ ಮಿತಿಗಳಲ್ಲಿ, ನಮ್ಮ ಗ್ರಹಿಕೆಗೆ ಕಂಡಂತೆ ಅರ್ಧೈಸಿಕೊಳ್ಳುತ್ತೇವೆ. ಮೊದಲ ಬಾಗಿಲಲ್ಲಿ ಕಂಡ ಮೂರ್ತಿಯ ತಲೆ, ತೋಳು, ಹಾವಿನ ಹೆಡೆಯನ್ನು ನೋಡಿ ಇದೇ ಸತ್ಯ ಸೃಷ್ಟಿ ಎಂದುಕೊಳ್ಳುವಂತೆ ಎರಡನೆಯ ಬಾಗಿಲಲ್ಲಿ ಕೂಡ ಮೂರ್ತಿಯ ಎದೆ, ಹೊಟ್ಟೆ, ನಾಭಿಯನ್ನು ನೋಡಿ ಇದೇ ಸತ್ಯ ಸೃಷ್ಟಿ ಎಂದು ಕೊಳ್ಳುತ್ತೇವೆ. ಹಾಗೇ ಮೂರನೆಯ ಬಾಗಿಲಲ್ಲಿ ಕಂಡಾಗಲೂ ಕೂಡ.

ನಮ್ಮ ತಿಳಿವಿನ, ದೃಷ್ಟಿಯ, ಬುದ್ಧಿಯ ಮಿತಿಯಲ್ಲಿ ಕಂಡದ್ದಷ್ಟನ್ನೇ ನಿಜವೆಂದು ನಾವು ನಂಬುತ್ತೇವೆ. ಆದರೆ ನಾವೆಷ್ಟೇ ವೈಜ್ಞಾನಿಕವಾಗಿ ಪ್ರಗತಿ ಸಾಧಿಸಿದರೂ ನಿಜವಾಗಿಯೂ ವಿಶಿಷ್ಟ ಶಕ್ತಿ, ಈ ಸೃಷ್ಟಿ ಅಥವಾ ಸತ್ಯವೆನ್ನುವುದು ಎಂದಿಗೂ ನಮಗೆ ಸಂಪೂರ್ಣವಾಗಿ ನಿಲುಕುವುದಿಲ್ಲ. ಅದು ನಾವು ಎಷ್ಟೇ ತಿಳಿದೆವೆಂದು ಕೊಂಡರೂ ನಿಗೂಢವಾಗಿಯೇ ಇರುತ್ತದೆ ಎಂಬ ಸತ್ಯವನ್ನು ಈ ದೇವಾಲಯದಲ್ಲಿ ಮೂಡಿಸಿದ್ದಾರೆ ಎನ್ನಿಸುತ್ತದೆ.

ಸಖಿ, ನಮ್ಮ ಸಂಸ್ಕೃತಿ, ಧರ್ಮ ಎಲ್ಲವೂ ಹೀಗೇ ಅರ್ಥಗರ್ಭಿತವಾಗಿಯೂ ಪ್ರಸ್ತುತ ಬದುಕಿಗೂ ಅವಶ್ಯವಾದುದೂ ಆಗಿದೆ. ಆದರೆ ನಾವದನ್ನು ಸರಿಯಾಗಿ ಅರ್ಥೈಸಿಕೊಳ್ಳುವುದರಲ್ಲಿ ಸೋತಿದ್ದೇವೆ. ಅಥವಾ ಅರ್ಧೈಸಿಕೊಳ್ಳುವ ಗೋಜಿಗೇ ಹೋಗುತ್ತಿಲ್ಲ. ಇವುಗಳಲ್ಲೇನೂ ಹುರುಳಿಲ್ಲ, ಎಂದುಕೊಂಡಿದ್ದೇವೆ. ಒಳಗಣ್ಣು ತೆರೆದು ನೋಡಿದಾಗ ಇಂತಹ ಅನೇಕ ಬದುಕಿನ ತಾತ್ಪರ್ಯಗಳನ್ನು ನಮ್ಮ ಸುತ್ತಲೂ ಇಂಥಹ ಸಂಸ್ಕೃತಿಯ ಪ್ರತೀಕಗಳಲ್ಲಿ ಕಾಣುತ್ತಾ ಹೋಗಬಹುದು. ನಿಗೂಢತೆಯಲ್ಲಿಯೇ ಅನೇಕ ಹೊಸ ಅರ್ಥಗಳು ಗೋಚರಿಸಬಹುದು. ಕಣ್ಮುಚ್ಚಿ ಪುರಾತನವಾದುದೆಲ್ಲಾ ಕೆಲಸಕ್ಕೆ ಬಾರದ್ದೆಂದು ಹೇಳುವ ಮೊದಲು ಅದರೊಳಗಿನ ನಿಜವಾದ ಅರ್ಥವನ್ನು, ಮೌಲ್ಯವನ್ನು ಹುಡುಕುವ ಪ್ರಯತ್ನವನ್ನು, ಅದನ್ನು ನಮ್ಮ ಆಧುನಿಕ ಬದುಕಿಗೆ ಹೊಂದಿಸಿಕೊಳ್ಳುವ ಮಾರ್ಗವನ್ನು ನಾವು ಹುಡುಕಬೇಕು. ಈ ಕುರಿತು ನಿನ್ನ ನಿಲುವೇನು?
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...