ಹೋಗಿ ನೋಡುವ ಬಾರೆ

ಹೋಗಿ ನೋಡುವ ಬಾರೆ
ಸಾಗಿ ಸೊಗಸ ದೊರಿ
ಡಾಕ್ಟರ ಸಾಹೇಬನೀತಾ || ಪ ||

ಬೇಗ ವನಸ್ಪತಿ ಔಷದ ಮೂಲಕ
ತೂಗಿ ಕೊಡುವ ಘನ ಆಗಮ ವಂದಿತ
ರಾಗದಿಂದ ನಾ ಬಂದು ಉಸುರಿ ಮನ
ಯೋಗದಿ ನೋಡಿದೆ ಹೋಗಿ ಈ ಕ್ಷಣ || ೧ ||

ವೇದವೇದ್ಯನಾದರಶದಿ ಬಂದು
ಶೋಧನೆ ಸುಜನರ ಕಾಯ್ದುಕೊಂಡು ಕಮಲಾನ್ವಿತ
ಮೇದಿನಿವಾಸನೆ ಗಾದಿಯ ಮೇಲೆ ಗಮಕದಲಿ ಕುಳಿತು
ಬ್ರಹ್ಮಾಂಡಕನಂದದ ರೋಗದ ಮೇದಕ || ೨ ||

ಮನಸಿಜನಂದದಿ ಮಾತನಾಡುವ ಘನರೂಪನೆ
ಶಾಶ್ವತ ಅನುಸರಿಸೀತನ ಸನ್ಮುಖಕೆ ವಂದಿಸಲಾರೆನೆ ?
ಎನಿತು ವಿಸ್ತರಸಿ ಪೇಳುವೆ ತಕ್ಷಣ
ಚಿನುಮಯ ಶಿಶುನಾಳಧೀಶನ ದಯದಿಂ
ಮನಒಲಿದುಸುರಿದೆ ನಿನಗರಿಕಿರಲಿ
ಗುಣದಿ ನಿನ್ನೊಳು ತಿಳಿದು ನೋಡಿಕೋ || ೩ ||

****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪಂಪನ ಶಾಂತಿಯ ತೋಟ
Next post ಊರ್ಮಿಳೆ

ಸಣ್ಣ ಕತೆ

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…