ಕುಂಬಾರಕಿ ಈಕಿ ಕುಂಬಾರಕಿ

ಕುಂಬಾರಕಿ ಈಕಿ ಕುಂಬಾರಕಿ ಈ
ಬ್ರಹಾಂಡವೆಲ್ಲ ತುಂಬಿಕೊಂಡಿರುವ ||ಪ||

ಚಿನ್ನ ಎಂಬುವ ಮಣ್ಣನು ತರಸಿ
ತನು ಎಂಬುವ ನೀರನು ಹಣಸಿ
ಮನ ಎಂಬುವ ಹುದಲನು ಕಲಸಿ
ಗುಣ ಎಂಬುವ ಸೂಸನು ಹಾಕಿ ||೧||

ಭಕ್ತಿ ಎಂಬುವ ತಿಗರಿಯ ಮಾಡಿ
ಧ್ಯಾನ ಎಂಬುವ ಬಡಗಿಯ ಊರಿ
ಮುನ್ನೂರರವತ್ತ ಸುತ್ತನು ತಿರಗಿ
ಗಡಗಿ ತಯಾರು ಮಾಡುವಾಕಿ ||೨||

ಆಚಾರ ಎಂಬುವ ಆವಿಗೆ ಮುಚ್ಚಿ
ಅರುವ ಎಂಬುವ ಬೆಂಕಿಯ ಹಚ್ಚಿ
ಸಾವಿರ ಕೊಡಗಳ ಸುಟ್ಟು ಇಂದು
ಸಂತಿಗೆ ಓದು ಮಾರುವಾಕಿ ||೩||

ಮೂರು ಕಾಸಿಗೊಂದು ಕುಡಕಿಯ ಮಾರಿ
ಆರು ಕಾಸಿಗೊಂದು ಗಡಗಿಯ ಮಾರಿ
ಹೊಸಧಿಯೊಳು ಶಿಶುನಾಳಧೀಶನ ಮುಂದೆ
ಧ್ಯಾನದ ಮುಗಿಯೊಂದು ಇಡುವಾಕಿ ||೪||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಶ್ನೆಗಳು
Next post ಅಭಿಮಾನವಿಡು

ಸಣ್ಣ ಕತೆ

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ನಿರಾಳ

    ಮಂಗಳೂರಿನ ಟೌನ್‌ಹಾಲಿನ ಪಕ್ಕದಲ್ಲಿರುವ ನೆಹರೂ ಮೈದಾನಿನ ಮೂಲೆಯ ಕಲ್ಲು ಬೆಂಚಿನ ಮೇಲೆ ಕುಳಿತ ಪುರಂದರ ಹಸಿವೆಯನ್ನು ತಡೆಯಲಾರದೆ ತಳಮಳಿಸುತ್ತಿದ್ದ. ಜೇಬಿಗೆ ಕೈ ಹಾಕಿ ನೋಡಿದ. ಬರೇ ಇಪ್ಪತ್ತೇಳು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…