ಶೀಗಿಹುಣ್ಣಿವೆದಿನ ಉಣ್ಣಲಿಕ್ಕೆ ಕರೆಯುವರೆಲ್ಲಾ

ಶೀಗಿಹುಣ್ಣಿವೆದಿನ ಉಣ್ಣಲಿಕ್ಕೆ ಕರೆಯುವರೆಲ್ಲಾ
ಕರೆದರೆ ಹೋಗದೆ ಬಿಡಲಿಲ್ಲಾ || ಪ ||

ಹುರಿಯಕ್ಕಿ ಹೋಳಿಗಿ ಹೂರಣಗಡಬು
ಕಡಲೀ ಪಚ್ಚಡಿ ಕಟ್ಟಿನಾಂಬರಾ
ಉಂಡಗಡಬು ಪುಂಡಿಯ ಪಲ್ಲೆ
ಬುಟ್ಟಿಯೊಳಿಟ್ಟೆಲ್ಲಾ
ಕೆಮ್ಮಣ್ಣು ಬುಟ್ಟಿಗೆ ಬಡದೆಲ್ಲಾ
ಅದರನುಭವ ತಿಳಿಲಿಲ್ಲಾ ||೧||

ಅಂದು ಇಂದು ಬಂದು ಬಹುದಿನ
ಹೊಲದೊಳು ಕುಂತೆಲ್ಲಾ
ಮನಸಿನ ಮೈಲಿಗೆ ತೊಳಿಲಿಲ್ಲಾ
ಗಂಧದ ಬೊಟ್ಟು ಗಮಕಿಲೆ ಇಟ್ಟು
ಹಂಗನೂಲು ಹಾಕಿಯೆಷ್ಟು
ಬಟ್ಟನ್ನ ಕಲ್ಲಿಗೆ ಸುಣ್ಣಾ ತೊಟ್ಟು
ಕಣ್ಣಿಗೆ ಕಂಡೆಲ್ಲಾ
ಆ ಕಲ್ಲೇನೂ ಉಣಲಿಲ್ಲಾ
ಎಡೆಮಾಡಿ ನೀನೆ ಉಂಡೆಲ್ಲಾ ||೨||

ಮಂಗಳಾತ್ಮ ಶಿಶುನಾಳಧೀಶನಲ್ಲೆ
ಬಲ್ಲವರು ಕೂಡಿದರಲ್ಲೆ
ಶೃಂಗಾರವಾದ ನಾರೇರೆಲ್ಲಾ
ರಂಗಿನಿಂದ ಕೋಲ ಪಿಡಿದು
ಯೋಗದಿಂದ ತ್ಯಾಗಮಾಡಿ
ರಾಗದಲ್ಲೆ ಶಿವಶರಣರಲ್ಲೆ
ಶೀಗಿಗೆ ಕರೆದಾರಲ್ಲೆ ||೩||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಜಕೀಯ ಬಿಸಿನೆಸ್ಸು
Next post ಜೋಗುಳ ಪಾಡಿರಮ್ಮಾ

ಸಣ್ಣ ಕತೆ

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…