ಸಂತಸದ ಚಿಲುಮೆ

ಸಂತಸದ ಚಿಲುಮೆ

ಚಿತ್ರ: ಅಲೆಜಾಂಡ್ರ ಜಿಮೆನೆಸ್
ಚಿತ್ರ: ಅಲೆಜಾಂಡ್ರ ಜಿಮೆನೆಸ್

ಅಕ್ಬರ ಮಹಾರಾಜ ಒಮ್ಮೆ ಆಸ್ಥಾನದಲ್ಲಿ ‘ಸಂತಸದ ಚಿಲುಮೆ ಎಲ್ಲಿದೆ’ ಎಂದು ಅಲ್ಲಿದ್ದವರನ್ನೆಲ್ಲಾ ಕೇಳಿದ.

ಆಸ್ಥಾನದ ಪಂಡಿತ ಮಹಾಶಯನೊಬ್ಬ ಎದ್ದುನಿಂತು – ಮಹಾರಾಜ ಸಂತಸದ ಚಿಲುಮೆ ನಿಜಕ್ಕೂ ಎಲ್ಲಿದೆ ಎಂಬುದನ್ನು ನಾ ತಿಳಿದುಕೊಂಡಿಲ್ಲ. ಹೀಗಾಗಿ ನಾ ಹೇಗೆ ಹೇಳಲಿ?’ ಎಂದು ತನ್ನ ಅಳಲನ್ನು ಮಹಾರಾಜನ ಮುಂದೆ ತೋಡಿಕೊಂಡ.

‘ಸಂತಸವೆನ್ನುವುದು ನಮಗಾಗಿ ನಮ್ಮಮ ಸಂಸಾರಕ್ಕಾಗಿ ಮೂರು ಹೊತ್ತಿನ ತುತ್ತಿನ ಚೀಲ ತುಂಬಿಸಿಕೊಳ್ಳಲು ನಿತ್ಯ ಕಷ್ಟಪಡುವುದರಲ್ಲಿ ಬಲು ಸಂತಸವಿದೆ. ಏನು ಇಲ್ಲದವರು ಗಳಿಸಿ ಉಳಿಸಿ ಮನೆ, ಮಠ, ಹೊಲ ಗದ್ದೆ ತೋಟ ಕಾರು ಜೀಪು ಮಾಡಿದಾಲೇ ಸಂತಸದ ಚಿಲುಮೆ ಚಿಮ್ಮುವುದು…..’ ಎಂದು ಅನುಭವಿಯೊಬ್ಬ ವಿವರಿಸುತ್ತಾ ನಿಂತ.

ಮೊದಲಸಾಲಿನಲ್ಲಿ ಕುಳಿತಿದ್ದ ವೇದಾಂತಿಯೊಬ್ಬ ಎದ್ದುನಿಂತು ಮಹಾರಾಜಾಧಿರಾಜ……. ದಿನ ನಿತ್ಯ ಮೂರು ಹೊತ್ತು ನದಿಯಲ್ಲಿ ಮುಳುಗಿ ನಾನಾ ಪುಷ್ಪಗಳ ಹರಿದು ತಂದು ನಾರು ಮಡಿಯಲಿ ದೇವನಿಗೆ ಪೂಜಿಸಿ ಭಜಿಸಿ ನೇಮ ನಿಯಮ ಪಾಲಿಸಿ ವ್ರತ ಯಜ್ಞಯಾಗಾದಿಗಳ ಮಾಡಿ ಪ್ರಸಾದ, ತೀರ್ಥ, ನೈವೇದ್ಯ ಸ್ವೀಕರಿಸಿದರೆ ಸಂತಸದ ಹೊನಲು ಹರಿಯುವುದು……’ ಎಂದು ವರ್ಣಿಸುತ್ತಾ ನಿಂತ.

ಕವಿಯೊಬ್ಬ ಎದ್ದು ನಿಂತು ‘ಕಾವ್ಯ, ನಾಟಕ, ಕಾದಂಬರಿ, ಹಾಸ್ಯ ಪ್ರಸಂಗಗಳ ರಸವತ್ತಾಗಿ ರಚಿಸಿ, ರಸಿಕ ಶಿಖಾ ಮಣಿಗಳಿಂದ ಹೊಗಳಿಸಿಕೊಳ್ಳುವುದರಿಂದ ಸಂತಸದ ಚಿಲುಮೆ ಚಿಮ್ಮುವುದು! ಚೈತನ್ಯದ ಚಿಲುಮೆ ಹೊಮ್ಮುವುದು! ಸ್ಫೂರ್ತಿಯ ಚಿಲುಮೆ ರಂಗೇರುವುದು…..’ಎಂದು ಕಾವ್ಯಮಯವಾಗಿ ಸಂತಸದಿ ಹೇಳಿದ.

ಅಷ್ಟರಲ್ಲಿ ಅಲ್ಲೇ ಇದ್ದ ಬೀರಬಲ್ಲ ಮಹಾಶಯ ಎದ್ದು ನಿಂತು ಮಹಾರಾಜರಿಗೆ, ಸಭೆಗೆ ವಂದಿಸಿ, ’ಮಹಾಪ್ರಭು…..ಸಂತಸದ ಚಿಲುಮೆ ಹರಸಿ ನಾವ್ಯಾರು ಅಡವಿಗೊಡಬೇಕಾಗಿಲ್ಲ, ಖಾವಿ ಧರಿಸಬೇಕಾಗಿಲ್ಲ. ಗುಡಿಗುಂಡಾರ ಸುತ್ತಿ ಪುಣ್ಯನದಿ ತೀರ್ಥಗಳಲ್ಲಿ ಮುಳಗಬೇಕಾಗಿಲ್ಲ. ಮೂಗು ಹಿಡಿದು ಕಣ್ಣುಮುಚ್ಚಿ ತಪಸ್ಸು ಮಾಡಬೇಕಾಗಿಲ್ಲ! ಪ್ರತಿನಿತ್ಯ ಮನಸ್ಸಿನಲ್ಲಿ ಚಿಂತನಾ ಮಂಥನ ನಡೆಸಬೇಕು. ಸಂತಸದ ಚಿಲುಮೆ ನನ್ನಲ್ಲಿಯೇ ಇದೆ ಎಂಬ ಆತ್ಮವಿಶ್ವಾಸ ಬೇಕು. ತಾಳ್ಮೆ, ಆತ್ಮ ತೃಪ್ತಿ, ದಮೆ, ಕರುಣೆ, ಶಾಂತಿ, ದಾನಧರ್ಮ-ಕ್ಷಮೆ ಇರಬೇಕು! ನಿಸ್ವಾರ್ಥ ಜೆವನದಲ್ಲಿ ತ್ಯಾಗದಲ್ಲಿ ಸಂತಸದ ಚಿಲುಮೆ ಇದೆ. ಕಾಣಬೇಕು… ಅದು ದಿನೇ ದಿನೇ ನಮಗೆ ಗೊತ್ತಾಗುತ್ತಾ ಹೋಗುತ್ತದೆ…’ ಎಂದು ವಿವರಿಸುತ್ತಾ ನಿಂತ.

ಅಲ್ಲಿದ್ದವರೇನು….. ಸ್ವತಃ ಅಕ್ಬರ್ ಮಹಾರಾಜ ಬೀರಬಲ್ಲನ ವಿವರಣೆಗೆ ಸಂತಸ ಉಕ್ಕಿ ಬಂತು. ಎಲ್ಲರೂ ಜೋರಾಗಿ ಕರತಾಡನ ಮಾಡಿ ಸಂತಸ ವ್ಯಕ್ತಪಡಿಸಿದರು.

ಅಲ್ಲಿಗೆ ಅಂದಿನ ಸಭೆಯು ಮುಕ್ತಾಯಗೊಂಡಿತು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾತ್ಸಲ್ಯ
Next post ಮಿಂಚುಳ್ಳಿ ಬೆಳಕಿಂಡಿ – ೨

ಸಣ್ಣ ಕತೆ

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…

cheap jordans|wholesale air max|wholesale jordans|wholesale jewelry|wholesale jerseys