ನಾವಿದ್ದೇವೆಲ್ಲ ಯಾಕೆ?

ನಾವಿದ್ದೇವೆಲ್ಲ ಯಾಕೆ?

ಚಿತ್ರ: ವಿಕಿ ಇಮೇಜಸ್
ಚಿತ್ರ: ವಿಕಿ ಇಮೇಜಸ್

ಸತ್ತ ದನವ ತಿಂದೂ ತಿಂದೂ
ನಾವಿನ್ನೂ ಸತ್ತಿಲ್ಲವಲ್ಲ ಯಾಕೆ?
ಯುಗಯುಗಗಳಿಂದಾ ಪಾಂಡವರಂತೇ…
ಹಗೆಗಳಾಗಿ, ಬದುಕಿದ್ದೇವೆಲ್ಲ ಯಾಕೆ?
*

ಹೊಲೆಗೇರಿಲಿದ್ದು,
ಯುಗಯುಗಗಳಿಂದಾ
ಸತ್ತ ದನವೇ ನಮಗಾಯಿತಲ್ಲ ಯಾಕೆ?
ಕರೆಬಾನಿಲಿ ಮುಳುಗೆದ್ದರೂ,
ಇವ್ರಿನ್ನು ಸತ್ತಿಲ್ಲವಲ್ಲ ಯಾಕೇ?
*

ಊರ ಹೊರಗಟ್ಟಿದರೂ
ಸತ್ತ ದನವ ತಿನ್ನಲಿಟ್ಟರೂ
ನಮ್ಮ ಮನೆ, ಮಠಗಳಿಗೆ ಬೆಂಕಿಟ್ಟರೂ…
ನಮ್ಮ ಬಗ್ಗೆ, ಪ್ರೀತಿ ಬುಗ್ಗೆ, ಬತ್ತಿಲ್ಲವಲ್ಲ ಯಾಕೇ??
*

ಇಶ್ಟೊಂದು ವರ್ಷದಿ,
ಎಶ್ಟೊಂದು ಹರ್ಷದಿ,
ಈ ನಿಮ್ಮ ಕೂಡಿ, ಕಿತ್ತಾಡಿ, ಜೈಲು ಕಂಡರೂ…
ಇನ್ನು ಜೊತೆಗಿದ್ದೇವೆಲ್ಲ ಯಾಕೇ??
*

ಒಂಭತ್ತು ತಿಂಗಳು ಹೊತ್ತು,
ಕಡುಕಶ್ಟದಲಿ ಹೆತ್ತು,
ಹೊಟ್ಟೆ, ಬಟ್ಟೆ, ನೆತ್ತಿ ಕಟ್ಟಿ,
ವಿದ್ಯೆ, ಬುದ್ಧಿ ಕಲಿಸಿ,
ಓಟು ಹಾಕಿ – ನಿಮ್ಮನ್ನೆಲ್ಲ ಸಾಕಿ, ಸಲ್ವಿ,
ಮಂತ್ರಿ ಮಾಡಿದ್ದೇವಲ್ಲ ಯಾಕೇ??
*

ಈ ಮನೆ, ಮಠಗಳ
ಈ ಕೋಟೆ ಕೊತ್ತಲಗಳ
ಈ ಗುಡಿ ಗೋಪುರಗಳ
ಈ ಕೆರೆ, ಕುಂಟೆ, ಕಾಲುವೆ, ಡ್ಯಾಮುಗಳ ಕಟ್ಟಿ… ಕಟ್ಟಿ…
ಇನ್ನು ಹೊಲೆಮಾದಿಗರಾಗಿ,
ಉಳಿದಿವಲ್ಲ ಯಾಕೇ??
*

ಈ ನಿಮ್ಮ ಮಕ್ಕಳು, ಮೊಮ್ಮಕ್ಕಳನು ಎತ್ತಿ ಮುದ್ದಾಡಿ,
ಈ ನಿಮ್ಮ ಹೊಲ, ಗದ್ದೆ, ತೋಟಗಳನು ಉತ್ತಿ, ಭಿತ್ತಿ ಕಣಗಳ ಮಾಡಿ,
ಧವಸ, ಧಾನ್ಯಗಳ ಕೇರಿ, ತೂರಿ, ಹಸನು ಮಾಡಿ,
ಮೂಟೆ, ಮೂಟೆ, ಕಾಳು, ಕಡಿಗಳ ಹೊತ್ತು,
ಗುಮ್ಮೆ, ಗರ್ಸೆ, ಟಿಕ್ಕೆ, ಕಣಜಗಳ ತುಂಬಿದೆವಲ್ಲ ಯಾಕೇ?
*

ಏನೆಲ್ಲ ಬಹಿಷ್ಕಾರಗಳ ಮಧ್ಯೆ-
ಈ ನಮ್ಮ ನಾಡು, ನುಡಿ, ಸಂಸ್ಕೃತಿಯ ಉಳಿಸಿ, ಬೆಳೆಸಿದ್ದು ಯಾಕೇ?
ಈ ಗಿಡ, ಮರ, ಬಳ್ಳಿ, ಹಣ್ಣು, ಹೂವು, ವಂಶ, ಊರು ಬೆಳೆಸಿದ್ದು ಯಾಕೇ??
ನಿಮ್ಮೊಂದಿಗೆ ಕೂಡಿ ಬಾಳುವ ಹಂಬಲ,
ನಿಮ್ಮಂತಾಗಲು ಹೋಗಿ, ಹೋಗಿ,
ಇನ್ನು ಇಲ್ಲೇ ಹೊಲೆಗೇರಿಲಿದ್ದೇವೆಲ್ಲ ಯಾಕೆ?!
*

ಏನೆಲ್ಲ ಕಟ್ಟಿ, ಬೆಳೆಸಿ, ಉಳಿಸಿದ ನಾವು-
ಈಗ ಈ ಊರುಕೇರಿಯನು ಒಂದು ಮಾಡಿ,
ಮುರಿದ ಮನೆ, ಮನಗಳ, ಹಸನಾಗಿ, ಹೊಸದಾಗಿ,
ಮತ್ತೆ ಮತ್ತೆ ಕಟ್ಟಬಲ್ಲೆವೆಂಬಾ ಕೆಚ್ಚು, ಸಾಹಸ, ನಮ್ಮಲಿದೆಯಲ್ಲ ಯಾಕೇ??
ಈ ಹಳೇ ಸೂರ್‍ಯ, ಚಂದ್ರ, ನಕ್ಷತ್ರ ರಾಶಿಗಳನ್ನೆಲ್ಲ…
ಗುಡಿಸಿ, ಕುಪ್ಪೆ ಮಾಡಿ, ‘ಮಾದ್ಗಿಂಟ್ಲಿ’ ಕಟ್ಟಬಲ್ಲೆವು!!
ಈ ಭೂಮಿ, ಆಕಾಶದ ತುಂಬೆಲ್ಲ, ಹೊಸ ದೀಪಗಳ ಹಚ್ಚಬಲ್ಲೆವು!
*

‘ಯಾರಂದರು ನಮಗೆ? ನಾವಿಲ್ಲವೆಂದು?
ಸತ್ತ ದನವ ತಿಂದು ತಿಂದೂ…
ಎಂದೋ… ಸತ್ತಿರುವೆವೆಂದೂ…’
‘ಈ ನಮ್ಮ ಹೊಲಗೇರಿಲಿಂದು…
ಹಂದಿ, ನಾಯಿ, ಕತ್ತೆ, ಕುದುರೆ, ಇಲಿ, ಹೆಗ್ಗಣ, ನೊಣಗಳಂತೇ…
ಸತ್ತು ಸತ್ತು… ಬಿದ್ದಿರುವೆವೆಂದೂ…’
*

ಈಗೀಗ-ಸತ್ತ ದನವ ತಿನ್ನುವುದು ಕೈಬಿಟ್ಟು,
ಹೊಲೆಗೇರಿಲಿ… ಬದುಕುವುದಾ ಬಿಟ್ಟು,
ನಿಮ್ಮಕ್ಕ ಪಕ್ಕದಲ್ಲೇ ಬದುಕುವುದ ಕಲಿತ್ತಿದ್ದೇವೆ!
ಈಗೀಗ ಜಾತಿ, ಭೇದ ಮಾಡುವರನ್ನು, ಹುಡುಕುತ್ತಿದ್ದೇವೆ!
ನವರಂಧ್ರಗಳಿಗೆ, ಕೆತ್ತಿಕೆತ್ತಿ… ಬಗಣೆಗೂಟಗಳ ಬಡಿಯಲು,
ನಾವಿದ್ದೇವಲ್ಲ ಸಾಕೇ??
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನೈಟ್ ಶಿಫ್ಟ್
Next post ದೇವಯಾನಿ

ಸಣ್ಣ ಕತೆ

  • ಎರಡು ರೆಕ್ಕೆಗಳು

    ಪಶ್ಚಿಮದಲ್ಲಿ ಸೂರ್ಯ ಮುಳುಗುತ್ತಿದ್ದ ಆಕಾರದ ತುಂಬ ಒಂಥರಾ ಕೆಂಬಣ್ಣ ತುಂಬಿಕೊಂಡಿತ್ತು. ಆ ಸಂಜೆಯಲ್ಲಿ ತಣ್ಣನೆಯ ಗಾಳಿ ಆ ಭಾವನೆ ಬಂಡೆಯ ಕೋಟೆಯ ಮೇಲೆ ಹಾಯ್ದು ಹೋಯಿತು. ಎತ್ತರದ… Read more…

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

cheap jordans|wholesale air max|wholesale jordans|wholesale jewelry|wholesale jerseys