Home / ಬಾಲ ಚಿಲುಮೆ / ಕಥೆ / ಸಂತಸದ ಚಿಲುಮೆ

ಸಂತಸದ ಚಿಲುಮೆ

ಚಿತ್ರ: ಅಲೆಜಾಂಡ್ರ ಜಿಮೆನೆಸ್
ಚಿತ್ರ: ಅಲೆಜಾಂಡ್ರ ಜಿಮೆನೆಸ್

ಅಕ್ಬರ ಮಹಾರಾಜ ಒಮ್ಮೆ ಆಸ್ಥಾನದಲ್ಲಿ ‘ಸಂತಸದ ಚಿಲುಮೆ ಎಲ್ಲಿದೆ’ ಎಂದು ಅಲ್ಲಿದ್ದವರನ್ನೆಲ್ಲಾ ಕೇಳಿದ.

ಆಸ್ಥಾನದ ಪಂಡಿತ ಮಹಾಶಯನೊಬ್ಬ ಎದ್ದುನಿಂತು – ಮಹಾರಾಜ ಸಂತಸದ ಚಿಲುಮೆ ನಿಜಕ್ಕೂ ಎಲ್ಲಿದೆ ಎಂಬುದನ್ನು ನಾ ತಿಳಿದುಕೊಂಡಿಲ್ಲ. ಹೀಗಾಗಿ ನಾ ಹೇಗೆ ಹೇಳಲಿ?’ ಎಂದು ತನ್ನ ಅಳಲನ್ನು ಮಹಾರಾಜನ ಮುಂದೆ ತೋಡಿಕೊಂಡ.

‘ಸಂತಸವೆನ್ನುವುದು ನಮಗಾಗಿ ನಮ್ಮಮ ಸಂಸಾರಕ್ಕಾಗಿ ಮೂರು ಹೊತ್ತಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ನಿತ್ಯ ಕಷ್ಟಪಡುವುದರಲ್ಲಿ ಬಲು ಸಂತಸವಿದೆ. ಏನು ಇಲ್ಲದವರು ಗಳಿಸಿ ಉಳಿಸಿ ಮನೆ, ಮಠ, ಹೊಲ ಗದ್ದೆ ತೋಟ ಕಾರು ಜೀಪು ಮಾಡಿದಾಲೇ ಸಂತಸದ ಚಿಲುಮೆ ಚಿಮ್ಮುವುದು…..’ ಎಂದು ಅನುಭವಿಯೊಬ್ಬ ವಿವರಿಸುತ್ತಾ ನಿಂತ.

ಮೊದಲಸಾಲಿನಲ್ಲಿ ಕುಳಿತಿದ್ದ ವೇದಾಂತಿಯೊಬ್ಬ ಎದ್ದುನಿಂತು ಮಹಾರಾಜಾಧಿರಾಜ……. ದಿನ ನಿತ್ಯ ಮೂರು ಹೊತ್ತು ನದಿಯಲ್ಲಿ ಮುಳುಗಿ ನಾನಾ ಪುಷ್ಪಗಳ ಹರಿದು ತಂದು ನಾರು ಮಡಿಯಲಿ ದೇವನಿಗೆ ಪೂಜಿಸಿ ಭಜಿಸಿ ನೇಮ ನಿಯಮ ಪಾಲಿಸಿ ವ್ರತ ಯಜ್ಞಯಾಗಾದಿಗಳ ಮಾಡಿ ಪ್ರಸಾದ, ತೀರ್ಥ, ನೈವೇದ್ಯ ಸ್ವೀಕರಿಸಿದರೆ ಸಂತಸದ ಹೊನಲು ಹರಿಯುವುದು……’ ಎಂದು ವರ್ಣಿಸುತ್ತಾ ನಿಂತ.

ಕವಿಯೊಬ್ಬ ಎದ್ದು ನಿಂತು ‘ಕಾವ್ಯ, ನಾಟಕ, ಕಾದಂಬರಿ, ಹಾಸ್ಯ ಪ್ರಸಂಗಗಳ ರಸವತ್ತಾಗಿ ರಚಿಸಿ, ರಸಿಕ ಶಿಖಾ ಮಣಿಗಳಿಂದ ಹೊಗಳಿಸಿಕೊಳ್ಳುವುದರಿಂದ ಸಂತಸದ ಚಿಲುಮೆ ಚಿಮ್ಮುವುದು! ಚೈತನ್ಯದ ಚಿಲುಮೆ ಹೊಮ್ಮುವುದು! ಸ್ಫೂರ್ತಿಯ ಚಿಲುಮೆ ರಂಗೇರುವುದು…..’ಎಂದು ಕಾವ್ಯಮಯವಾಗಿ ಸಂತಸದಿ ಹೇಳಿದ.

ಅಷ್ಟರಲ್ಲಿ ಅಲ್ಲೇ ಇದ್ದ ಬೀರಬಲ್ಲ ಮಹಾಶಯ ಎದ್ದು ನಿಂತು ಮಹಾರಾಜರಿಗೆ, ಸಭೆಗೆ ವಂದಿಸಿ, ’ಮಹಾಪ್ರಭು…..ಸಂತಸದ ಚಿಲುಮೆ ಹರಸಿ ನಾವ್ಯಾರು ಅಡವಿಗೊಡಬೇಕಾಗಿಲ್ಲ, ಖಾವಿ ಧರಿಸಬೇಕಾಗಿಲ್ಲ. ಗುಡಿಗುಂಡಾರ ಸುತ್ತಿ ಪುಣ್ಯನದಿ ತೀರ್ಥಗಳಲ್ಲಿ ಮುಳಗಬೇಕಾಗಿಲ್ಲ. ಮೂಗು ಹಿಡಿದು ಕಣ್ಣುಮುಚ್ಚಿ ತಪಸ್ಸು ಮಾಡಬೇಕಾಗಿಲ್ಲ! ಪ್ರತಿನಿತ್ಯ ಮನಸ್ಸಿನಲ್ಲಿ ಚಿಂತನಾ ಮಂಥನ ನಡೆಸಬೇಕು. ಸಂತಸದ ಚಿಲುಮೆ ನನ್ನಲ್ಲಿಯೇ ಇದೆ ಎಂಬ ಆತ್ಮವಿಶ್ವಾಸ ಬೇಕು. ತಾಳ್ಮೆ, ಆತ್ಮ ತೃಪ್ತಿ, ದಮೆ, ಕರುಣೆ, ಶಾಂತಿ, ದಾನಧರ್ಮ-ಕ್ಷಮೆ ಇರಬೇಕು! ನಿಸ್ವಾರ್ಥ ಜೆವನದಲ್ಲಿ ತ್ಯಾಗದಲ್ಲಿ ಸಂತಸದ ಚಿಲುಮೆ ಇದೆ. ಕಾಣಬೇಕು… ಅದು ದಿನೇ ದಿನೇ ನಮಗೆ ಗೊತ್ತಾಗುತ್ತಾ ಹೋಗುತ್ತದೆ…’ ಎಂದು ವಿವರಿಸುತ್ತಾ ನಿಂತ.

ಅಲ್ಲಿದ್ದವರೇನು….. ಸ್ವತಃ ಅಕ್ಬರ್ ಮಹಾರಾಜ ಬೀರಬಲ್ಲನ ವಿವರಣೆಗೆ ಸಂತಸ ಉಕ್ಕಿ ಬಂತು. ಎಲ್ಲರೂ ಜೋರಾಗಿ ಕರತಾಡನ ಮಾಡಿ ಸಂತಸ ವ್ಯಕ್ತಪಡಿಸಿದರು.

ಅಲ್ಲಿಗೆ ಅಂದಿನ ಸಭೆಯು ಮುಕ್ತಾಯಗೊಂಡಿತು.
*****

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...