Home / ಕವನ / ಕವಿತೆ / ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು

ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು
ಕೋರಿ ಗಂಗಪ್ಪ ಸಾವುಕಾರನು ||ಪ||

ಧಾರುಣಿಯೊಳು ಸಣ್ಣ ಊರು ಕರಡೀಗುಡ್ಡ
ಹಾರೈಸುತ ವ್ಯವಹಾರಕ್ಹೋಗಿ ಒಬ್ಬ
ವೀರ ಜಂಗಮನ ಹೇಣತಿ ಕೆಣಕಲು
ಮಾರಿಗೋಲಿಯೊಳು ಮರಣಹೊಂದಿದಾ ||ಅ.ಪ.||

ಸನುಮತಿಯಲ್ಲಿ ಸಾಧು ಸಜ್ಜನ ಸಂಪ್ರೀತನು
ಧನ ಸಿರಿ ಕನಕ ವಸ್ತು ಕೈಗೊಂಡು ಮೆರೆವ ಸಂಪ್ರೀತನು
ಗಣಗಣರತ್ನ ವಾಣಿಜ್ಯ ಕುಲಜಾತನು
ಅನುದಿನ ಕೂಡಿ ನಡೆವ ಸ್ನೇಹಿತ ಮಾಂತಯ್ಯನ ಪ್ರೀತನು
ಏನು ಹೇಳಲಿ ತನಗಾಗುವ ಹಾನಿಯು
ಕಣಗಾಣದೆ ಕೆಟ್ಟ ಹೆಣ್ಣಿನ ಸಂಗದಿ
ಮುಣ್ಣುಗೂಡಿಸಿ ಮಾಯದ ಉರ್ಲಗಣ್ಣಿಗೆ
ವಣ ಅಪಮೃತ್ಯುವಿನಿಂದ ಸತ್ತುಹೋದನೈ ||೧||

ಜಡಬುದ್ಧಿಗೆ ಜನ್ಮಾಂತರ ವಿಧಿಕೃತ ಕೂಡಿತು
ತಡೆಯದೆ ವಿಷಯದಿ ಮಾಯವ
ಒಡಲೊಳ್ ಮತ್ಸರ ಮೂಡಿತು
ಅಡಗಿಮಾಡಿ ಉಣಬಸಬೇಕೆಂಬುದು ಕಲಹವ ದೂಡಿತು
ಪ್ರೀತಿಯೆಡೆಗೊಂಡು ಅರಿವಿಲ್ಲದ ಕಲಹಕ ದೂಡಿತು
ನಡೆತಪ್ಪಿತುಯೆಂದೆನೆನುತಲೆ ಜಂಗಮ
ಕಡುರೋಷದಿ ಹಿಡಿದೆದ್ದು ಖಡ್ಲದಿಂ
ಕಡಿಯಲು ಪಕ್ಕದಿ ಎಲುಬು ಮುರಿದು ಶಿರ
ಸಿಡಿಮಿಡಿಗೊಳ್ಳುತಲಿ ಪೊಡವಿಗುದುರಿತೌ ||೨||

ಕೆಲ ಬಲದವರೆಚ್ಚಿಸಲು ಪೋಲೀಸ ಕೇಳಿದಾ
ಅಳವಳಗೊಳುತಲಿ ಮನದೊಳಗತಿ ಕೋಪವ ತಾಳಿದಾ
ಬಲುಗಡ ಕುಲಕರ್ಣಿಗಳ ಕರಿಯಂತ್ಹೇಳಿದಾ
ಒಳಗಿಂದೊಳಗೆ ಬರೆದು ಹುಜೂರರಿಗೆ ರೀಪೋರ್ಟವ ಮಾಡಿದಾ
ಒಳಮಾತಿಲೆ ಅಯ್ಯನ ಕೈ ಖಡ್ಗವ ಕೆಳಗಿಳುಹಿಸಿ
ಎಳೆದೊಯ್ದು ಚಾವಾಡಿಗೆ ಸೆಳೆದು ಪಿಚಂಡಿಯ ಬಿಗಿದು ಬೇಗನೆ
ಕಳುಹಿಸಿ ಸುದ್ದಿ ಹುಬ್ಬಳ್ಳಿಯ ಸ್ಥಳಕ್ಕೆ ||೩||

ಸುದ್ದಿ ಕೇಳಿ ಹುಚ್ಚಪ್ಪತಮ್ಮ ಅತಿ ದುಃಖದಿ ಎದಿ ಬಾಯಿ
ಗುದ್ದಿಕೊಳ್ಳುತ ಬಿದ್ದ್ಹೊರಳಿದ ಭೂಮಿಗೆ ಶೋಕದಿ ಸತಿ ಸುತ-
ರಿದ್ದರಾತ್ಮ ಬಾಂಧವರು ಬಂದರಲ್ಲೇ ರೌದ್ರದಿ-
ಸಧ್ಯಕ್ಕ್ಹೋಗಿ ಹೆಣ ಹುಗಿಯಲು ನಡೆದರು ದಗ್ಧದೀ
ಮಧ್ಯರಾತ್ರಿಯಲೆದ್ದು ಶ್ರವಕ ಮಣ್ಣ
ಮುದ್ದಿಯೊಳಗೆ ಮುಚ್ಚಿಟ್ಟ ವಾರ್ತಿಯದು
ಚೋದ್ಯವಾಯಿತು ಶಿಶುನಾಳಧೀಶನಿಗೆ
ತಿದ್ದಿ ನಿನಗೆ ನಾ ತಿಳಿಸಿದೆ ಗೆಳತಿ ||೪||

****

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...