Home / ಕಥೆ / ಜನಪದ / ಅದರ ಸಪ್ಪುಳ ಬೇರೆ

ಅದರ ಸಪ್ಪುಳ ಬೇರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು.

ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು.

ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. ಬಹಳ ಹೊತ್ತಿನ ಮೇಲೆ ಜಂಗಮನು ಬಂದನು- ಅಜ್ಜಿ ಆತನ ಕೈಕಾಲಿಗೆ ನೀರು ಕೊಟ್ಟು ಗದ್ದಿಗೆಯ ಮೇಲೆ ಕುಳ್ಳರಿಸಿದಳು. ಧೂಳವಾದೋದಕ ತೆಗೆದುಕೊಂಡು ಮನೆಯಲ್ಲೆಲ್ಲ ಸಿಂಪಡಿಸಿದಳು. ಆ ಬಳಿಕ ತೊಳೆದ ತಾಬಾಣವನ್ನು ತಂದು ಜಂಗಮನ ಮುಂದಿರಿಸಿ, ತಾನು ಉಣಬಡಿಸುವದಕ್ಕೆ ಎತ್ತುಗಡೆ ನಡೆಸಿದಳು.

ಗದ್ದಿಗೆಯ ಮೇಲೆ ಕುಳಿತ ಜಂಗಮನಿಗೂ ತಿಳಿಯದಂತೆ ಒಂದು ಅಪಾನವಾಯು ಹೊರಬಿದ್ದು ಸಪ್ಪುಳ ಮಾಡಿತು. ಆ ಸಪ್ಪುಳ ಕಿವಿಗೆ ಬಿದ್ದಾಗ ಆತನ ಲಕ್ಷ್ಯಕ್ಕೆ ಬಂತು. ಮನೆಯವರು ಏನೆಂದುಕೊಳ್ಳುವರೋ ಎಂದು ಚಿಂತಿಸತೊಡಗಿದನು.

ಸಾಧ್ಯವಿದ್ದಷ್ಟು ಮನೆಯವರ ತಿಳುವಳಿಕೆ ದೂರಗೊಳಿಸುವ ಸಲುವಾಗಿ, ತಾಬಾಣವನ್ನು ತುದಿಬೆರಳುಗಳಿಂದ ತಿಕ್ಕಿ ಒರೆಸುತ್ತ ಬೆರಳು ಎಳೆದು ಸಪ್ಪುಳ
ಮಾಡಲು ತೊಡಗಿದನು.

ಅಷ್ಟರಲ್ಲಿ ಅಜ್ಜಿ ಬಂದು ವಿನಯದಿಂದ ಹೇಳಿದಳು – “ಇದರ ಸಪ್ಪುಳ ಬೇರೆ ಆಗ್ತದೆ ಅಪ್ಪಾ ಅವರೇ.”

ಅಜ್ಜಿಯ ಮಾತು ಕೇಳಿ ಜಂಗಮನಿಗೆ ನೆಲದಲ್ಲಿ ಇಳಿದು ಹೋದಂತಾಯಿತು, ನಾಚಿಕೆಯಿಂದ ಮುಂದಿನ ಕೆಲಸವನ್ನು ಅವಸರವಸರವಾಗಿ ಮುಗಿಸಿ ಎದ್ದು
ಓಡಿದನು. ದಕ್ಷಿಣೆ ಕೇಳುವುದನ್ನೂ ಮರೆತನು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...