Home / ಕಥೆ / ಜನಪದ / ಅದರ ಸಪ್ಪುಳ ಬೇರೆ

ಅದರ ಸಪ್ಪುಳ ಬೇರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು.

ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು.

ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. ಬಹಳ ಹೊತ್ತಿನ ಮೇಲೆ ಜಂಗಮನು ಬಂದನು- ಅಜ್ಜಿ ಆತನ ಕೈಕಾಲಿಗೆ ನೀರು ಕೊಟ್ಟು ಗದ್ದಿಗೆಯ ಮೇಲೆ ಕುಳ್ಳರಿಸಿದಳು. ಧೂಳವಾದೋದಕ ತೆಗೆದುಕೊಂಡು ಮನೆಯಲ್ಲೆಲ್ಲ ಸಿಂಪಡಿಸಿದಳು. ಆ ಬಳಿಕ ತೊಳೆದ ತಾಬಾಣವನ್ನು ತಂದು ಜಂಗಮನ ಮುಂದಿರಿಸಿ, ತಾನು ಉಣಬಡಿಸುವದಕ್ಕೆ ಎತ್ತುಗಡೆ ನಡೆಸಿದಳು.

ಗದ್ದಿಗೆಯ ಮೇಲೆ ಕುಳಿತ ಜಂಗಮನಿಗೂ ತಿಳಿಯದಂತೆ ಒಂದು ಅಪಾನವಾಯು ಹೊರಬಿದ್ದು ಸಪ್ಪುಳ ಮಾಡಿತು. ಆ ಸಪ್ಪುಳ ಕಿವಿಗೆ ಬಿದ್ದಾಗ ಆತನ ಲಕ್ಷ್ಯಕ್ಕೆ ಬಂತು. ಮನೆಯವರು ಏನೆಂದುಕೊಳ್ಳುವರೋ ಎಂದು ಚಿಂತಿಸತೊಡಗಿದನು.

ಸಾಧ್ಯವಿದ್ದಷ್ಟು ಮನೆಯವರ ತಿಳುವಳಿಕೆ ದೂರಗೊಳಿಸುವ ಸಲುವಾಗಿ, ತಾಬಾಣವನ್ನು ತುದಿಬೆರಳುಗಳಿಂದ ತಿಕ್ಕಿ ಒರೆಸುತ್ತ ಬೆರಳು ಎಳೆದು ಸಪ್ಪುಳ
ಮಾಡಲು ತೊಡಗಿದನು.

ಅಷ್ಟರಲ್ಲಿ ಅಜ್ಜಿ ಬಂದು ವಿನಯದಿಂದ ಹೇಳಿದಳು – “ಇದರ ಸಪ್ಪುಳ ಬೇರೆ ಆಗ್ತದೆ ಅಪ್ಪಾ ಅವರೇ.”

ಅಜ್ಜಿಯ ಮಾತು ಕೇಳಿ ಜಂಗಮನಿಗೆ ನೆಲದಲ್ಲಿ ಇಳಿದು ಹೋದಂತಾಯಿತು, ನಾಚಿಕೆಯಿಂದ ಮುಂದಿನ ಕೆಲಸವನ್ನು ಅವಸರವಸರವಾಗಿ ಮುಗಿಸಿ ಎದ್ದು
ಓಡಿದನು. ದಕ್ಷಿಣೆ ಕೇಳುವುದನ್ನೂ ಮರೆತನು.
*****

Tagged:

Leave a Reply

Your email address will not be published. Required fields are marked *

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...