Home / ಬಾಲ ಚಿಲುಮೆ / ಕಥೆ / ಸಂತಸದ ಚಿಲುಮೆ

ಸಂತಸದ ಚಿಲುಮೆ

ಚಿತ್ರ: ಅಲೆಜಾಂಡ್ರ ಜಿಮೆನೆಸ್
ಚಿತ್ರ: ಅಲೆಜಾಂಡ್ರ ಜಿಮೆನೆಸ್

ಅಕ್ಬರ ಮಹಾರಾಜ ಒಮ್ಮೆ ಆಸ್ಥಾನದಲ್ಲಿ ‘ಸಂತಸದ ಚಿಲುಮೆ ಎಲ್ಲಿದೆ’ ಎಂದು ಅಲ್ಲಿದ್ದವರನ್ನೆಲ್ಲಾ ಕೇಳಿದ.

ಆಸ್ಥಾನದ ಪಂಡಿತ ಮಹಾಶಯನೊಬ್ಬ ಎದ್ದುನಿಂತು – ಮಹಾರಾಜ ಸಂತಸದ ಚಿಲುಮೆ ನಿಜಕ್ಕೂ ಎಲ್ಲಿದೆ ಎಂಬುದನ್ನು ನಾ ತಿಳಿದುಕೊಂಡಿಲ್ಲ. ಹೀಗಾಗಿ ನಾ ಹೇಗೆ ಹೇಳಲಿ?’ ಎಂದು ತನ್ನ ಅಳಲನ್ನು ಮಹಾರಾಜನ ಮುಂದೆ ತೋಡಿಕೊಂಡ.

‘ಸಂತಸವೆನ್ನುವುದು ನಮಗಾಗಿ ನಮ್ಮಮ ಸಂಸಾರಕ್ಕಾಗಿ ಮೂರು ಹೊತ್ತಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ನಿತ್ಯ ಕಷ್ಟಪಡುವುದರಲ್ಲಿ ಬಲು ಸಂತಸವಿದೆ. ಏನು ಇಲ್ಲದವರು ಗಳಿಸಿ ಉಳಿಸಿ ಮನೆ, ಮಠ, ಹೊಲ ಗದ್ದೆ ತೋಟ ಕಾರು ಜೀಪು ಮಾಡಿದಾಲೇ ಸಂತಸದ ಚಿಲುಮೆ ಚಿಮ್ಮುವುದು…..’ ಎಂದು ಅನುಭವಿಯೊಬ್ಬ ವಿವರಿಸುತ್ತಾ ನಿಂತ.

ಮೊದಲಸಾಲಿನಲ್ಲಿ ಕುಳಿತಿದ್ದ ವೇದಾಂತಿಯೊಬ್ಬ ಎದ್ದುನಿಂತು ಮಹಾರಾಜಾಧಿರಾಜ……. ದಿನ ನಿತ್ಯ ಮೂರು ಹೊತ್ತು ನದಿಯಲ್ಲಿ ಮುಳುಗಿ ನಾನಾ ಪುಷ್ಪಗಳ ಹರಿದು ತಂದು ನಾರು ಮಡಿಯಲಿ ದೇವನಿಗೆ ಪೂಜಿಸಿ ಭಜಿಸಿ ನೇಮ ನಿಯಮ ಪಾಲಿಸಿ ವ್ರತ ಯಜ್ಞಯಾಗಾದಿಗಳ ಮಾಡಿ ಪ್ರಸಾದ, ತೀರ್ಥ, ನೈವೇದ್ಯ ಸ್ವೀಕರಿಸಿದರೆ ಸಂತಸದ ಹೊನಲು ಹರಿಯುವುದು……’ ಎಂದು ವರ್ಣಿಸುತ್ತಾ ನಿಂತ.

ಕವಿಯೊಬ್ಬ ಎದ್ದು ನಿಂತು ‘ಕಾವ್ಯ, ನಾಟಕ, ಕಾದಂಬರಿ, ಹಾಸ್ಯ ಪ್ರಸಂಗಗಳ ರಸವತ್ತಾಗಿ ರಚಿಸಿ, ರಸಿಕ ಶಿಖಾ ಮಣಿಗಳಿಂದ ಹೊಗಳಿಸಿಕೊಳ್ಳುವುದರಿಂದ ಸಂತಸದ ಚಿಲುಮೆ ಚಿಮ್ಮುವುದು! ಚೈತನ್ಯದ ಚಿಲುಮೆ ಹೊಮ್ಮುವುದು! ಸ್ಫೂರ್ತಿಯ ಚಿಲುಮೆ ರಂಗೇರುವುದು…..’ಎಂದು ಕಾವ್ಯಮಯವಾಗಿ ಸಂತಸದಿ ಹೇಳಿದ.

ಅಷ್ಟರಲ್ಲಿ ಅಲ್ಲೇ ಇದ್ದ ಬೀರಬಲ್ಲ ಮಹಾಶಯ ಎದ್ದು ನಿಂತು ಮಹಾರಾಜರಿಗೆ, ಸಭೆಗೆ ವಂದಿಸಿ, ’ಮಹಾಪ್ರಭು…..ಸಂತಸದ ಚಿಲುಮೆ ಹರಸಿ ನಾವ್ಯಾರು ಅಡವಿಗೊಡಬೇಕಾಗಿಲ್ಲ, ಖಾವಿ ಧರಿಸಬೇಕಾಗಿಲ್ಲ. ಗುಡಿಗುಂಡಾರ ಸುತ್ತಿ ಪುಣ್ಯನದಿ ತೀರ್ಥಗಳಲ್ಲಿ ಮುಳಗಬೇಕಾಗಿಲ್ಲ. ಮೂಗು ಹಿಡಿದು ಕಣ್ಣುಮುಚ್ಚಿ ತಪಸ್ಸು ಮಾಡಬೇಕಾಗಿಲ್ಲ! ಪ್ರತಿನಿತ್ಯ ಮನಸ್ಸಿನಲ್ಲಿ ಚಿಂತನಾ ಮಂಥನ ನಡೆಸಬೇಕು. ಸಂತಸದ ಚಿಲುಮೆ ನನ್ನಲ್ಲಿಯೇ ಇದೆ ಎಂಬ ಆತ್ಮವಿಶ್ವಾಸ ಬೇಕು. ತಾಳ್ಮೆ, ಆತ್ಮ ತೃಪ್ತಿ, ದಮೆ, ಕರುಣೆ, ಶಾಂತಿ, ದಾನಧರ್ಮ-ಕ್ಷಮೆ ಇರಬೇಕು! ನಿಸ್ವಾರ್ಥ ಜೆವನದಲ್ಲಿ ತ್ಯಾಗದಲ್ಲಿ ಸಂತಸದ ಚಿಲುಮೆ ಇದೆ. ಕಾಣಬೇಕು… ಅದು ದಿನೇ ದಿನೇ ನಮಗೆ ಗೊತ್ತಾಗುತ್ತಾ ಹೋಗುತ್ತದೆ…’ ಎಂದು ವಿವರಿಸುತ್ತಾ ನಿಂತ.

ಅಲ್ಲಿದ್ದವರೇನು….. ಸ್ವತಃ ಅಕ್ಬರ್ ಮಹಾರಾಜ ಬೀರಬಲ್ಲನ ವಿವರಣೆಗೆ ಸಂತಸ ಉಕ್ಕಿ ಬಂತು. ಎಲ್ಲರೂ ಜೋರಾಗಿ ಕರತಾಡನ ಮಾಡಿ ಸಂತಸ ವ್ಯಕ್ತಪಡಿಸಿದರು.

ಅಲ್ಲಿಗೆ ಅಂದಿನ ಸಭೆಯು ಮುಕ್ತಾಯಗೊಂಡಿತು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...