ನನಗೇನು ಗೊತ್ತು?

ನನಗೇನು ಗೊತ್ತು?

ಚಿತ್ರ: ನಾದಿನೆ ಹಡ್ಸನ್
ಚಿತ್ರ: ನಾದಿನೆ ಹಡ್ಸನ್

ನಾ ಕೇರಿಯವ!
ನನಗೇನು ಗೊತ್ತು?
ಸತ್ತ ದನವ, ಕಿತ್ತು ಕಿತ್ತು…
ನಾಯಿ, ನರಿ, ಹಂದಿ, ಹದ್ದು, ಕಾಗೆಯಂತೇ…
ತಿನ್ನುವುದು ಗೊತ್ತು!
*

ಕೊಳೆಗೇರೀಲಿ
ಹರಕು ಜೋಪಡೀಲಿ
ಚಿಂದಿ ಬಟ್ಟೇಲಿ
ಹಸಿದ ಹೊಟ್ಟೇಲಿ
ಮುರುಕು ಮುದ್ದೆ ತಿಂದು,
ಮಗಿ ನೀರು ಕುಡಿದು,
ನೆಲಕೆ ತಲೆಕೊಟ್ಟು,
ಗೊರಕೆ ಹೊಡೆವುದು ಗೊತ್ತು!!
*

ನಾ ಕೇರಿಯವ!
ಬಾಲ ಕಾರ್‍ಮಿಕನೆಂಬುದೇನು ಗೊತ್ತು?
ಅಕ್ಷರ ಕಲಿಯದೆ,
ಲೋಕಜ್ಞಾನವಿಲ್ಲದೆ,
ಸಿಕ್ಕ ಸಿಕ್ಕಲ್ಲಿ, ಹೆಬ್ಬೆಟ್ಟು ಒತ್ತುವುದು
ಹಳಸಿದ್ದು, ಸೀಕುಪಾಕು, ಮುಸುರೆ,
ಕಲುಷಿತ ನೀರು, ಕುಡಿಬಾರದೆಂದೇನು ಗೊತ್ತು?

ಭಾಗ: ಒಂದು

ಕಂಡ ಕಂಡ ದೇವ್ರಿಗೆ, ಜೆಡ್ಡು ‘ಜಾಪತ್ರೆ’ಗಳಿಗೆ
ಹರಕೆ ಹೊತ್ತು, ಮುಡಿಕಟ್ಟಿ, ‘ಮಿಸಲಾಕಿ’…
ಕುರಿ, ಕೋಣ, ಬಲಿ ಕೊಡುವುದು, ಮಾತ್ರ ಗೊತ್ತು!
ಸಾಲ ಮಾಡಿ, ಜೀತ ಮಾಡಿ,
ಕತ್ತಲ ಕೂಪದಲಿ, ಬರೀ ನೆಲದಲಿ…
ಕೋಳಿ, ನಾಯಿ, ಹಂದಿ, ನೊಣಗಳೊಂದಿಗೆ,
ಈ ಹೊಲಗೇರಿಲಿ, ಪಾಪಕೂಪದಲಿ,
ಬಿದ್ದಿರಲು ವಿಧಿಬರಹ, ದೇವರ ಶಾಪವೆಂದು,
ನಂಬಿಸಿದ್ದು ಮಾತ್ರ, ನನಗೆ ಗೊತ್ತು!
*

ಬಸವನಿಂದೆ ಬಾಲವೆಂಬಂತೇ…
ನಮ್ಮಪ್ಪ, ಅಮ್ಮ, ಅಕ್ಕ, ಅಣ್ಣರ ಹಿಂದಿಂದೆ,
ಜಂಗ್ಳುದನ ಕಾದು, ಕೈಕಟ್ಟಿ, ನಡುಬಗ್ಗಿ…
ಧಣೀಗಳ ಕಸ, ಮುಸರೆ ಎತ್ತಿ,
ಸಗಣಿ, ಗಂಜು ಹೊತ್ತು, ಕತ್ತು ನೋಯಿಸಿಕೊಂಡು,
ಜೀತ ದುಡಿದು, ತಲೆತಗ್ಗಿ…
ಆಲದ ಮರಕೆ, ಕೊರಳೊಡ್ಡುವುದು ಗೊತ್ತು!
*

ಇನ್ನು ಊರು ಕೇರಿಗರ
ಹಳೇ ಮೂಗರ್ಧ ಕಾಲ್ಮಾರಿಗಳ ಹೊಲಿದು,
ಪುಡಿಗಾಸು ಪಡೆದು,
ಅಂಬ್ಲಿ ನೀರು ಕುಡಿದದ್ದು ಗೊತ್ತು!
ಬಿಸಿಲು, ಗಾಳಿ, ಮಳೆ, ಎನ್ನದೆ,
ಹಗಲಿರುಳು ರಟ್ಟೆ ಮುರಿದು,
ನಾಲ್ಕು ‘ದಮ್ಡಿ’ ಗಳಿಸಿ,
ಈಚ್ಲು ಹೆಂಡಾ, ಭಟ್ಟಿ ಸಾರಾಯಿ ‘ಸೆಂಡಿ’
ಹಾಡುತ್ತಾ… ಪಾಡುತ್ತಾ… ಕುಣಿದು… ಕುಪ್ಪಳಿಸಿ…
ಶತ ಶತಮಾನದ ದುಕ್ಕ, ದುಮ್ಮಾನ ಮರೆವುದು ಗೊತ್ತು!

ಭಾಗ: ಎರಡು

ಹೌದೌದು! ನಾ ಕೇರಿಯವ! ತಿಳಿಗೇಡಿ ಎನಬೇಡಿ ಇನ್ನು!
ಈ ಲೋಕದ ಡೊಂಕು, ಕೊಂಕು, ನನಗೆಲ್ಲ ಗೊತ್ತು ಬಿಡಿ!!
ಅಕ್ಷರ ಕಲಿಸದೆ, ಗುಡಿ ಗೋಪುರ, ಹೊಟೆಲ್‌ಗೆ ಸೇರಿಸದೆ,
ಊರಿಂದ ದೂರಿಟ್ಟು, ಮುಖ್ಯವಾಹಿನಿಗೆ ಸೇರಿಸದೆ,
ಹೊತ್ತು ಹೊತ್ತಿಗೆ ತುತ್ತಿಕ್ಕದೆ, ಬೊಗಸೆಗೆ ನೀರಾಕಿ,
ಬರೀ ಮೈಲಿಟ್ಟು, ಗಡ್ಡ, ಮೀಸೆ, ಕೂದಲು ‘ಮಳೆವರೆ’ ಬಿಡಿಸಿ,
ಹಗಲುರಾತ್ರಿ ಕತ್ತೇ ಸಾಕ್ರೀ, ಬಿಟ್ಟಿ ವಗ್ತಾನ ಮಾಡಿಸುವುದು ನಿಮಗೆ ಗೊತ್ತು!

ಭಾಗ: ಮೂರು

ಈಗೀಗ ಅದೇಗೋ… ಅಕ್ಷರ ಕಲಿತು, ಮನುಶ್ಯರಾಗಿದ್ದೇವೆ!
ಗುಡಿ, ಗೋಪುರಕೆ ಕಾಲಿಟ್ಟಿದ್ದೇವೆ! ಆತ್ಮವಿಶ್ವಾಸ ಬೆಳೆಸಿಕೊಂಡಿದ್ದೇವೆ!!
ನಿಮ ಸಮಕುಂತು, ಊಟ, ತಿಂಡಿ, ಕಾಫಿ ಕುಡಿದು,
ತಲೆಗೂದಲು ಕತ್ತಿರಿಸಿ, ಸೂಟು, ಬೂಟು, ಹಾಕಿಕೊಂಡು,
ನಿಮ್ಮಕತ್ತಿನ ಪಟ್ಟಿ ಹಿಡಿದು, ನ್ಯಾಯ ಕೇಳಿ, ಪ್ರತಿಭಟಿಸಿ,
ದೌರ್ಜನ್ಯಕೆ, ‘ಧಿಕ್ಕಾರ’ ಕೂಗಿ, ಸಂಪು ಹೂಡಿ,
ನಮ್ಮ ಹಕ್ಕು, ಪ್ರತಿಪಾದಿಸುವುದೂ ಗೊತ್ತು!!
ಈ ಊರುಕೇರಿನ ಒಂದೂಗೂಡಿಸಿ,
ದರ್ಜಿಯಾಗಿ, ಹರಿದ ಮನಗಳ, ಹೊಲಿವುದು ಗೊತ್ತು!
ಗಾರೆಯವನಾಗಿ, ಜಾತಿ, ಮತ, ಬಿರುಕಗಳ ಮುಚ್ಚಿ,
ಬಿದ್ದ ಮನೆ, ಮನಗಳ ಕಟ್ಟುವುದೂ ಗೊತ್ತು!
ಕೃಷಿಕನಾಗಿ; ಮಾನವೀಯತೆ, ಅನುಕಂಪ ಬಿತ್ತಿ,
ದಯೆ, ದಾನ, ಧರ್‍ಮಾ, ಕರ್‍ಮಾವೆಂಬಾ ಕಾಳು ಬೆಳೆದು,
ಹಸಿರು, ಉಸಿರು, ಹೆಸರುಗಳಿಸಿ, ನಿಮ್ಮ ಉದ್ಧರಿಸುವುದೂ ಗೊತ್ತು!!
ಮಾಲೀಕನಾಗಿ; ಈ ಹೊಲ, ಮನೆ, ಆಡುವು, ಆಸ್ತಿ, ಸಂಪತ್ತನ್ನು
ಹಂಚಿ, ಸಮಾಜಿಕ ನ್ಯಾಯ, ಒದಗಿಸುವುದೂ ಗೊತ್ತು!
ಗೊತ್ತು… ಗೊತ್ತು…! ನಿಮ್ಮನ್ನು ಮನುಶ್ಯರನ್ನಾಗಿಸುವ ಕಲೆ,
ಶ್ರಮ, ನಮಗೆಲ್ಲ ಗೊತ್ತು! ಗೊತ್ತು!!… ಬೆಚ್ಚಿಬೀಳಿಸುವುದೂ ಗೊತ್ತು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಇವನಿಗೇನು ಧಾಡಿ?
Next post ಬೂಟಾಟಿಕೆ

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…