Home / ಕವನ / ಕವಿತೆ / ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು
ಕೋರಿ ಗಂಗಪ್ಪ ಸಾವುಕಾರನು ||ಪ||

ಧಾರುಣಿಯೊಳು ಸಣ್ಣ ಊರು ಕರಡೀಗುಡ್ಡ
ಹಾರೈಸುತ ವ್ಯವಹಾರಕ್ಹೋಗಿ ಒಬ್ಬ
ವೀರ ಜಂಗಮನ ಹೇಣತಿ ಕೆಣಕಲು
ಮಾರಿಗೋಲಿಯೊಳು ಮರಣಹೊಂದಿದಾ ||ಅ.ಪ.||

ಸನುಮತಿಯಲ್ಲಿ ಸಾಧು ಸಜ್ಜನ ಸಂಪ್ರೀತನು
ಧನ ಸಿರಿ ಕನಕ ವಸ್ತು ಕೈಗೊಂಡು ಮೆರೆವ ಸಂಪ್ರೀತನು
ಗಣಗಣರತ್ನ ವಾಣಿಜ್ಯ ಕುಲಜಾತನು
ಅನುದಿನ ಕೂಡಿ ನಡೆವ ಸ್ನೇಹಿತ ಮಾಂತಯ್ಯನ ಪ್ರೀತನು
ಏನು ಹೇಳಲಿ ತನಗಾಗುವ ಹಾನಿಯು
ಕಣಗಾಣದೆ ಕೆಟ್ಟ ಹೆಣ್ಣಿನ ಸಂಗದಿ
ಮುಣ್ಣುಗೂಡಿಸಿ ಮಾಯದ ಉರ್ಲಗಣ್ಣಿಗೆ
ವಣ ಅಪಮೃತ್ಯುವಿನಿಂದ ಸತ್ತುಹೋದನೈ ||೧||

ಜಡಬುದ್ಧಿಗೆ ಜನ್ಮಾಂತರ ವಿಧಿಕೃತ ಕೂಡಿತು
ತಡೆಯದೆ ವಿಷಯದಿ ಮಾಯವ
ಒಡಲೊಳ್ ಮತ್ಸರ ಮೂಡಿತು
ಅಡಗಿಮಾಡಿ ಉಣಬಸಬೇಕೆಂಬುದು ಕಲಹವ ದೂಡಿತು
ಪ್ರೀತಿಯೆಡೆಗೊಂಡು ಅರಿವಿಲ್ಲದ ಕಲಹಕ ದೂಡಿತು
ನಡೆತಪ್ಪಿತುಯೆಂದೆನೆನುತಲೆ ಜಂಗಮ
ಕಡುರೋಷದಿ ಹಿಡಿದೆದ್ದು ಖಡ್ಲದಿಂ
ಕಡಿಯಲು ಪಕ್ಕದಿ ಎಲುಬು ಮುರಿದು ಶಿರ
ಸಿಡಿಮಿಡಿಗೊಳ್ಳುತಲಿ ಪೊಡವಿಗುದುರಿತೌ ||೨||

ಕೆಲ ಬಲದವರೆಚ್ಚಿಸಲು ಪೋಲೀಸ ಕೇಳಿದಾ
ಅಳವಳಗೊಳುತಲಿ ಮನದೊಳಗತಿ ಕೋಪವ ತಾಳಿದಾ
ಬಲುಗಡ ಕುಲಕರ್ಣಿಗಳ ಕರಿಯಂತ್ಹೇಳಿದಾ
ಒಳಗಿಂದೊಳಗೆ ಬರೆದು ಹುಜೂರರಿಗೆ ರೀಪೋರ್ಟವ ಮಾಡಿದಾ
ಒಳಮಾತಿಲೆ ಅಯ್ಯನ ಕೈ ಖಡ್ಗವ ಕೆಳಗಿಳುಹಿಸಿ
ಎಳೆದೊಯ್ದು ಚಾವಾಡಿಗೆ ಸೆಳೆದು ಪಿಚಂಡಿಯ ಬಿಗಿದು ಬೇಗನೆ
ಕಳುಹಿಸಿ ಸುದ್ದಿ ಹುಬ್ಬಳ್ಳಿಯ ಸ್ಥಳಕ್ಕೆ ||೩||

ಸುದ್ದಿ ಕೇಳಿ ಹುಚ್ಚಪ್ಪತಮ್ಮ ಅತಿ ದುಃಖದಿ ಎದಿ ಬಾಯಿ
ಗುದ್ದಿಕೊಳ್ಳುತ ಬಿದ್ದ್ಹೊರಳಿದ ಭೂಮಿಗೆ ಶೋಕದಿ ಸತಿ ಸುತ-
ರಿದ್ದರಾತ್ಮ ಬಾಂಧವರು ಬಂದರಲ್ಲೇ ರೌದ್ರದಿ-
ಸಧ್ಯಕ್ಕ್ಹೋಗಿ ಹೆಣ ಹುಗಿಯಲು ನಡೆದರು ದಗ್ಧದೀ
ಮಧ್ಯರಾತ್ರಿಯಲೆದ್ದು ಶ್ರವಕ ಮಣ್ಣ
ಮುದ್ದಿಯೊಳಗೆ ಮುಚ್ಚಿಟ್ಟ ವಾರ್ತಿಯದು
ಚೋದ್ಯವಾಯಿತು ಶಿಶುನಾಳಧೀಶನಿಗೆ
ತಿದ್ದಿ ನಿನಗೆ ನಾ ತಿಳಿಸಿದೆ ಗೆಳತಿ ||೪||

****

 

Tagged:

Leave a Reply

Your email address will not be published. Required fields are marked *

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಕೀಲಿಕರಣ: ಎಂ.ಎನ್.ಎಸ್. ರಾವ್