Home / ಕಥೆ / ಜನಪದ / ಅದರ ಸಪ್ಪುಳ ಬೇರೆ

ಅದರ ಸಪ್ಪುಳ ಬೇರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು.

ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು.

ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. ಬಹಳ ಹೊತ್ತಿನ ಮೇಲೆ ಜಂಗಮನು ಬಂದನು- ಅಜ್ಜಿ ಆತನ ಕೈಕಾಲಿಗೆ ನೀರು ಕೊಟ್ಟು ಗದ್ದಿಗೆಯ ಮೇಲೆ ಕುಳ್ಳರಿಸಿದಳು. ಧೂಳವಾದೋದಕ ತೆಗೆದುಕೊಂಡು ಮನೆಯಲ್ಲೆಲ್ಲ ಸಿಂಪಡಿಸಿದಳು. ಆ ಬಳಿಕ ತೊಳೆದ ತಾಬಾಣವನ್ನು ತಂದು ಜಂಗಮನ ಮುಂದಿರಿಸಿ, ತಾನು ಉಣಬಡಿಸುವದಕ್ಕೆ ಎತ್ತುಗಡೆ ನಡೆಸಿದಳು.

ಗದ್ದಿಗೆಯ ಮೇಲೆ ಕುಳಿತ ಜಂಗಮನಿಗೂ ತಿಳಿಯದಂತೆ ಒಂದು ಅಪಾನವಾಯು ಹೊರಬಿದ್ದು ಸಪ್ಪುಳ ಮಾಡಿತು. ಆ ಸಪ್ಪುಳ ಕಿವಿಗೆ ಬಿದ್ದಾಗ ಆತನ ಲಕ್ಷ್ಯಕ್ಕೆ ಬಂತು. ಮನೆಯವರು ಏನೆಂದುಕೊಳ್ಳುವರೋ ಎಂದು ಚಿಂತಿಸತೊಡಗಿದನು.

ಸಾಧ್ಯವಿದ್ದಷ್ಟು ಮನೆಯವರ ತಿಳುವಳಿಕೆ ದೂರಗೊಳಿಸುವ ಸಲುವಾಗಿ, ತಾಬಾಣವನ್ನು ತುದಿಬೆರಳುಗಳಿಂದ ತಿಕ್ಕಿ ಒರೆಸುತ್ತ ಬೆರಳು ಎಳೆದು ಸಪ್ಪುಳ
ಮಾಡಲು ತೊಡಗಿದನು.

ಅಷ್ಟರಲ್ಲಿ ಅಜ್ಜಿ ಬಂದು ವಿನಯದಿಂದ ಹೇಳಿದಳು – “ಇದರ ಸಪ್ಪುಳ ಬೇರೆ ಆಗ್ತದೆ ಅಪ್ಪಾ ಅವರೇ.”

ಅಜ್ಜಿಯ ಮಾತು ಕೇಳಿ ಜಂಗಮನಿಗೆ ನೆಲದಲ್ಲಿ ಇಳಿದು ಹೋದಂತಾಯಿತು, ನಾಚಿಕೆಯಿಂದ ಮುಂದಿನ ಕೆಲಸವನ್ನು ಅವಸರವಸರವಾಗಿ ಮುಗಿಸಿ ಎದ್ದು
ಓಡಿದನು. ದಕ್ಷಿಣೆ ಕೇಳುವುದನ್ನೂ ಮರೆತನು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...