Home / ಕಥೆ / ಜನಪದ / ಅದರ ಸಪ್ಪುಳ ಬೇರೆ

ಅದರ ಸಪ್ಪುಳ ಬೇರೆ

ಚಿತ್ರ: ಅಪೂರ್ವ ಅಪರಿಮಿತ
ಚಿತ್ರ: ಅಪೂರ್ವ ಅಪರಿಮಿತ

ಶಿವರಾತ್ರಿಯ ಮರುದಿನ ತೀವ್ರ ಅಡಿಗೆ ಮಾಡಿ, ಬೆಳಗಾಗುವುದರಲ್ಲಿ ಊಟದ ಸಿದ್ಧತೆ ನಡೆಯಿಸುವುದು ವಾಡಿಕೆ. ಲಿಂಗಾಯತರಾದವರು ಮನೆದೇವರನ್ನು ಪೂಜಿಸಿದ ಬಳಿಕ, ಒಬ್ಬ ಜಂಗಮನನ್ನು ಕರೆತಂದು ಉಣ್ಣಿಸಿವ ತರ್ವಾಯವೇ ಮನೆಯವರ ಊಟವಾಗುವದು.

ಹಳ್ಳಿಯಲ್ಲಿ ಅಂದು ಜಂಗಮನು ಸಿಗುವುದೂ ಕಷ್ಟವೇ. ಸರತಿಯಂತೆ ಮನೆ ಮುಗಿಸಬೇಕಾಗುವುದರಿಂದ ಸಕಾಲಕ್ಕೆ ಜಂಗಮ ಬರಲಾರನು.

ಶೆಟ್ಟರ ತಾಯಿ ಅಂದು ಜಂಗಮನ ದಾರಿ ನೋಡುತ್ತ ಕುಳಿತೇ ಕುಳಿತಳು. ಬಹಳ ಹೊತ್ತಿನ ಮೇಲೆ ಜಂಗಮನು ಬಂದನು- ಅಜ್ಜಿ ಆತನ ಕೈಕಾಲಿಗೆ ನೀರು ಕೊಟ್ಟು ಗದ್ದಿಗೆಯ ಮೇಲೆ ಕುಳ್ಳರಿಸಿದಳು. ಧೂಳವಾದೋದಕ ತೆಗೆದುಕೊಂಡು ಮನೆಯಲ್ಲೆಲ್ಲ ಸಿಂಪಡಿಸಿದಳು. ಆ ಬಳಿಕ ತೊಳೆದ ತಾಬಾಣವನ್ನು ತಂದು ಜಂಗಮನ ಮುಂದಿರಿಸಿ, ತಾನು ಉಣಬಡಿಸುವದಕ್ಕೆ ಎತ್ತುಗಡೆ ನಡೆಸಿದಳು.

ಗದ್ದಿಗೆಯ ಮೇಲೆ ಕುಳಿತ ಜಂಗಮನಿಗೂ ತಿಳಿಯದಂತೆ ಒಂದು ಅಪಾನವಾಯು ಹೊರಬಿದ್ದು ಸಪ್ಪುಳ ಮಾಡಿತು. ಆ ಸಪ್ಪುಳ ಕಿವಿಗೆ ಬಿದ್ದಾಗ ಆತನ ಲಕ್ಷ್ಯಕ್ಕೆ ಬಂತು. ಮನೆಯವರು ಏನೆಂದುಕೊಳ್ಳುವರೋ ಎಂದು ಚಿಂತಿಸತೊಡಗಿದನು.

ಸಾಧ್ಯವಿದ್ದಷ್ಟು ಮನೆಯವರ ತಿಳುವಳಿಕೆ ದೂರಗೊಳಿಸುವ ಸಲುವಾಗಿ, ತಾಬಾಣವನ್ನು ತುದಿಬೆರಳುಗಳಿಂದ ತಿಕ್ಕಿ ಒರೆಸುತ್ತ ಬೆರಳು ಎಳೆದು ಸಪ್ಪುಳ
ಮಾಡಲು ತೊಡಗಿದನು.

ಅಷ್ಟರಲ್ಲಿ ಅಜ್ಜಿ ಬಂದು ವಿನಯದಿಂದ ಹೇಳಿದಳು – “ಇದರ ಸಪ್ಪುಳ ಬೇರೆ ಆಗ್ತದೆ ಅಪ್ಪಾ ಅವರೇ.”

ಅಜ್ಜಿಯ ಮಾತು ಕೇಳಿ ಜಂಗಮನಿಗೆ ನೆಲದಲ್ಲಿ ಇಳಿದು ಹೋದಂತಾಯಿತು, ನಾಚಿಕೆಯಿಂದ ಮುಂದಿನ ಕೆಲಸವನ್ನು ಅವಸರವಸರವಾಗಿ ಮುಗಿಸಿ ಎದ್ದು
ಓಡಿದನು. ದಕ್ಷಿಣೆ ಕೇಳುವುದನ್ನೂ ಮರೆತನು.
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...