Home / ಕಥೆ / ಜನಪದ / ಅದರ ಸಪ್ಪುಳ ಬೇರೆ

ಅದರ ಸಪ್ಪುಳ ಬೇರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು.

ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು.

ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. ಬಹಳ ಹೊತ್ತಿನ ಮೇಲೆ ಜಂಗಮನು ಬಂದನು- ಅಜ್ಜಿ ಆತನ ಕೈಕಾಲಿಗೆ ನೀರು ಕೊಟ್ಟು ಗದ್ದಿಗೆಯ ಮೇಲೆ ಕುಳ್ಳರಿಸಿದಳು. ಧೂಳವಾದೋದಕ ತೆಗೆದುಕೊಂಡು ಮನೆಯಲ್ಲೆಲ್ಲ ಸಿಂಪಡಿಸಿದಳು. ಆ ಬಳಿಕ ತೊಳೆದ ತಾಬಾಣವನ್ನು ತಂದು ಜಂಗಮನ ಮುಂದಿರಿಸಿ, ತಾನು ಉಣಬಡಿಸುವದಕ್ಕೆ ಎತ್ತುಗಡೆ ನಡೆಸಿದಳು.

ಗದ್ದಿಗೆಯ ಮೇಲೆ ಕುಳಿತ ಜಂಗಮನಿಗೂ ತಿಳಿಯದಂತೆ ಒಂದು ಅಪಾನವಾಯು ಹೊರಬಿದ್ದು ಸಪ್ಪುಳ ಮಾಡಿತು. ಆ ಸಪ್ಪುಳ ಕಿವಿಗೆ ಬಿದ್ದಾಗ ಆತನ ಲಕ್ಷ್ಯಕ್ಕೆ ಬಂತು. ಮನೆಯವರು ಏನೆಂದುಕೊಳ್ಳುವರೋ ಎಂದು ಚಿಂತಿಸತೊಡಗಿದನು.

ಸಾಧ್ಯವಿದ್ದಷ್ಟು ಮನೆಯವರ ತಿಳುವಳಿಕೆ ದೂರಗೊಳಿಸುವ ಸಲುವಾಗಿ, ತಾಬಾಣವನ್ನು ತುದಿಬೆರಳುಗಳಿಂದ ತಿಕ್ಕಿ ಒರೆಸುತ್ತ ಬೆರಳು ಎಳೆದು ಸಪ್ಪುಳ
ಮಾಡಲು ತೊಡಗಿದನು.

ಅಷ್ಟರಲ್ಲಿ ಅಜ್ಜಿ ಬಂದು ವಿನಯದಿಂದ ಹೇಳಿದಳು – “ಇದರ ಸಪ್ಪುಳ ಬೇರೆ ಆಗ್ತದೆ ಅಪ್ಪಾ ಅವರೇ.”

ಅಜ್ಜಿಯ ಮಾತು ಕೇಳಿ ಜಂಗಮನಿಗೆ ನೆಲದಲ್ಲಿ ಇಳಿದು ಹೋದಂತಾಯಿತು, ನಾಚಿಕೆಯಿಂದ ಮುಂದಿನ ಕೆಲಸವನ್ನು ಅವಸರವಸರವಾಗಿ ಮುಗಿಸಿ ಎದ್ದು
ಓಡಿದನು. ದಕ್ಷಿಣೆ ಕೇಳುವುದನ್ನೂ ಮರೆತನು.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...