Home / ಕವನ / ಕವಿತೆ / ವಾಸ್ತವ

ವಾಸ್ತವ

ಚಿತ್ರ: ದೇವನಾಥ
ಚಿತ್ರ: ದೇವನಾಥ

ಪಾಪದವರು ನಾವು
ಅದೆಶ್ಟೋ ಕೋಪ, ತಾಪದಲಿ,
ಪಾಪದ ಕೊಡ ತುಂಬಿ, ತುಂಬಿ…
ಈ ಊರು, ಕೇರಿ, ಹರಿದಿದೆ!
ಎದುರು ಬಿಸಿಲಿಗೆ, ಕಬ್ಬಿಣದಾ ಅದಿರಾಗಿ, ಕಾದಿದ್ದೇವೆ!
ಹಾದು ಹೋಗುವವರ, ಕಾಲುಗಳ ಕಾದು ಕಾದು…
ಕಣ್ಣುಗುಡ್ಡೆ ಒಡೆದೂ…
ಬಳಲಿ ಬೆಂಡಗಿ, ಕರಕಾಗಿ, ಅಲ್ಲೆ ಕುಂತಿದ್ದೇವೆ!
ಕುಂತಿ ಪುತ್ರರಾಗಿ, ಭರತ, ಶತೃಜ್ಞರಾಗಿ-
ಸೂತಕವಿನ್ನು ಕಳೆದಿಲ್ಲ! ಅಡಿಗೆ ಮನೆಗೆ ಕರೆದಿಲ್ಲ!!
*  *  *

ಕರೆಬಾನಿಲೆದ್ದಿ, ತೊಳೆದ ಕೈಗಳ, ಈ ನೀಸುತನ
ಏಳುಕೆರೆ, ಸಪ್ತ ಸಾಗರದಲೆದ್ದಿ, ತೊಳೆತೊಳ್ದೆರಿನ್ನು ಕಳೆದಿಲ್ಲ!
ದೇಶ ವಿದೇಶದ, ಸುವಾಸನೆಯ ಸುಗಂಧ ದ್ರವ್ಯಲದ್ದಿ ತೀಡಿ, ತಿಕ್ಕಿದರೂ…
ಆ ಜಿಗುಟು, ಕಮಟು, ಮಡ್ಸು ವಾಸನೆಗೆ ವಿಮುಕ್ತಿಯಿಲ್ಲ!
ಶತಶತಮಾನದ ಈ ಶಾಪ, ಯಾವ ಜನ್ಮದಲ್ಲಂಟಿತೋ?!
ಹರಳಯ್ಯನಿಂದಾ ಮೊದಲುಗೊಂಡು,
ರೆಂಪಿಗೆಯಾಡಿಸಿದವರ ಪಾಡು,
ಹಾಡಾಗಿ, ಅರಣ್ಯರೋಧನವಾಗಿ, ಹರಿದಿದೆಯಲ್ಲಾ?!
ಕಲ್ಯಾಣದಣ್ಣಗಳಿರಾ…
ಚಪ್ಪಲಿ ಪೂಜೆ ಯಾಕಂದಿರಾ??
ಹರಳಯ್ಯ, ಕಲ್ಯಾಣಮ್ಮನ, ತೊಡೆ ಚರ್ಮದಿ, ಮಾಡಿದ ಕೆರಗಳಿಗೆ,
ಕರ ಮುಗಿದ, ಅಣ್ಣಬಸವಣ್ಣನವರು!!
ಈ ಮೆಟ್ಟು ಮೆಟ್ಟಿದ ತಪ್ಪಿಗೆ
ಕಾಲುರಿ, ಕಣ್ಣುರಿ, ಅಂಗಾಂಗ ಉರಿ ಉರಿ ಎದ್ದು…
ಕರೆಬಾನಿಲಿ ಮುಳುಗೆದ್ದು,
ಕೆರಗಳಿಗೆ ಮನ ತಂದ ಮಾನವಂತ!!
ಶೀಲವಂತನ ಮದುವೆಗೆ, ದಂಗೆ ಎದ್ದ ಜನ,
ಅದೇ ಕಾಲ್ಮರಿಗೆ, ಶರಣೆಂದದ್ದು ಸರಿಯೇ??
*  *  *

ಊರುಕೇರಿ, ಜಗಲಿ ಮೇಲೆ…
ಸಣ್ಣ, ದೊಡ್ಡವರ, ಕಾಲ ಕೆಳಗೆ, ಕಣ್ಣಸೆಳೆವ,
ಗುಡಿ, ಚರ್ಚು, ಮಸೀದಿ, ಅಡಿಗೆ ಮನೇಲಿ,
ಕಾಲ ಮೇಲೆ ಕಾಲನೇರಿ, ಮೆರೆವ ಕಾಲ್ಮಾರಿಗಳೇ…
ನಾವಿನ್ನೂ ಹೊರಗೇ ಊರ ಹೊರಗೇ…!!
ಕೆರಗಳಿಗೆ, ಕರ ಮುಗಿವ, ಹಿರಿಜನರೇ…
ಈ ಹರಿಜನರ, ಕಡೆಗಣಿಸಿರುವುದು, ಸರಿಯೇ??
ಓ… ಹರಿಯೇ… ಇದು ಸರಿಯೇ?!
ಯುಗ ಯುಗಳೆ ಕಳೆದರೂ…
ಕೆರಗಳ ಪರ್‍ಯಾಯವೆಲ್ಲಿದೆ ಹೇಳಿ??
ಕೆರಗಳ ಮಾಡಿದವರ,
ಕರ ಪಿಡಿದು, ಎತ್ತಿದವರುಂಟೇ??
ಪುರಾಣ, ಪುಣ್ಯಪುರುಷರು ಕೆರಗಳಿಗೆ ಕರಮುಗಿದು,
ಗದ್ದುಗೆ ಮೇಲಿಟ್ಟು, ಪೂಜಿಸಿ ಪುನೀತರಾಗಿದ್ದು ಸುಳ್ಳೇ??
ಕೆರಗಳಿಗೆ ಗುಡಿಕಟ್ಟಿ, ಕರ ಮುಗಿವದು ತಿಳಿಯದೇ?
ಅಣ್ಣ ಬಸವಣ್ಣ, ಕೆರಗಳ ಶಿರದಲಿ ಹೊತ್ತು, ಮೆರೆದಾಡಿದ್ದು ಪುರಾಣವೇ??
ಸಭೆ, ಸಮಾರಂಭ, ವಿಧಾನ ಸೌಧದಲಿ…
ಕೆರಗಳು ಕರದಲ ರಂಗೇರಿ, ಹಾರಾಡಿ, ತೂರಾಡಿದಾಗ,
ಮಾದಿಗರ ಶ್ರಮ ಸಾರ್ಥಕವಾಗಿ, ಧನ್ಯರಾಗಿ…
ಪುಟ್ಟ ಕಂದನ ಎತ್ತಿ, ಮುದ್ದಾಡಿದ ಖುಷಿ ಕೇರಿಗರಿಗೆ!!
*  *  *

ಈ ನಮ್ಮ ಹೊಲಸು ಕೆರಗಳಿಗೆ
ಕಡೆಯಾದ ಬುದ್ಧಿ ಕಂಡು ಕೆರಳಿ, ಇವರ…
ಕಿತ್ತೋದ ಕೆರಗಳೆಂಬೆ!
ಸವಕಲು ಮನಸ್ಸೆಂಬೆ!
ಕಿಲುಬುಗಟ್ಟಿದ ಜನರೆಂಬೆ…
…ಮುಳ್ಳುರೆಂಬೆಯೆಂಬೆ!!
ಮಟ ಮಟ ಮಧ್ಯಾನದ ಮಾದಿರೆಂಬೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...