Home / ಕಥೆ / ಜನಪದ / ಒಬ್ಬರಿಗಿಂತ ಒಬ್ಬರು ಮಿಗಿಲು

ಒಬ್ಬರಿಗಿಂತ ಒಬ್ಬರು ಮಿಗಿಲು

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಮೂರಂತಸ್ತಿನ ಮನೆಯ ಎಲ್ಲಕ್ಕೂ ಮೇಲಿನ ಅಂತಸ್ತಿನಲ್ಲಿ ಡೊಳ್ಳು ಹೊಟ್ಟೆಯ ಆ ಮನೆಯೊಡೆಯನು, ಚಿಕ್ಕ ಬಾಗಿಲಿನ ಒಂದು ಕದವನ್ನು ತೆರೆದು ಏನೋ ಓದುತ್ತ ಕುಳಿತಿದ್ದನು. ಅತ್ತಕಡೆಯಿಂದ ಹಾಯ್ದು ಹೋಗುವ ಒಬ್ಬ ಹುಡುಗನು ಆತನನ್ನು ನೋಡುತ್ತ ಕೆಲಹೊತ್ತು ನಿಂತುಕೊಂಡನು. ಶ್ರೀಮಂತನ ದೃಷ್ಟಿಯು ಆ ಹುಡುಗನತ್ತ ಹರಿಯಿತು. ಹುಡುಗ ನಗುತ್ತ ನಿಂತಿದ್ದಾನೆ ! ಅದನ್ನು ಕಂಡು ಶ್ರೀಮಂತನಿಗೆನಿಸಿತು – ತನ್ನ ಮನೆಯನ್ನೂ ತನ್ನ ವೈಭವವನ್ನೂ ನೋಡಿ ಆನಂದದಿಂದ ನಗುತ್ತಿದ್ದಾನೆ. ಈ ಹುಡುಗ. ಈತನಿಗೆ ಏನಾದರೂ ತಿನ್ನಲು ಮಿಠಾಯಿಕೊಡಿಸೋಣವೆಂದು ಯೋಚಿಸಿ, ಆ ಹುಡುಗನನ್ನು ಮಾತಾಡಿಸಿದನು-

“ಏನೋ, ತಮ್ಮಾ ಏಕೆ ನಗುತ್ತಿರುವಿ ?”

ಅನುಮಾನಿಸುತ್ತಲೇ ಆ ಹುಡುಗನು ಮರುನುಡಿದನು – “ಅಕಸ್ಮಾತ್ ನೀವು ಸತ್ತರೆ ನಿಮ್ಮ ಹೆಣವನ್ನು ಈಚೆಗೆ ಹೇಗೆ ತರುವುದು – ಎಂದು ಯೋಚಿಸಿ ನಕ್ಕೆನು.”

ಹುಡುಗನು ಅಧಿಕಪ್ರಸಂಗಿಯೆನ್ನುವುದು ಸ್ಪಷ್ಟವಾಯಿತು. ಅವನ ಮನೆಯೊಳಗಿನ ಹಿರಿಯರನ್ನು ಕರೆಯಿಸಿ ಈತನು ವಿವೇಕಿಯಾಗುವಂತೆ ತಿದ್ದಲು ಸೂಚಿಸಬೇಕೆಂದು ಶ್ರೀಮಂತನು ಬಗೆದನು.

“ಏ ಹುಡುಗಾ, ನಿಮ್ಮ ಮನೆಯಲ್ಲಿ ಯಾರಾರು ಇರುವಿರಿ ?”

“ನನ್ನ ಅಣ್ಣ ಹಾಗೂ ತಂದೆ ಇದ್ದಾರೆ” ಹುಡುಗನ ಹೇಳಿಕೆ.

“ಒಳ್ಳೇದು ಇಲ್ಲಿ ಕುಳಿತುಕೋ” ಎಂದು ಆ ಹುಡುಗನನ್ನು ಕುಳ್ಳರಿಸಿಕೊಂಡು ಒಬ್ಬ ಆಳುಮಗನನ್ನು ಕರೆದು ಆ ಹುಡುಗನ ಅಣ್ಣನನ್ನು ಕರೆತರಲು ಹೇಳಿದನು.

ಹುಡುಗನ ಅಣ್ಣ ಬರಲು, ಶ್ರೀಮಂತನು ಅವನ ಅಧಿಕಪ್ರಸಂಗವನ್ನು ತಿಳಿಸಿದನು. ಆ ಮಾತು ಕೇಳಿ ಅಣ್ಣನಿಗೆ ತಮ್ಮನ ಮೇಲೆ ಸಿಟ್ಟು ಬಂತು. ಜಂಕಿಸಿ
ನುಡಿದನು – “ಧನಿಯರು ಸತ್ತರೆ ಆ ಹೆಣವನ್ನು ಹೊರತರುವ ವಿಚಾರ ನಿನಗೇಕೆ ಬೇಕಾಗಿತ್ತು ? ಹೆಣವನ್ನು ಕಡೆಕಡೆದು ತಂದಾರು ಹೊರಗೆ. ಅದರ
ಉಸಾಬರಿ ಏತಕ್ಕೆ ಮಾಡುವಿ ?”

ಆ ಮಾತು ಕೇಳಿ ಶ್ರೀಮಂತನಿಗೆ ಅನಿಸಿತು – ಈತನು ತಮ್ಮನಿಗಿಂತ ಮಿಗಿಲಾದ ಅಧಿಕಪ್ರಸಂಗಿ – “ತಮ್ಮಾ, ನೀನೂ ಒಂದಿಷ್ಟು ಕುಳಿತುಕೋ” ಎಂದು
ನುಡಿದು, “ಇವರಿಬ್ಬರನ್ನು ಬಿಡಬೇಡ” ಎಂದು ಆಳುಮಗನಿಗೆ ಸೂಚಿಸಿದನು. ಬೇರೊಬ್ಬ ಆಳನ್ನು ಕರೆದು – “ಅವರ ತಂದೆಯನ್ನು ಮುಂದೆ ಹಾಕಿಕೊಂಡು ಬಾ. ಅವನಾದರೂ ಈ ಅವಿವೇಕಿಗಳನ್ನು ತಿದ್ದಲಿ” ಎಂದು ಹೇಳಿದನು.

ಮರುಕ್ಷಣದಲ್ಲಿಯೇ ಅವರ ತಂದೆ ಬರಲು, ಶ್ರೀಮಂತನು ಅವನನ್ನು ಹತ್ತಿರಕ್ಕೆ ಕರೆದು ಕುಳ್ಳಿರಿಸಿಕೊಂಡು, ಅವನ ಮಕ್ಕಳಿಬ್ಬರೊಡನೆ ನಡೆದ ಸಂಗತಿಯನ್ನು ಕ್ರಮವಾಗಿ ವಿವರಿಸಿದನು. ತಂದೆಗೂ ಎಲ್ಲಿಲ್ಲದ ಸಿಟ್ಟುಬಂತು, ಅವರ ವರ್ತನೆ ಕೇಳಿ. ಶ್ರೀಮಂತನ ಎದುರಿನಲ್ಲಿಯೇ ಮಕ್ಕಳಿಗೆ ಛೀ ಎನ್ನಲು ತೊಡಗಿದನು – “ಕತ್ತೆ ಆಗಿರುವಿರಿ ತಿಳಿಯುವದಿಲ್ಲವೇ ನಿಮಗೆ ? ಧನಿಯರು ಸತ್ತರೆ ಹೆಣವನ್ನು ಹೇಗೆ ಹೊರತರುವುದೆಂಬ ವಿಚಾರ ನಿಮಗೇಕೆ ಬೇಕಿತ್ತು ? ಹೆಣವನ್ನು ಕಡೆ ಕಡೆದು ಹೊರತರುವ ಯುಕ್ತಿ ಹೇಳಿಕೊಡುವದಕ್ಕೆ ನೀನಾವ ಪಂಡಿತನು ? ಮನೆಯಲ್ಲಿಯೇ ಶವಕ್ಕೆ ಬೆಂಕಿ ಹಚ್ಚಲೊಲ್ಲರೇಕೆ, ನಿಮಗೇಕೆ ಆ ಉಸಾಬರಿ ?”

ತಂದೆಯೂ ಅದೇ ವರ್ಗಕ್ಕೆ ಸೇರಿದ ಪ್ರಾಣಿಯೆಂದು ಬಗೆದು, ಅವರೆಲ್ಲರಿಗೂ ಹೋಗಿಬನ್ನಿರೆಂದು ಶ್ರೀಮಂತನು ಕೈಮುಗಿದು ಕಳಿಸಿದನು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...