ವಾಸ್ತವ

ವಾಸ್ತವ

ಚಿತ್ರ: ದೇವನಾಥ
ಚಿತ್ರ: ದೇವನಾಥ

ಪಾಪದವರು ನಾವು
ಅದೆಶ್ಟೋ ಕೋಪ, ತಾಪದಲಿ,
ಪಾಪದ ಕೊಡ ತುಂಬಿ, ತುಂಬಿ…
ಈ ಊರು, ಕೇರಿ, ಹರಿದಿದೆ!
ಎದುರು ಬಿಸಿಲಿಗೆ, ಕಬ್ಬಿಣದಾ ಅದಿರಾಗಿ, ಕಾದಿದ್ದೇವೆ!
ಹಾದು ಹೋಗುವವರ, ಕಾಲುಗಳ ಕಾದು ಕಾದು…
ಕಣ್ಣುಗುಡ್ಡೆ ಒಡೆದೂ…
ಬಳಲಿ ಬೆಂಡಗಿ, ಕರಕಾಗಿ, ಅಲ್ಲೆ ಕುಂತಿದ್ದೇವೆ!
ಕುಂತಿ ಪುತ್ರರಾಗಿ, ಭರತ, ಶತೃಜ್ಞರಾಗಿ-
ಸೂತಕವಿನ್ನು ಕಳೆದಿಲ್ಲ! ಅಡಿಗೆ ಮನೆಗೆ ಕರೆದಿಲ್ಲ!!
*  *  *

ಕರೆಬಾನಿಲೆದ್ದಿ, ತೊಳೆದ ಕೈಗಳ, ಈ ನೀಸುತನ
ಏಳುಕೆರೆ, ಸಪ್ತ ಸಾಗರದಲೆದ್ದಿ, ತೊಳೆತೊಳ್ದೆರಿನ್ನು ಕಳೆದಿಲ್ಲ!
ದೇಶ ವಿದೇಶದ, ಸುವಾಸನೆಯ ಸುಗಂಧ ದ್ರವ್ಯಲದ್ದಿ ತೀಡಿ, ತಿಕ್ಕಿದರೂ…
ಆ ಜಿಗುಟು, ಕಮಟು, ಮಡ್ಸು ವಾಸನೆಗೆ ವಿಮುಕ್ತಿಯಿಲ್ಲ!
ಶತಶತಮಾನದ ಈ ಶಾಪ, ಯಾವ ಜನ್ಮದಲ್ಲಂಟಿತೋ?!
ಹರಳಯ್ಯನಿಂದಾ ಮೊದಲುಗೊಂಡು,
ರೆಂಪಿಗೆಯಾಡಿಸಿದವರ ಪಾಡು,
ಹಾಡಾಗಿ, ಅರಣ್ಯರೋಧನವಾಗಿ, ಹರಿದಿದೆಯಲ್ಲಾ?!
ಕಲ್ಯಾಣದಣ್ಣಗಳಿರಾ…
ಚಪ್ಪಲಿ ಪೂಜೆ ಯಾಕಂದಿರಾ??
ಹರಳಯ್ಯ, ಕಲ್ಯಾಣಮ್ಮನ, ತೊಡೆ ಚರ್ಮದಿ, ಮಾಡಿದ ಕೆರಗಳಿಗೆ,
ಕರ ಮುಗಿದ, ಅಣ್ಣಬಸವಣ್ಣನವರು!!
ಈ ಮೆಟ್ಟು ಮೆಟ್ಟಿದ ತಪ್ಪಿಗೆ
ಕಾಲುರಿ, ಕಣ್ಣುರಿ, ಅಂಗಾಂಗ ಉರಿ ಉರಿ ಎದ್ದು…
ಕರೆಬಾನಿಲಿ ಮುಳುಗೆದ್ದು,
ಕೆರಗಳಿಗೆ ಮನ ತಂದ ಮಾನವಂತ!!
ಶೀಲವಂತನ ಮದುವೆಗೆ, ದಂಗೆ ಎದ್ದ ಜನ,
ಅದೇ ಕಾಲ್ಮರಿಗೆ, ಶರಣೆಂದದ್ದು ಸರಿಯೇ??
*  *  *

ಊರುಕೇರಿ, ಜಗಲಿ ಮೇಲೆ…
ಸಣ್ಣ, ದೊಡ್ಡವರ, ಕಾಲ ಕೆಳಗೆ, ಕಣ್ಣಸೆಳೆವ,
ಗುಡಿ, ಚರ್ಚು, ಮಸೀದಿ, ಅಡಿಗೆ ಮನೇಲಿ,
ಕಾಲ ಮೇಲೆ ಕಾಲನೇರಿ, ಮೆರೆವ ಕಾಲ್ಮಾರಿಗಳೇ…
ನಾವಿನ್ನೂ ಹೊರಗೇ ಊರ ಹೊರಗೇ…!!
ಕೆರಗಳಿಗೆ, ಕರ ಮುಗಿವ, ಹಿರಿಜನರೇ…
ಈ ಹರಿಜನರ, ಕಡೆಗಣಿಸಿರುವುದು, ಸರಿಯೇ??
ಓ… ಹರಿಯೇ… ಇದು ಸರಿಯೇ?!
ಯುಗ ಯುಗಳೆ ಕಳೆದರೂ…
ಕೆರಗಳ ಪರ್‍ಯಾಯವೆಲ್ಲಿದೆ ಹೇಳಿ??
ಕೆರಗಳ ಮಾಡಿದವರ,
ಕರ ಪಿಡಿದು, ಎತ್ತಿದವರುಂಟೇ??
ಪುರಾಣ, ಪುಣ್ಯಪುರುಷರು ಕೆರಗಳಿಗೆ ಕರಮುಗಿದು,
ಗದ್ದುಗೆ ಮೇಲಿಟ್ಟು, ಪೂಜಿಸಿ ಪುನೀತರಾಗಿದ್ದು ಸುಳ್ಳೇ??
ಕೆರಗಳಿಗೆ ಗುಡಿಕಟ್ಟಿ, ಕರ ಮುಗಿವದು ತಿಳಿಯದೇ?
ಅಣ್ಣ ಬಸವಣ್ಣ, ಕೆರಗಳ ಶಿರದಲಿ ಹೊತ್ತು, ಮೆರೆದಾಡಿದ್ದು ಪುರಾಣವೇ??
ಸಭೆ, ಸಮಾರಂಭ, ವಿಧಾನ ಸೌಧದಲಿ…
ಕೆರಗಳು ಕರದಲ ರಂಗೇರಿ, ಹಾರಾಡಿ, ತೂರಾಡಿದಾಗ,
ಮಾದಿಗರ ಶ್ರಮ ಸಾರ್ಥಕವಾಗಿ, ಧನ್ಯರಾಗಿ…
ಪುಟ್ಟ ಕಂದನ ಎತ್ತಿ, ಮುದ್ದಾಡಿದ ಖುಷಿ ಕೇರಿಗರಿಗೆ!!
*  *  *

ಈ ನಮ್ಮ ಹೊಲಸು ಕೆರಗಳಿಗೆ
ಕಡೆಯಾದ ಬುದ್ಧಿ ಕಂಡು ಕೆರಳಿ, ಇವರ…
ಕಿತ್ತೋದ ಕೆರಗಳೆಂಬೆ!
ಸವಕಲು ಮನಸ್ಸೆಂಬೆ!
ಕಿಲುಬುಗಟ್ಟಿದ ಜನರೆಂಬೆ…
…ಮುಳ್ಳುರೆಂಬೆಯೆಂಬೆ!!
ಮಟ ಮಟ ಮಧ್ಯಾನದ ಮಾದಿರೆಂಬೆ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆ ಸೂರ್ಯನೇ ಸರಿ
Next post ತತ್ವಜ್ಞಾನಿ

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

cheap jordans|wholesale air max|wholesale jordans|wholesale jewelry|wholesale jerseys