Home / ಕವನ / ಕವಿತೆ / ನಾವಿದ್ದೇವೆಲ್ಲ ಯಾಕೆ?

ನಾವಿದ್ದೇವೆಲ್ಲ ಯಾಕೆ?

ಚಿತ್ರ: ವಿಕಿ ಇಮೇಜಸ್
ಚಿತ್ರ: ವಿಕಿ ಇಮೇಜಸ್

ಸತ್ತ ದನವ ತಿಂದೂ ತಿಂದೂ
ನಾವಿನ್ನೂ ಸತ್ತಿಲ್ಲವಲ್ಲ ಯಾಕೆ?
ಯುಗಯುಗಗಳಿಂದಾ ಪಾಂಡವರಂತೇ…
ಹಗೆಗಳಾಗಿ, ಬದುಕಿದ್ದೇವೆಲ್ಲ ಯಾಕೆ?
*

ಹೊಲೆಗೇರಿಲಿದ್ದು,
ಯುಗಯುಗಗಳಿಂದಾ
ಸತ್ತ ದನವೇ ನಮಗಾಯಿತಲ್ಲ ಯಾಕೆ?
ಕರೆಬಾನಿಲಿ ಮುಳುಗೆದ್ದರೂ,
ಇವ್ರಿನ್ನು ಸತ್ತಿಲ್ಲವಲ್ಲ ಯಾಕೇ?
*

ಊರ ಹೊರಗಟ್ಟಿದರೂ
ಸತ್ತ ದನವ ತಿನ್ನಲಿಟ್ಟರೂ
ನಮ್ಮ ಮನೆ, ಮಠಗಳಿಗೆ ಬೆಂಕಿಟ್ಟರೂ…
ನಮ್ಮ ಬಗ್ಗೆ, ಪ್ರೀತಿ ಬುಗ್ಗೆ, ಬತ್ತಿಲ್ಲವಲ್ಲ ಯಾಕೇ??
*

ಇಶ್ಟೊಂದು ವರ್ಷದಿ,
ಎಶ್ಟೊಂದು ಹರ್ಷದಿ,
ಈ ನಿಮ್ಮ ಕೂಡಿ, ಕಿತ್ತಾಡಿ, ಜೈಲು ಕಂಡರೂ…
ಇನ್ನು ಜೊತೆಗಿದ್ದೇವೆಲ್ಲ ಯಾಕೇ??
*

ಒಂಭತ್ತು ತಿಂಗಳು ಹೊತ್ತು,
ಕಡುಕಶ್ಟದಲಿ ಹೆತ್ತು,
ಹೊಟ್ಟೆ, ಬಟ್ಟೆ, ನೆತ್ತಿ ಕಟ್ಟಿ,
ವಿದ್ಯೆ, ಬುದ್ಧಿ ಕಲಿಸಿ,
ಓಟು ಹಾಕಿ – ನಿಮ್ಮನ್ನೆಲ್ಲ ಸಾಕಿ, ಸಲ್ವಿ,
ಮಂತ್ರಿ ಮಾಡಿದ್ದೇವಲ್ಲ ಯಾಕೇ??
*

ಈ ಮನೆ, ಮಠಗಳ
ಈ ಕೋಟೆ ಕೊತ್ತಲಗಳ
ಈ ಗುಡಿ ಗೋಪುರಗಳ
ಈ ಕೆರೆ, ಕುಂಟೆ, ಕಾಲುವೆ, ಡ್ಯಾಮುಗಳ ಕಟ್ಟಿ… ಕಟ್ಟಿ…
ಇನ್ನು ಹೊಲೆಮಾದಿಗರಾಗಿ,
ಉಳಿದಿವಲ್ಲ ಯಾಕೇ??
*

ಈ ನಿಮ್ಮ ಮಕ್ಕಳು, ಮೊಮ್ಮಕ್ಕಳನು ಎತ್ತಿ ಮುದ್ದಾಡಿ,
ಈ ನಿಮ್ಮ ಹೊಲ, ಗದ್ದೆ, ತೋಟಗಳನು ಉತ್ತಿ, ಭಿತ್ತಿ ಕಣಗಳ ಮಾಡಿ,
ಧವಸ, ಧಾನ್ಯಗಳ ಕೇರಿ, ತೂರಿ, ಹಸನು ಮಾಡಿ,
ಮೂಟೆ, ಮೂಟೆ, ಕಾಳು, ಕಡಿಗಳ ಹೊತ್ತು,
ಗುಮ್ಮೆ, ಗರ್ಸೆ, ಟಿಕ್ಕೆ, ಕಣಜಗಳ ತುಂಬಿದೆವಲ್ಲ ಯಾಕೇ?
*

ಏನೆಲ್ಲ ಬಹಿಷ್ಕಾರಗಳ ಮಧ್ಯೆ-
ಈ ನಮ್ಮ ನಾಡು, ನುಡಿ, ಸಂಸ್ಕೃತಿಯ ಉಳಿಸಿ, ಬೆಳೆಸಿದ್ದು ಯಾಕೇ?
ಈ ಗಿಡ, ಮರ, ಬಳ್ಳಿ, ಹಣ್ಣು, ಹೂವು, ವಂಶ, ಊರು ಬೆಳೆಸಿದ್ದು ಯಾಕೇ??
ನಿಮ್ಮೊಂದಿಗೆ ಕೂಡಿ ಬಾಳುವ ಹಂಬಲ,
ನಿಮ್ಮಂತಾಗಲು ಹೋಗಿ, ಹೋಗಿ,
ಇನ್ನು ಇಲ್ಲೇ ಹೊಲೆಗೇರಿಲಿದ್ದೇವೆಲ್ಲ ಯಾಕೆ?!
*

ಏನೆಲ್ಲ ಕಟ್ಟಿ, ಬೆಳೆಸಿ, ಉಳಿಸಿದ ನಾವು-
ಈಗ ಈ ಊರುಕೇರಿಯನು ಒಂದು ಮಾಡಿ,
ಮುರಿದ ಮನೆ, ಮನಗಳ, ಹಸನಾಗಿ, ಹೊಸದಾಗಿ,
ಮತ್ತೆ ಮತ್ತೆ ಕಟ್ಟಬಲ್ಲೆವೆಂಬಾ ಕೆಚ್ಚು, ಸಾಹಸ, ನಮ್ಮಲಿದೆಯಲ್ಲ ಯಾಕೇ??
ಈ ಹಳೇ ಸೂರ್‍ಯ, ಚಂದ್ರ, ನಕ್ಷತ್ರ ರಾಶಿಗಳನ್ನೆಲ್ಲ…
ಗುಡಿಸಿ, ಕುಪ್ಪೆ ಮಾಡಿ, ‘ಮಾದ್ಗಿಂಟ್ಲಿ’ ಕಟ್ಟಬಲ್ಲೆವು!!
ಈ ಭೂಮಿ, ಆಕಾಶದ ತುಂಬೆಲ್ಲ, ಹೊಸ ದೀಪಗಳ ಹಚ್ಚಬಲ್ಲೆವು!
*

‘ಯಾರಂದರು ನಮಗೆ? ನಾವಿಲ್ಲವೆಂದು?
ಸತ್ತ ದನವ ತಿಂದು ತಿಂದೂ…
ಎಂದೋ… ಸತ್ತಿರುವೆವೆಂದೂ…’
‘ಈ ನಮ್ಮ ಹೊಲಗೇರಿಲಿಂದು…
ಹಂದಿ, ನಾಯಿ, ಕತ್ತೆ, ಕುದುರೆ, ಇಲಿ, ಹೆಗ್ಗಣ, ನೊಣಗಳಂತೇ…
ಸತ್ತು ಸತ್ತು… ಬಿದ್ದಿರುವೆವೆಂದೂ…’
*

ಈಗೀಗ-ಸತ್ತ ದನವ ತಿನ್ನುವುದು ಕೈಬಿಟ್ಟು,
ಹೊಲೆಗೇರಿಲಿ… ಬದುಕುವುದಾ ಬಿಟ್ಟು,
ನಿಮ್ಮಕ್ಕ ಪಕ್ಕದಲ್ಲೇ ಬದುಕುವುದ ಕಲಿತ್ತಿದ್ದೇವೆ!
ಈಗೀಗ ಜಾತಿ, ಭೇದ ಮಾಡುವರನ್ನು, ಹುಡುಕುತ್ತಿದ್ದೇವೆ!
ನವರಂಧ್ರಗಳಿಗೆ, ಕೆತ್ತಿಕೆತ್ತಿ… ಬಗಣೆಗೂಟಗಳ ಬಡಿಯಲು,
ನಾವಿದ್ದೇವಲ್ಲ ಸಾಕೇ??
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...