Home / ಕಥೆ / ಜನಪದ / ಅದರ ಸಪ್ಪುಳ ಬೇರೆ

ಅದರ ಸಪ್ಪುಳ ಬೇರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು.

ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು.

ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. ಬಹಳ ಹೊತ್ತಿನ ಮೇಲೆ ಜಂಗಮನು ಬಂದನು- ಅಜ್ಜಿ ಆತನ ಕೈಕಾಲಿಗೆ ನೀರು ಕೊಟ್ಟು ಗದ್ದಿಗೆಯ ಮೇಲೆ ಕುಳ್ಳರಿಸಿದಳು. ಧೂಳವಾದೋದಕ ತೆಗೆದುಕೊಂಡು ಮನೆಯಲ್ಲೆಲ್ಲ ಸಿಂಪಡಿಸಿದಳು. ಆ ಬಳಿಕ ತೊಳೆದ ತಾಬಾಣವನ್ನು ತಂದು ಜಂಗಮನ ಮುಂದಿರಿಸಿ, ತಾನು ಉಣಬಡಿಸುವದಕ್ಕೆ ಎತ್ತುಗಡೆ ನಡೆಸಿದಳು.

ಗದ್ದಿಗೆಯ ಮೇಲೆ ಕುಳಿತ ಜಂಗಮನಿಗೂ ತಿಳಿಯದಂತೆ ಒಂದು ಅಪಾನವಾಯು ಹೊರಬಿದ್ದು ಸಪ್ಪುಳ ಮಾಡಿತು. ಆ ಸಪ್ಪುಳ ಕಿವಿಗೆ ಬಿದ್ದಾಗ ಆತನ ಲಕ್ಷ್ಯಕ್ಕೆ ಬಂತು. ಮನೆಯವರು ಏನೆಂದುಕೊಳ್ಳುವರೋ ಎಂದು ಚಿಂತಿಸತೊಡಗಿದನು.

ಸಾಧ್ಯವಿದ್ದಷ್ಟು ಮನೆಯವರ ತಿಳುವಳಿಕೆ ದೂರಗೊಳಿಸುವ ಸಲುವಾಗಿ, ತಾಬಾಣವನ್ನು ತುದಿಬೆರಳುಗಳಿಂದ ತಿಕ್ಕಿ ಒರೆಸುತ್ತ ಬೆರಳು ಎಳೆದು ಸಪ್ಪುಳ
ಮಾಡಲು ತೊಡಗಿದನು.

ಅಷ್ಟರಲ್ಲಿ ಅಜ್ಜಿ ಬಂದು ವಿನಯದಿಂದ ಹೇಳಿದಳು – “ಇದರ ಸಪ್ಪುಳ ಬೇರೆ ಆಗ್ತದೆ ಅಪ್ಪಾ ಅವರೇ.”

ಅಜ್ಜಿಯ ಮಾತು ಕೇಳಿ ಜಂಗಮನಿಗೆ ನೆಲದಲ್ಲಿ ಇಳಿದು ಹೋದಂತಾಯಿತು, ನಾಚಿಕೆಯಿಂದ ಮುಂದಿನ ಕೆಲಸವನ್ನು ಅವಸರವಸರವಾಗಿ ಮುಗಿಸಿ ಎದ್ದು
ಓಡಿದನು. ದಕ್ಷಿಣೆ ಕೇಳುವುದನ್ನೂ ಮರೆತನು.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...