Home / ಕವನ / ಕವಿತೆ / ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು
ಕೋರಿ ಗಂಗಪ್ಪ ಸಾವುಕಾರನು ||ಪ||

ಧಾರುಣಿಯೊಳು ಸಣ್ಣ ಊರು ಕರಡೀಗುಡ್ಡ
ಹಾರೈಸುತ ವ್ಯವಹಾರಕ್ಹೋಗಿ ಒಬ್ಬ
ವೀರ ಜಂಗಮನ ಹೇಣತಿ ಕೆಣಕಲು
ಮಾರಿಗೋಲಿಯೊಳು ಮರಣಹೊಂದಿದಾ ||ಅ.ಪ.||

ಸನುಮತಿಯಲ್ಲಿ ಸಾಧು ಸಜ್ಜನ ಸಂಪ್ರೀತನು
ಧನ ಸಿರಿ ಕನಕ ವಸ್ತು ಕೈಗೊಂಡು ಮೆರೆವ ಸಂಪ್ರೀತನು
ಗಣಗಣರತ್ನ ವಾಣಿಜ್ಯ ಕುಲಜಾತನು
ಅನುದಿನ ಕೂಡಿ ನಡೆವ ಸ್ನೇಹಿತ ಮಾಂತಯ್ಯನ ಪ್ರೀತನು
ಏನು ಹೇಳಲಿ ತನಗಾಗುವ ಹಾನಿಯು
ಕಣಗಾಣದೆ ಕೆಟ್ಟ ಹೆಣ್ಣಿನ ಸಂಗದಿ
ಮುಣ್ಣುಗೂಡಿಸಿ ಮಾಯದ ಉರ್ಲಗಣ್ಣಿಗೆ
ವಣ ಅಪಮೃತ್ಯುವಿನಿಂದ ಸತ್ತುಹೋದನೈ ||೧||

ಜಡಬುದ್ಧಿಗೆ ಜನ್ಮಾಂತರ ವಿಧಿಕೃತ ಕೂಡಿತು
ತಡೆಯದೆ ವಿಷಯದಿ ಮಾಯವ
ಒಡಲೊಳ್ ಮತ್ಸರ ಮೂಡಿತು
ಅಡಗಿಮಾಡಿ ಉಣಬಸಬೇಕೆಂಬುದು ಕಲಹವ ದೂಡಿತು
ಪ್ರೀತಿಯೆಡೆಗೊಂಡು ಅರಿವಿಲ್ಲದ ಕಲಹಕ ದೂಡಿತು
ನಡೆತಪ್ಪಿತುಯೆಂದೆನೆನುತಲೆ ಜಂಗಮ
ಕಡುರೋಷದಿ ಹಿಡಿದೆದ್ದು ಖಡ್ಲದಿಂ
ಕಡಿಯಲು ಪಕ್ಕದಿ ಎಲುಬು ಮುರಿದು ಶಿರ
ಸಿಡಿಮಿಡಿಗೊಳ್ಳುತಲಿ ಪೊಡವಿಗುದುರಿತೌ ||೨||

ಕೆಲ ಬಲದವರೆಚ್ಚಿಸಲು ಪೋಲೀಸ ಕೇಳಿದಾ
ಅಳವಳಗೊಳುತಲಿ ಮನದೊಳಗತಿ ಕೋಪವ ತಾಳಿದಾ
ಬಲುಗಡ ಕುಲಕರ್ಣಿಗಳ ಕರಿಯಂತ್ಹೇಳಿದಾ
ಒಳಗಿಂದೊಳಗೆ ಬರೆದು ಹುಜೂರರಿಗೆ ರೀಪೋರ್ಟವ ಮಾಡಿದಾ
ಒಳಮಾತಿಲೆ ಅಯ್ಯನ ಕೈ ಖಡ್ಗವ ಕೆಳಗಿಳುಹಿಸಿ
ಎಳೆದೊಯ್ದು ಚಾವಾಡಿಗೆ ಸೆಳೆದು ಪಿಚಂಡಿಯ ಬಿಗಿದು ಬೇಗನೆ
ಕಳುಹಿಸಿ ಸುದ್ದಿ ಹುಬ್ಬಳ್ಳಿಯ ಸ್ಥಳಕ್ಕೆ ||೩||

ಸುದ್ದಿ ಕೇಳಿ ಹುಚ್ಚಪ್ಪತಮ್ಮ ಅತಿ ದುಃಖದಿ ಎದಿ ಬಾಯಿ
ಗುದ್ದಿಕೊಳ್ಳುತ ಬಿದ್ದ್ಹೊರಳಿದ ಭೂಮಿಗೆ ಶೋಕದಿ ಸತಿ ಸುತ-
ರಿದ್ದರಾತ್ಮ ಬಾಂಧವರು ಬಂದರಲ್ಲೇ ರೌದ್ರದಿ-
ಸಧ್ಯಕ್ಕ್ಹೋಗಿ ಹೆಣ ಹುಗಿಯಲು ನಡೆದರು ದಗ್ಧದೀ
ಮಧ್ಯರಾತ್ರಿಯಲೆದ್ದು ಶ್ರವಕ ಮಣ್ಣ
ಮುದ್ದಿಯೊಳಗೆ ಮುಚ್ಚಿಟ್ಟ ವಾರ್ತಿಯದು
ಚೋದ್ಯವಾಯಿತು ಶಿಶುನಾಳಧೀಶನಿಗೆ
ತಿದ್ದಿ ನಿನಗೆ ನಾ ತಿಳಿಸಿದೆ ಗೆಳತಿ ||೪||

****

 

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...