ನನ್ನನ್ನು ನಾ ಕೊಂದು…

ನನ್ನನ್ನು ನಾ ಕೊಂದು…

ಚಿತ್ರ: ಉಲ್ರಿಕೆ ಮಾಯ್
ಚಿತ್ರ: ಉಲ್ರಿಕೆ ಮಾಯ್

ಬಿದಿದ್ದೇನೆ: ‘ಬಕ್ಬಾರ್‍ಲು’
ಹೇಗೋ ಉಸಿರು, ಬಿಗಿ ಹಿಡಿದಿದ್ದೇನೆ.
ಹೇಗಾದರೂ ಮಾಡಿ, ಬದುಕಬೇಕೆಂಬಾ ಆಸೆಯಲಿ, ‘ಅಂಗಾತ…’!
ವಿಲ ವಿಲ ಒದ್ದಾಡಿ, ಕಣ್ಣು, ಕಾಲು, ಕೈಗಳ ಬಡಿತ್ತಿದ್ದೇನೆ!
ಮೇಲೆ ಆಕಾಶ, ಕೆಳಗೆ ನೆಲ ನೋಡುತ್ತಿದ್ದೇನೆ…
ಮೈ ಹೆಪ್ಪುಗಟ್ಟುವ ತನಕ…! ಗಿರಗಿರನೇ ಬುಗುರಿಯಾದೆ.
ಐದೂವರೆ ಅಡಿ ಎತ್ತರದಾ ನಾನೊಬ್ಬ!
ಇಲ್ಲಿ… ಮನುಶ್ಯನೆಂದೇ ನನ್ನ ತಿಳಿದಿಲ್ಲರೊಬ್ಬ!
ಅಬ್ಬಾ! ಏಳು ಮಿಂಡ್ರಿಗಳಪ್ಪ!
*  *  *

ಕೋಟಿ, ಕೋಟಿ ಜನರ ಮಧ್ಯೆ…
ಯಾರಿಗೂ ಕಾಣುತ್ತಿಲ್ಲ! ನೆತ್ತಿ ಮೇಲೆ ಜನರ ಕಣ್ಣು!
ಯಾರಾದರೂ ಬಂದಾರು…
ಕೈಹಿಡಿದೆತ್ತಿ, ಗುಕ್ಕು ನೀರು, ಬಾಯಿಗೆ ಬಿಟ್ಟು,
ಗಾಳಿ ಬೀಸಿ, ಕೈಹಿಡಿದು,
ಎಬ್ಬಿಸುವರೆಂದು, ಜೀವ ಬಿಗಿ ಹಿಡಿದು, ಕಾದಿದ್ದೇನೆ!
*  *  *

ಅಕ್ಕ ಪಕ್ಕದಲಿ, ತುಳಿದು ಎಡವಿ ಹೋದವರ…
ಬಿಂಬ, ಪ್ರತಿಬಿಂಬವಾ ಕಂಡು, ಪುಲಕಿತಗೊಂಡಿದ್ದೇನೆ!
ಕಣ್ಣುಗಳಲಿ, ಕೂಗಿಕೂಗಿ… ಕರೆದಿದ್ದೇನೆ.
ಓಡುವವನ ಇಶ್ಟು ಸುಲಭದೀ, ಎಡವಿ ಕೆಡಿವಿದವರು…
ಈಗ ಮೈದಡವಿ, ಮೇಲೆತ್ತುವರೇನು?!
ಥೂ! ಘನ್ನು ಘಾತುಕರು!
ಅಸಲು ತಾಯ್ಗಿಂಡ್ರು…
ಏಳ್ಗೆ… ಸಹಿಸದ ಜನರ ನಡುವೆ,
ಬಲು ಅವಸರದಿ, ಎಡವಿ ಬಿದ್ದಿದ್ದು,
ತುಪ್ಪ ಜಾರಿ, ಕೊಚ್ಚೆಗೆ ಬಿದ್ದಂತಾತು!
*  *  *

ಈಗ ಜೀವ ಹೋಗುವ ಭಯವಿದೆ!
ಅಪ್ಪನ ಜೀತದ ‘ರಕ್ಕ’ದಲಿ,
ಕಲಿತದ್ದು ಸೊನ್ನೆಯೆಂಬುದೀಗ ತಿಳಿದು,
ಅಮ್ಮನ ಕೈ ತುತ್ತು, ‘ಬಲಹೀನ’ವೆಂದು ಅರಿತು,
ಹಾದಿ ಬೀದಿಯ ತುಂಬಾ, ಜನರ ‘ಆಡಂಬೋಲ’ ಕಂಡು,
ನರನಾಡಿಗಳೇ ಹುದುಗಿದವಲ್ಲ….?!
*  *  *

ತ್ವಗ್ಲು ಹದಾ ಮಾಡುವ ಚಮ್ಮಾರನ,
‘ಕಶ್ಟ’ ಮಾಡಿ, ಹೊಟ್ಟೆ ಹೊರೆವ ಶಿಷ್ಠರನ,
ಬಾಳ ಹಡುಗು, ಮಾಡುವ ಬಡಿಗನ,
ಮಡಿ ಮಾಡಿ, ದುಡಿದುಣ್ಣುವ ಮಡಿವಾಳರನ,
ಕರೆದಾಗ, ಕೆರಬಿಟ್ಟು, ಸರಸರ ಬರುವ ಕೂಲಿಕಾರನ,
ಹಳೆಕಾಲ್ಮಾರಿಗೆ, ಹೊಸ ಮೊಳೆ ಹೊಡೆವ, ಮಣೆಗಾರನ,
ಕಾಳು, ಕಡಿ, ತೂರಿ, ತುರಿಕೆಯೆಬ್ಬಿಸುವ, ಗರತಿಯರನ,
ಸಿಗಿದು, ‘ಆರ್‍ಬಾಡ್ಸಿ’ ಒಣಗಲಿಟ್ಟಿದ್ದಾರೆ!
ಬಳ್ಳಾರಿ ಜೈಲುಗೋಡೆಗಳ ಮಧ್ಯೆ…. ವೃಥಾ…ಽಽ
ಹಟ್ಟವರನ್ನು ಬಿಟ್ಟು,
ಇಣುಕಿ ನೋಡಿದವರಿಗೆ, ನೇಣು ಶಿಕ್ಷೆಯೆಂದರೇನು?!
ಈ ಹಲ್ಕಾ ವ್ಯವಸ್ಥೆ ಮಧ್ಯೆ…
ಇಂಥಾ ತಾಯಿಗಂಡರ ನಡುವೆ,
ನಾ ನ್ಯಾಯ, ನೀತಿಗಾಗಿ…
ಬಾಯಿ, ಬಾಯಿ, ಹಂಬಲಿಸಿ,
ಬಿದ್ದ ಸ್ಥಿತಿಯಲ್ಲೇ, ಹಗಲುಗನಸು ಕಾಣುತ್ತಿದ್ದೇನೆ!
ವಿಲವಿಲ ಒದ್ದಾಡಿ, ಒದ್ದಾಡಿ… ರಪ್ಪೆ ಬಡಿಯುತ್ತಿದ್ದೇನೆ!
*  *  *

ಈಗೀಗ ಮೊಂಡಾಗಿವೆ!
ಮೂಗು, ಮುಷಿಣಿ, ಈ ನನ್ನ ಹಲ್ಲೂಗಳೂ…
ಜೋತು ಬಿದ್ದ, ಎದೆ ಗುಂಡುಗಳೂ…
ತುಕ್ಕಿಡಿದ ರಂಪಿಗೆ, ಉಳಿ, ಕೊಡ್ತಿ, ಕ್ವಂಬು, ಇಕ್ಕಳಗಳೂ…
ಮೂಗರ್ಧ ಜನರ ನಡುವೆ, ಕಳೆಯುತ್ತಿದ್ದೇನೆ…
ನಾ ಕಳೆದು ಅಳಿದು, ಹೋಗುವಾ ಮುನ್ನ…
ಹುಡುಕಿ ಕೊಡುವ, ಹೃದಯ ಶ್ರೀಮಂತರಿದ್ದರೆ…
ಬನ್ನಿ! ನನ್ನ ಎದ್ದು ಕೊಡ್ರಿಸಿ, ಗುಕ್ಕು ನೀರು ಬಿಟ್ಟು,
ಬೆನ್ನು ಚೆಪ್ಪರಿಸಿ, ‘ನಾಲಿಗೆ ಪ್ರೀತಿ’ ತೋರಿ ಸಾಕು!!
*  *  *

ಈ ಕಪ್ಪು ನೆಲ ಕೆಂಪಾಯಿತಲ್ಲಾ?!
ಕೂಲಿಗಾಗಿ ಸಾಲು ಸಾಲು ಜನರಿಲ್ಲಿ…
ಕಲ್ಲಿಗೆ, ಮಣ್ಣಿಗೆ, ಮರಕ್ಕೆ, ಕೆರಕ್ಕೆ…
ಕರಮುಗಿದು, ಶಿರಬಾಗಿ, ಶರಣೆಂಬಾ… ಮೂರ್ಖರಿರುವಾಗ,
ತನ್ನಂತಿರುವಾ… ಮನುಜನ, ಕಣ್ಣೆತ್ತಿ ನೋಡದವರ, ಮಧ್ಯೆ-
ದನಗಳೆಶ್ಟೋ ವಾಸಿಯೆಂಬಾ ಘಾಸಿಲಿ,
ಮನದಲಿ, ಕೋಪ ಉಕ್ಕಿ- ಉಕ್ಕಿ- ಕೊನೆಗೆ ತಣ್ಣಗಾಗಿದ್ದೇನೆ!
ಬೆಟ್ಟದಲಿ… ಹುಲ್ಲಾಗಿ, ಮಲ್ಲಿಗೆಯಾಗಿ, ಮರವಾಗಿ, ಹಣ್ಣಾಗಿ,
ಹಳ್ಳದಾ ಚಿಲುಮೆಯಾಗಿ, ಹಸುವಾಗಿ, ಎತ್ತಾಗಿ,
ಕತ್ತೆ, ಕುದುರೆ, ಹಂದಿ, ನಾಯಿ, ಕಾಗೆ, ಕಲ್ಲಾಗಿ,
ಕೊನೆಗೆ… ಪರ್‍ಕೆ, ತಿರುಬೋಕಿಯಾದರೆಶ್ಟೋ ಚೆನ್ನ… ಚಿನ್ನ!!
ಎಂಬ… ಜಿಗುಪ್ಸೆಯಲಿ,
ಮನನೊಂದು, ನೊಂದು… ಬೆಂದು…
ನನ್ನನ್ನು ನಾ ಕೊಂದು… ಕೊಂದು…
ಇಂದು…
ಕಣ್ಣು ಮುಚ್ಚಿದೆ!!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಯಾಕೆಂದರೆ
Next post ದೇವರಿಗೆ

ಸಣ್ಣ ಕತೆ

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

cheap jordans|wholesale air max|wholesale jordans|wholesale jewelry|wholesale jerseys