ಅದರ ಸಪ್ಪುಳ ಬೇರೆ

ಅದರ ಸಪ್ಪುಳ ಬೇರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು.

ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು.

ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. ಬಹಳ ಹೊತ್ತಿನ ಮೇಲೆ ಜಂಗಮನು ಬಂದನು- ಅಜ್ಜಿ ಆತನ ಕೈಕಾಲಿಗೆ ನೀರು ಕೊಟ್ಟು ಗದ್ದಿಗೆಯ ಮೇಲೆ ಕುಳ್ಳರಿಸಿದಳು. ಧೂಳವಾದೋದಕ ತೆಗೆದುಕೊಂಡು ಮನೆಯಲ್ಲೆಲ್ಲ ಸಿಂಪಡಿಸಿದಳು. ಆ ಬಳಿಕ ತೊಳೆದ ತಾಬಾಣವನ್ನು ತಂದು ಜಂಗಮನ ಮುಂದಿರಿಸಿ, ತಾನು ಉಣಬಡಿಸುವದಕ್ಕೆ ಎತ್ತುಗಡೆ ನಡೆಸಿದಳು.

ಗದ್ದಿಗೆಯ ಮೇಲೆ ಕುಳಿತ ಜಂಗಮನಿಗೂ ತಿಳಿಯದಂತೆ ಒಂದು ಅಪಾನವಾಯು ಹೊರಬಿದ್ದು ಸಪ್ಪುಳ ಮಾಡಿತು. ಆ ಸಪ್ಪುಳ ಕಿವಿಗೆ ಬಿದ್ದಾಗ ಆತನ ಲಕ್ಷ್ಯಕ್ಕೆ ಬಂತು. ಮನೆಯವರು ಏನೆಂದುಕೊಳ್ಳುವರೋ ಎಂದು ಚಿಂತಿಸತೊಡಗಿದನು.

ಸಾಧ್ಯವಿದ್ದಷ್ಟು ಮನೆಯವರ ತಿಳುವಳಿಕೆ ದೂರಗೊಳಿಸುವ ಸಲುವಾಗಿ, ತಾಬಾಣವನ್ನು ತುದಿಬೆರಳುಗಳಿಂದ ತಿಕ್ಕಿ ಒರೆಸುತ್ತ ಬೆರಳು ಎಳೆದು ಸಪ್ಪುಳ
ಮಾಡಲು ತೊಡಗಿದನು.

ಅಷ್ಟರಲ್ಲಿ ಅಜ್ಜಿ ಬಂದು ವಿನಯದಿಂದ ಹೇಳಿದಳು – “ಇದರ ಸಪ್ಪುಳ ಬೇರೆ ಆಗ್ತದೆ ಅಪ್ಪಾ ಅವರೇ.”

ಅಜ್ಜಿಯ ಮಾತು ಕೇಳಿ ಜಂಗಮನಿಗೆ ನೆಲದಲ್ಲಿ ಇಳಿದು ಹೋದಂತಾಯಿತು, ನಾಚಿಕೆಯಿಂದ ಮುಂದಿನ ಕೆಲಸವನ್ನು ಅವಸರವಸರವಾಗಿ ಮುಗಿಸಿ ಎದ್ದು
ಓಡಿದನು. ದಕ್ಷಿಣೆ ಕೇಳುವುದನ್ನೂ ಮರೆತನು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಲ್ಲಿ ನೋಡು
Next post ಸಬ್‌ಇನ್ಸ್‌ಪೆಕ್ಟರ್‍ ಹೇಳಿದ್ದು

ಸಣ್ಣ ಕತೆ

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…