Home / ಬಾಲ ಚಿಲುಮೆ / ಕಥೆ / ಸಂತಸದ ಚಿಲುಮೆ

ಸಂತಸದ ಚಿಲುಮೆ

ಚಿತ್ರ: ಅಲೆಜಾಂಡ್ರ ಜಿಮೆನೆಸ್
ಚಿತ್ರ: ಅಲೆಜಾಂಡ್ರ ಜಿಮೆನೆಸ್

ಅಕ್ಬರ ಮಹಾರಾಜ ಒಮ್ಮೆ ಆಸ್ಥಾನದಲ್ಲಿ ‘ಸಂತಸದ ಚಿಲುಮೆ ಎಲ್ಲಿದೆ’ ಎಂದು ಅಲ್ಲಿದ್ದವರನ್ನೆಲ್ಲಾ ಕೇಳಿದ.

ಆಸ್ಥಾನದ ಪಂಡಿತ ಮಹಾಶಯನೊಬ್ಬ ಎದ್ದುನಿಂತು – ಮಹಾರಾಜ ಸಂತಸದ ಚಿಲುಮೆ ನಿಜಕ್ಕೂ ಎಲ್ಲಿದೆ ಎಂಬುದನ್ನು ನಾ ತಿಳಿದುಕೊಂಡಿಲ್ಲ. ಹೀಗಾಗಿ ನಾ ಹೇಗೆ ಹೇಳಲಿ?’ ಎಂದು ತನ್ನ ಅಳಲನ್ನು ಮಹಾರಾಜನ ಮುಂದೆ ತೋಡಿಕೊಂಡ.

‘ಸಂತಸವೆನ್ನುವುದು ನಮಗಾಗಿ ನಮ್ಮಮ ಸಂಸಾರಕ್ಕಾಗಿ ಮೂರು ಹೊತ್ತಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ನಿತ್ಯ ಕಷ್ಟಪಡುವುದರಲ್ಲಿ ಬಲು ಸಂತಸವಿದೆ. ಏನು ಇಲ್ಲದವರು ಗಳಿಸಿ ಉಳಿಸಿ ಮನೆ, ಮಠ, ಹೊಲ ಗದ್ದೆ ತೋಟ ಕಾರು ಜೀಪು ಮಾಡಿದಾಲೇ ಸಂತಸದ ಚಿಲುಮೆ ಚಿಮ್ಮುವುದು…..’ ಎಂದು ಅನುಭವಿಯೊಬ್ಬ ವಿವರಿಸುತ್ತಾ ನಿಂತ.

ಮೊದಲಸಾಲಿನಲ್ಲಿ ಕುಳಿತಿದ್ದ ವೇದಾಂತಿಯೊಬ್ಬ ಎದ್ದುನಿಂತು ಮಹಾರಾಜಾಧಿರಾಜ……. ದಿನ ನಿತ್ಯ ಮೂರು ಹೊತ್ತು ನದಿಯಲ್ಲಿ ಮುಳುಗಿ ನಾನಾ ಪುಷ್ಪಗಳ ಹರಿದು ತಂದು ನಾರು ಮಡಿಯಲಿ ದೇವನಿಗೆ ಪೂಜಿಸಿ ಭಜಿಸಿ ನೇಮ ನಿಯಮ ಪಾಲಿಸಿ ವ್ರತ ಯಜ್ಞಯಾಗಾದಿಗಳ ಮಾಡಿ ಪ್ರಸಾದ, ತೀರ್ಥ, ನೈವೇದ್ಯ ಸ್ವೀಕರಿಸಿದರೆ ಸಂತಸದ ಹೊನಲು ಹರಿಯುವುದು……’ ಎಂದು ವರ್ಣಿಸುತ್ತಾ ನಿಂತ.

ಕವಿಯೊಬ್ಬ ಎದ್ದು ನಿಂತು ‘ಕಾವ್ಯ, ನಾಟಕ, ಕಾದಂಬರಿ, ಹಾಸ್ಯ ಪ್ರಸಂಗಗಳ ರಸವತ್ತಾಗಿ ರಚಿಸಿ, ರಸಿಕ ಶಿಖಾ ಮಣಿಗಳಿಂದ ಹೊಗಳಿಸಿಕೊಳ್ಳುವುದರಿಂದ ಸಂತಸದ ಚಿಲುಮೆ ಚಿಮ್ಮುವುದು! ಚೈತನ್ಯದ ಚಿಲುಮೆ ಹೊಮ್ಮುವುದು! ಸ್ಫೂರ್ತಿಯ ಚಿಲುಮೆ ರಂಗೇರುವುದು…..’ಎಂದು ಕಾವ್ಯಮಯವಾಗಿ ಸಂತಸದಿ ಹೇಳಿದ.

ಅಷ್ಟರಲ್ಲಿ ಅಲ್ಲೇ ಇದ್ದ ಬೀರಬಲ್ಲ ಮಹಾಶಯ ಎದ್ದು ನಿಂತು ಮಹಾರಾಜರಿಗೆ, ಸಭೆಗೆ ವಂದಿಸಿ, ’ಮಹಾಪ್ರಭು…..ಸಂತಸದ ಚಿಲುಮೆ ಹರಸಿ ನಾವ್ಯಾರು ಅಡವಿಗೊಡಬೇಕಾಗಿಲ್ಲ, ಖಾವಿ ಧರಿಸಬೇಕಾಗಿಲ್ಲ. ಗುಡಿಗುಂಡಾರ ಸುತ್ತಿ ಪುಣ್ಯನದಿ ತೀರ್ಥಗಳಲ್ಲಿ ಮುಳಗಬೇಕಾಗಿಲ್ಲ. ಮೂಗು ಹಿಡಿದು ಕಣ್ಣುಮುಚ್ಚಿ ತಪಸ್ಸು ಮಾಡಬೇಕಾಗಿಲ್ಲ! ಪ್ರತಿನಿತ್ಯ ಮನಸ್ಸಿನಲ್ಲಿ ಚಿಂತನಾ ಮಂಥನ ನಡೆಸಬೇಕು. ಸಂತಸದ ಚಿಲುಮೆ ನನ್ನಲ್ಲಿಯೇ ಇದೆ ಎಂಬ ಆತ್ಮವಿಶ್ವಾಸ ಬೇಕು. ತಾಳ್ಮೆ, ಆತ್ಮ ತೃಪ್ತಿ, ದಮೆ, ಕರುಣೆ, ಶಾಂತಿ, ದಾನಧರ್ಮ-ಕ್ಷಮೆ ಇರಬೇಕು! ನಿಸ್ವಾರ್ಥ ಜೆವನದಲ್ಲಿ ತ್ಯಾಗದಲ್ಲಿ ಸಂತಸದ ಚಿಲುಮೆ ಇದೆ. ಕಾಣಬೇಕು… ಅದು ದಿನೇ ದಿನೇ ನಮಗೆ ಗೊತ್ತಾಗುತ್ತಾ ಹೋಗುತ್ತದೆ…’ ಎಂದು ವಿವರಿಸುತ್ತಾ ನಿಂತ.

ಅಲ್ಲಿದ್ದವರೇನು….. ಸ್ವತಃ ಅಕ್ಬರ್ ಮಹಾರಾಜ ಬೀರಬಲ್ಲನ ವಿವರಣೆಗೆ ಸಂತಸ ಉಕ್ಕಿ ಬಂತು. ಎಲ್ಲರೂ ಜೋರಾಗಿ ಕರತಾಡನ ಮಾಡಿ ಸಂತಸ ವ್ಯಕ್ತಪಡಿಸಿದರು.

ಅಲ್ಲಿಗೆ ಅಂದಿನ ಸಭೆಯು ಮುಕ್ತಾಯಗೊಂಡಿತು.
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...